Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 2 ಮಾರ್ಚ್ 2020 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೇವತಾ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ವೈಯಕ್ತಿಕವಾಗಿ ದೇಹಾರೋಗ್ಯದ ಬಗ್ಗೆ ಗಮನವಿರಲಿ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕಾರ್ಯದೊತ್ತಡವಿರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ವೃಷಭ: ವಿದ್ಯಾರ್ಥಿಗಳಲ್ಲಿ ಉತ್ಸಾಹ ಕಂಡುಬರಲಿದೆ. ವೃತ್ತಿರಂಗದಲ್ಲಿ ನಿಮಗರಿವಿಲ್ಲದಂತೆಯೇ ನಡೆಯುವ ತಪ್ಪುಗಳಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗುವಿರಿ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಮಿಥುನ: ಸಾಂಸಾರಿಕವಾಗಿ ಕುಟುಂಬ ಸದಸ್ಯರ ನಡುವೆ ಭಿನ್ನಾಭಿಪ್ರಾಯ ತಲೆದೋರಲಿದ್ದು, ಮಾನಸಿಕವಾಗಿ ನೆಮ್ಮದಿ ಇರದು. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆಯಿರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಪ್ರಗತಿ ಕಂಡುಬರಲಿದೆ. ಸ್ವಂತ ವ್ಯಾಪಾರ ನಡೆಸುವವರಿಗೆ ಆರ್ಥಿಕವಾಗಿ ಮುನ್ನಡೆ ಸಿಗಲಿದೆ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ. ವಾಹನ ಸವಾರರು ಎಚ್ಚರವಾಗಿರಿ.

ಸಿಂಹ: ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚಿನ ಅಭಿವೃದ್ಧಿ ಕಂಡುಬರುವುದು. ವೈವಾಹಿಕ ಜೀವನದಲ್ಲಿ ಕೆಲವೊಂದು ಭಿನ್ನಾಭಿಪ್ರಾಯಗಳು ಸಾಮಾನ್ಯ. ಆದರೆ ಸಂಯಮದಿಂದ ವರ್ತಿಸದಿದ್ದರೆ ಸಂಬಂಧ ಹಾಳಾದೀತು. ಉದ್ಯೋಗದಲ್ಲಿ ಮುನ್ನಡೆಯಿರಲಿದೆ.

ಕನ್ಯಾ: ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸುವಿರಿ. ಮನೆ ಕಟ್ಟುವ ಕೆಲಸಕ್ಕೆ ಕೈ ಹಾಕಿದ್ದರೆ ಮುನ್ನಡೆ ಸಿಗುವುದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಸರಕಾರಿ ಉದ್ಯೋಗಿಗಳಿಗೆ ವರ್ಗಾವಣೆಯ ಭೀತಿಯಿರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ತುಲಾ: ಮಿತ್ರರಿಂದಾಗಿ ಕಾರ್ಯಸಾಧನೆಯಾಗಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಹಿರಿಯರ ಸಲಹೆ ಪಥ್ಯವಾಗದೇ ಹೋಗಬಹುದು. ಸಂಗಾತಿಯ ಮನದಾಸೆ ಪೂರೈಸುವಿರಿ. ಮಹಿಳೆಯರಿಗೆ ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರಶಂಸೆ ಸಿಗಲಿದೆ.

ವೃಶ್ಚಿಕ: ಕನ್ಯಾಮಣಿಗಳಿಗೆ ವೈವಾಹಿಕ ಸಂಬಂಧಗಳು ಹುಡುಕಿಕೊಂಡು ಬರಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆಬರುವುದು. ಪ್ರಾಮಾಣಿಕವಾಗಿದ್ದರೂ ನಿಮ್ಮ ಸತ್ವ ಪರೀಕ್ಷೆ ನಡೆಯಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಧನು: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಮಕ್ಕಳೊಂದಿಗೆ ಅನಗತ್ಯ ವಾದ ವಿವಾದ ಮಾಡಿಕೊಳ್ಳಬೇಡಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮಕರ: ಪಾಲು ಬಂಡವಾಳ ವ್ಯವಹಾರ ಮಾಡುವವರಿಗೆ ವ್ಯವಹಾರದಲ್ಲಿ ಸಮಸ್ಯೆ ಕಂಡುಬಂದೀತು. ಕ್ರೀಡಾ ಕ್ಷೇತ್ರದಲ್ಲಿರುವವರಿಗೆ ಕೊಂಚ ಹಿನ್ನಡೆಯಾದೀತು. ಮಕ್ಕಳ ಆರೋಗ್ಯದ ಬಗ್ಗೆ ಚಿಂತೆಯಾಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯವಿದೆ.

ಕುಂಭ: ನೂತನ ಕೆಲಸ ಕಾರ್ಯಗಳಲ್ಲಿ ವಿಘ್ನ ತೋರಿಬರಬಹುದು. ಆದರೆ ಕುಲದೇವರ ಪ್ರಾರ್ಥನೆ ನಡೆಸಿ ಮುನ್ನಡೆಯಿರಿ. ದೇಹಾರೋಗ್ಯದಲ್ಲಿ ದಿಡೀರ್ ಏರುಪೇರಾಗುವುದರಿಂದ ಚಿಂತೆಯಾಗಲಿದೆ. ವೃತ್ತಿರಂಗದಲ್ಲಿ ಆಮಿಷಗಳಿಗೆ ಬಲಿಯಾಗದಿರಿ. ಕಿರು ಸಂಚಾರ ಮಾಡುವಿರಿ.

ಮೀನ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಆದರೆ ಅನಿರೀಕ್ಷಿತವಾಗಿ ಅಧಿಕ ಖರ್ಚು ವೆಚ್ಚಗಳಾಗಲಿದ್ದು, ಆತಂಕವಾಗಬಹುದು. ಮಹಿಳೆಯರಿಂದ ಸುಖ, ಸಂತೋಷ ಪ್ರಾಪ್ತಿಯಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಕೆಲಸಗಳು ನಿರ್ವಿಘ್ನವಾಗಿ ನೇರವೇರಲು ಈ ದೇವಸ್ಥಾನದಲ್ಲಿ ಈ ದೀಪವನ್ನು ಹಚ್ಚಿ