Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 29 ಫೆಬ್ರವರಿ 2020 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬರಬೇಕಿದ್ದ ಬಾಕಿ ಹಣ ಪಾವತಿಯಾಗುವುದರಿಂದ ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ವೃತ್ತಿರಂಗದಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣವಿರಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಮಹಿಳೆಯರಿಗೆ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗಲಿದೆ. ಬಂಧು ವರ್ಗದವರಿಂದ ಚಾಡಿ ಮಾತುಗಳನ್ನು ಕೇಳಬೇಕಾದೀತು. ವಾದ ವಿವಾದಗಳಿಂದ ಮನಸ್ಸಿಗೆ ಕಿರಿ ಕಿರಿಯಾಗಲಿದೆ. ವಿದ್ಯಾರ್ಥಿಗಳಿಗೆ ಪ್ರವಾಸ ಮಾಡುವ ಯೋಗವಿದೆ. ಮಾನಸಿಕವಾಗಿ ಕ್ಲೇಶಗಳು ಹುಟ್ಟಿಕೊಳ‍್ಳಲಿದೆ.

ಮಿಥುನ: ಸಾಹಿತ್ಯ, ಮನರಂಜನಾ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ ತೋರಿಬರಲಿದೆ. ಆರ್ಥಿಕವಾಗಿ ಸಾಕಷ್ಟು ಆದಾಯ ಇರುವುದರಿಂದ ಹಣಕಾಸಿಗೆ ತೊಂದರೆಯಾಗದು. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯಿರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕರ್ಕಟಕ: ಆರ್ಥಿಕವಾಗಿ ನಾನಾ ರೀತಿಯ ಖರ್ಚು ವೆಚ್ಚಗಳು ಕಂಡುಬರಲಿದ್ದು, ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರ್ತಿ ಮಾಡಲು ತೊಂದರೆಯಾಗಬಹುದು. ಸಾಂಸಾರಿಕವಾಗಿ ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಬಹುದು. ನವವಿವಾಹಿತರು ಸಂತಸದ ಕ್ಷಣ ಕಳೆಯಿರಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆ ಕಳೆದುಕೊಳ್ಳುವಂತಹ ಪರಿಸ್ಥಿತಿ ಎದುರಾಗಲಿದೆ. ಆದರೆ ಕೋಪದ ಕೈಗೆ ಬುದ್ಧಿ ಕೊಟ್ಟು ನಿರ್ಧಾರ ತೆಗೆದುಕೊಳ್ಳಬೇಡಿ. ಸಂಗಾತಿಯ ಹಿತ ಮಾತುಗಳು ಮನಸ್ಸಿಗೆ ನೆಮ್ಮದಿ ಕೊಡಲಿದೆ. ಕುಲದೇವರ ಪ್ರಾರ್ಥನೆ ಮಾಡುವುದರಿಂದ ಶುಭವಾಗುವುದು.

ಕನ್ಯಾ: ಮನೆಗೆ ಅನಿರೀಕ್ಷಿತವಾಗಿ ಬರುವ ಬಂಧು ಮಿತ್ರರಿಂದ ಮನಸ್ಸಿಗೆ ಸಂತಸವಾಗಲಿದೆ. ವಾಸ ಸ್ಥಳ ಬದಲಾವಣೆಗೆ ಚಿಂತನೆ ನಡೆಸುವಿರಿ. ಆರೋಗ್ಯದಲ್ಲಿ ಶೀತ ಸಂಬಂಧೀ ಸಮಸ್ಯೆ ಕಂಡುಬರಬಹುದು. ಅಂದುಕೊಂಡ ಕೆಲಸಗಳಿಗೆ ವಿಘ‍್ನ ಎದುರಾಗಬಹುದು.

ತುಲಾ: ಸಂಗಾತಿಯ ಬಹುದಿನಗಳ ಕನಸು ನನಸು ಮಾಡಲಿದ್ದಾರೆ. ಕೆಳ ಹಂತದ ನೌಕರರಿಗೆ ವರ್ಗಾವಣೆಯ ಸಾಧ್ಯತೆಯಿದೆ. ಸಂತಾನಾಪೇಕ್ಷಿತ ದಂಪತಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ದೇವರ ‍ಪ್ರಾರ್ಥನೆ ಮಾಡಿ.

ವೃಶ್ಚಿಕ: ಆರ್ಥಿಕವಾಗಿ ಸಾಕಷ್ಟು ಧನಾದಾಯ ಬರುವುದರಿಂದ ಅಂದುಕೊಂಡು ಕೆಲಸಗಳನ್ನು ನಿರ್ವಿಘ್ನವಾಗಿ ನೆರವೇರಿಸುವಿರಿ. ಸಾಲಗಾರರ ಕಾಟ ತಪ್ಪಲಿದೆ. ರಾಜಕೀಯ ವರ್ಗದವರಿಗೆ ಸ್ಥಾನ ಉಳಿಸಿಕೊಳ್ಳಲು ಹೋರಾಡಬೇಕಾಗುತ್ತದೆ. ಹಿರಿಯರ ಸಲಹೆಗೆ ಕಿವಿಗೊಡಿ.

ಧನು: ಶನಿಯ ಪ್ರತಿಕೂಲ ಪರಿಣಾಮದಿಂದ ಕೂಡಿಟ್ಟದ ಹಣ ನೀರಿನಂತೆ ಖರ್ಚಾಗಲಿದೆ. ವಿದ್ಯಾರ್ಥಿಗಳಿಗೆ ಆಲಸ್ಯತನವೇ ಶತ್ರುವಾಗಲಿದೆ. ವ್ಯವಹಾರದಲ್ಲಿ ನಯವಂಚಕರ ಬಗ್ಗೆ ಎಚ್ಚರಿಕೆಯಿಂದಿರಿ. ತಾಂತ್ರಿಕ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸವಿರಲಿದೆ.

ಮಕರ: ವಿವಾಹಿತರಿಗೆ ಮನಸ್ಸಿಗೆ ಖುಷಿಕೊಡುವ ಸುದ್ದಿ ಸಿಗಲಿದೆ. ನಿಮ್ಮ ದುಡುಕು ಮಾತಿನಿಂದ ಪ್ರೀತಿ ಪಾತ್ರರ ಮನಸ್ಸಿಗೆ ನೋವಾಗಬಹುದು. ಸಂಗಾತಿಗೆ ಉಡುಗೊರೆ ನೀಡಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸುವಿರಿ. ಮನೆ, ಭೂ ಖರೀದಿಗೆ ಇದು ಸಕಾಲ. ಆರ್ಥಿಕವಾಗಿ ಧನಾದಾಯ ಉತ್ತಮವಾಗಿರಲಿದೆ. ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ. ಪ್ರೇಮಿಗಳ ಪಾಲಿಗೆ ಶುಭ ದಿನವಾಗಿರಲಿದೆ.

ಮೀನ: ಹೊಸ ನೆಂಟಸ್ತಿಕೆಗಳು ಕೂಡಿಬರಲಿದೆ. ವಾಹನ ಸವಾರರಿಗೆ ಚಾಲನೆಯಲ್ಲಿ ಎಚ್ಚರಿಕೆಯಿಂದಿರುವುದು ಅಗತ್ಯ. ನೀರಿಗಾಗಿ ನೆರೆಹೊರೆಯವರೊಂದಿಗೆ ಮನಸ್ತಾಪವಾದೀತು. ಹೊಸ ವೃತ್ತಿಗೆ ಚಾಲನೆ ನೀಡಲು ಇದು ಸಕಾಲ. ಕಿರು ಸಂಚಾರ ಯೋಗವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments