Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 5 ಮಾರ್ಚ್ 2020 (09:09 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕವಾಗಿ ಆಕಸ್ಮಿಕವಾಗಿ ಧನಾಗಮನವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಹಲವು ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ವೃಷಭ: ನಿಮ್ಮ ಮಾನಸಿಕ ಸ್ಥೈರ್ಯದಿಂದ ಬರುವಂತಹ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಿರಿ. ವ್ಯವಹಾರದಲ್ಲಿ ಇರುವವರಿಗೆ ಆರ್ಥಿಕವಾಗಿ ಮುನ್ನಡೆಯಿರಲಿದೆ. ಉದ್ಯೋಗ ವ್ಯವಹಾರದಲ್ಲಿ ಮೇಲ್ದರ್ಜೆಗೇರುವ ಅವಕಾಶ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ.

ಮಿಥುನ: ವೃತ್ತಿರಂಗದಲ್ಲಿ ಅನಗತ್ಯ ಅಪವಾದಗಳು ಎದುರಾಗಲಿವೆ. ತಾಳ್ಮೆಯಿಂದ ನಿಭಾಯಿಸಿ. ಹಿರಿಯರ ಸಲಹೆಯಿಂದ ದಾಯಾದಿ ಕಲಹಗಳು ಸುಖಾಂತ್ಯವಾಗಲಿದೆ. ಸಂಗಾತಿಗೆ ಉಡುಗೊರೆ ನೀಡಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ಕರ್ಕಟಕ: ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಉದ್ಯೋಗ ಕ್ಷೇತ್ರದಲ್ಲಿ ಕೆಳ ಹಂತದ ನೌಕರರಿಗೆ ಬಡ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಲಿದೆ. ಅನಗತ್ಯ ವಾದ ವಿವಾದಗಳಲ್ಲಿ ಮೂಗುತೂರಿಸಬೇಡಿ.

ಸಿಂಹ: ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ಉದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯಲಿವೆ. ವಿದ್ಯಾರ್ಥಿಗಳು ಪ್ರಯತ್ನ ಬಲದಿಂದ ಯಶಸ್ಸು ಸಾಧಿಸಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕನ್ಯಾ: ಮಾನಸಿಕವಾಗಿ ಗಟ್ಟಿಯಾಗಬೇಕಾದ ಸಮಯವಿದು. ಮೇಲಧಿಕಾರಿಗಳ ಕಿರಿ ಕಿರಿ ನಿಮ್ಮ ತಾಳ್ಮೆ ಪರೀಕ್ಷೆ ಮಾಡಲಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗಬಹುದು.

ತುಲಾ: ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದ್ದು, ಅಂದುಕೊಂಡ ಕೆಲಸ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆ ಸಿಗಲಿದೆ. ವಾಹನ ಖರೀದಿಗೆ ಧನವ್ಯಯವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ದೈವಾನುಗ್ರಹದಿಂದ ನಿಮ್ಮ ಮನೋಕಾಮನೆಗಳು ಪೂರ್ತಿಯಾಗಲಿವೆ. ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ಗೃಹ ನಿರ್ಮಾಣ ಕಾರ್ಯಗಳನ್ನು ಆರಂಭಿಸಲು ಇದು ಸಕಾಲ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಅನವಶ್ಯಕವಾಗಿ ನೆರೆಹೊರೆಯವರಿಂದ ಮಾತು ಕೇಳಬೇಕಾಗಿಬರುತ್ತದೆ. ಅನಿರೀಕ್ಷಿತವಾಗಿ ದೇವಾಲಯ ಸಂದರ್ಶನ ಮಾಡುವ ಯೋಗವಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ. ಕೋರ್ಟು ಕಚೇರಿ ಕಲಾಪಗಳಲ್ಲಿ ಮುನ್ನಡೆ ಸಿಗಲಿದೆ.

ಮಕರ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನಕ್ಕಾಗಿ ದೂರ ಪ್ರಯಾಣ ಮಾಡಬೇಕಾಗುತ್ತದೆ. ವೃತ್ತಿರಂಗದಲ್ಲಿ ಇದುವರೆಗೆ ಇದ್ದ ಕಷ್ಟ ನಿವಾರಣೆಯಾಗಿ ನೆಮ್ಮದಿಯಾಗುವುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಧನವ್ಯಯಮಾಡಲಿದ್ದೀರಿ. ಹಿರಿಯರ ಸಲಹೆಗೆ ಕಿವಿಗೊಡಿ.

ಕುಂಭ: ಸಂಗಾತಿಯ ಹಠಮಾರಿ ಸ್ವಭಾವ ನಿಮ್ಮನ್ನು ಪೇಚಿಗೆ ಸಿಲುಕಿಸಲಿದೆ. ಕೌಟುಂಬಿಕವಾಗಿ ಪ್ರೀತಿ ಪಾತ್ರರಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಭೂ ಖರೀದಿ, ಗೃಹ ನಿರ್ಮಾಣಕ್ಕೆ ಇದು ಸಕಾಲ. ಸಾಲ ಪಾವತಿಯಾಗಲಿದ್ದು, ಆರ್ಥಿಕ ಸಂಕಷ್ಟಗಳು ನಿವಾರಣೆಯಾಗಲಿವೆ.

ಮೀನ: ಕನ್ಯಾಮಣಿಗಳಿಗೆ ಮನಸ್ಸಿಗೆ ಹಿಡಿಸಿದ ವಿವಾಹ ಪ್ರಸ್ತಾಪಗಳು ಬರಲಿವೆ. ಮನಸ್ಸಿಗೆ ಮುದ ನೀಡುವ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

ಹೋಳಿ ಹಬ್ಬದಂದು ನಿಮ್ಮ ಮೇಲೆ ಯಾವ ಬಣ್ಣ ಮೊದಲು ಬಿದ್ದರೆ ಒಳ್ಳೆಯದು ಗೊತ್ತಾ?