Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 27 ಫೆಬ್ರವರಿ 2020 (09:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಪ್ರಾಮಾಣಿಕ ಕೆಲಸಕ್ಕೆ ತಕ್ಕ ಫಲ ಸಿಗಲಿದೆ. ಉದ್ಯೋಗದಲ್ಲಿ ಮುಂಬಡ್ತಿ ಯೋಗವಿದೆ. ನ್ಯಾಯಾಲಯದ ತೀರ್ಪುಗಳು ನಿಮ್ಮ ಪರವಾಗಿ ಬರಲಿದೆ. ಹಣಕಾಸಿನ ವಿಚಾರವಾಗಿ ಕೊಂಚ ಕಷ್ಟವಾಗಬಹುದು. ಆದರೂ ಮಾನಸಿಕವಾಗಿ ನೆಮ್ಮದಿಯಿರಲಿದೆ.

ವೃಷಭ: ಸಕಾಲದಲ್ಲಿ ಧನಾಗಮನವಾಗುವುದರಿಂದ ಕಾರ್ಯಸಾಧನೆಯಾಗಲಿದೆ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಿ. ವಿದ್ಯಾರ್ಥಿಗಳಿಗೆ ಮುನ್ನಡೆ ಗಳಿಸಲು ಸೂಕ್ತ ಅವಕಾಶಗಳು ಒದಗಿಬರಲಿವೆ. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡಲಿದ್ದೀರಿ.

ಮಿಥುನ: ಕೆಲಸ ಕಾರ್ಯದ ಒತ್ತಡದಿಂದಾಗಿ ತಾಳ್ಮೆ ಕಳೆದುಕೊಳ್ಳುವಂತಹ ಸಂದರ್ಭಗಳು ಬರಲಿವೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ. ಕಳೆದು ಹೋದ ವಸ್ತುಗಳು ಮರಳಿ ಕೈ ಸೇರಲಿವೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ.

ಕರ್ಕಟಕ: ನೂತನ ವಾಹನ ಖರೀದಿಗೆ ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಸ್ಥಿತಿ ಗತಿ ಸುಧಾರಣೆಯಾಗುವುದರಿಂದ ಹೊಸ ವ್ಯವಹಾರಗಳಿಗೆ ಕೈ ಹಾಕಬಹುದು. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.

ಸಿಂಹ: ಇಷ್ಟ ಮಿತ್ರರೊಂದಿಗೆ ಪ್ರವಾಸಾದಿಗಳಿಗೆ ಸಾಕಷ್ಟು ಹಣ ಖರ್ಚು ಮಾಡಲಿದ್ದೀರಿ. ಹೊಸದಾಗಿ ಆರಂಭಿಸಿದ ಉದ್ಯಮದಿಂದ ಲಾಭ ಕೈಗೆ ಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಎಷ್ಟೇ ದುಡಿದರೂ ನಿಮ್ಮ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗುತ್ತಿಲ್ಲ ಎಂಬ ಅಸಮಾಧಾನ ಕಾಡಲಿದೆ. ಬಾಳ ಸಂಗಾತಿಯೊಂದಿಗೆ ಇಷ್ಟ ಸ್ಥಳಕ್ಕೆ ಭೇಟಿ ನೀಡಲಿದ್ದೀರಿ. ವಿದ್ಯಾರ್ಥಿಗಳಿಗೆ ಆಲಸ್ಯತನದಿಂದ ಹಿನ್ನಡೆಯಾಗಲಿದೆ. ದುರ್ಜನರ ಸಂಗದಿಂದ ದೂರವಿರಿ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಮೆಚ್ಚುಗೆ ಗಳಿಸಲಿದ್ದೀರಿ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡರೆ ಮುನ್ನಡೆ ಸಿಗುವುದು. ವಿವಾಹ ಪ್ರಸ್ತಾಪಗಳಿಗೆ ಮುನ್ನಡೆ ಸಿಗಲಿದೆ. ನೌಕರ ವರ್ಗದವರಿಗೆ ವರ್ಗಾವಣೆ ಭೀತಿಯಿದೆ.

ವೃಶ್ಚಿಕ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸದ ವಾತಾವರಣವಿರಲಿದೆ. ಆದರೆ ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ, ಆರ್ಥಿಕವಾಗಿ ಎಚ್ಚರಿಕೆಯಿಂದಿರಬೇಕಾದ ದಿನ. ಹಿರಿಯರಿಗೆ ಪ್ರವಾಸದ ಯೋಗವಿರಲಿದೆ.

ಧನು: ಗೃಹ ಸಂಬಂಧೀ ಕೆಲಸಗಳಲ್ಲಿ ಮುಳುಗಿ ಹೋಗಲಿದ್ದೀರಿ. ಸಹೋದರರೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಸಂಗಾತಿಯ ಮಾತಿಗೆ ಕಿವಿಗೊಡಿ. ಬಂಧು ಮಿತ್ರರನ್ನು ಭೇಟಿಯಾಗುವ ಯೋಗವಿದೆ. ದೇವರ ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ.

ಮಕರ: ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಕೀರ್ತಿ, ಉನ್ನತ ಸ್ಥಾನ ಮಾನದ ಯೋಗವಿದೆ. ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ವರ್ಗಾವಣೆಯ ಭೀತಿಯಿದೆ. ಚಿನ್ನಾಭರಣ ಖರೀದಿಯಿಂದ ಲಾಭವಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಕುಂಭ: ದಾಂಪತ್ಯದಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಮೂಡಿಬರಲಿದೆ. ಇದನ್ನು ಸರಿದೂಗಿಸಿಕೊಂಡು ತಾಳ್ಮೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಮಕ್ಕಳ ವಿಚಾರದಲ್ಲಿ ಭವಿಷ್ಯದ ಯೋಜನೆ ರೂಪಿಸುವಿರಿ. ನೂತನ ಗೃಹ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಬಹುದು.

ಮೀನ: ನಿಮ್ಮ ಗೊಂದಲದ ಮನಸ್ಥಿತಿಯಿಂದ ಕಾರ್ಯಕ್ಷೇತ್ರದಲ್ಲಿ ಉನ್ನತ ಅವಕಾಶವನ್ನು ಕಳೆದುಕೊಳ್ಳಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸಿದರೆ ಉತ್ತಮ. ಅವಿವಾಹಿತರಿಗೆ ಅನಿರೀಕ್ಷಿತ ರೂಪದಲ್ಲಿ ವಿವಾಹ ಸಂಬಂಧ ಹುಡುಕಿಕೊಂಡು ಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹನುಮಾನ್ ಚಾಲೀಸಾ ಓದುವುದರ ಲಾಭಗಳು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ ಈ ಒಂದು ವಸ್ತು ತಂದಿಟ್ಟರೆ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಮುಂದಿನ ಸುದ್ದಿ
Show comments