Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 7 ಮಾರ್ಚ್ 2020 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೇಹಾರೋಗ್ಯದ ಮೇಲೆ ಕಾಳಜಿಯಿರಲಿ. ಉದ್ಯೋಗ ಬದಲಾವಣೆಯ ಅವಕಾಶಗಳು ಕಂಡುಬರಲಿವೆ. ಸಾಂಸಾರಿಕವಾಗಿ ನೆಮ್ಮದಿ ತೋರಿಬಂದರೂ ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿವೆ. ಸಂಚಾರದಲ್ಲಿ ಜಾಗ್ರತೆ.

ವೃಷಭ: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಉನ್ನತಿಗೆ ಅವಕಾಶಗಳು ಒದಗಿಬರಲಿವೆ. ಅವಿವಾಹಿತರಿಗೆ ವಿವಾಹ ಪ್ರಯತ್ನಗಳಿಗೆ ಕೊನೆಯ ಕ್ಷಣದಲ್ಲಿ ಹಿನ್ನಡೆಯಾದೀತು. ತಾಳ್ಮೆಯಿಂದಿರಿ. ವೃತ್ತಿರಂಗದಲ್ಲಿ ಹೆಚ್ಚಿನ ಯಶಸ್ಸಿಗೆ ಪರಿಶ್ರಮಪಡಬೇಕಾದೀತು.

ಮಿಥುನ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ವೃತ್ತಿರಂಗದಲ್ಲಿ ಆದಾಯ ಗಳಿಕೆಗೆ ನಾನಾ ಮಾರ್ಗ ಕಂಡುಬರಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಕರ್ಕಟಕ: ಖರ್ಚು ವೆಚ್ಚಗಳ ಬಗ್ಗೆ ನಿಯಂತ್ರಣವಿರಲಿ. ಅಧಿಕಾರಿ ವರ್ಗದವರಿಗೆ ಅಡೆತಡೆಗಳಿದ್ದರೂ ಅಂತಿಮವಾಗಿ ಕಾರ್ಯಸಾಧನೆಯಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆಗಾಗಿ ಕಾಯಬೇಕಾದೀತು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಸಿಂಹ: ವೃತ್ತಿರಂಗದಲ್ಲಿ ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ಪ್ರೀತಿ ಪಾತ್ರರ ಮನಸ್ಸಿಗೆ ನೋವಾಗುವಂತೆ ನಡೆದುಕೊಳ್ಳಬೇಡಿ. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಕಟ್ಟು ನಿಟ್ಟು ಅಗತ್ಯ. ಆದರೆ ಸಾಲ ಬಾಧೆ ನಿವಾರಣೆಯಾಗಲಿದೆ.

ಕನ್ಯಾ: ಪ್ರಯತ್ನ ಬಲದಿಂದ ಹಂತ ಹಂತವಾಗಿ ಎದುರಾಗುವ ಸಮಸ್ಯೆಗಳನ್ನು ನಿವಾರಿಸಬಹುದು. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ಸಾಂಸಾರಿಕವಾಗಿ ನೆಮ್ಮದಿಯಿರಲಿದೆ. ಹಿರಿಯರಿಂದ ಬಂದ ಬಳವಳಿ ಸಂರಕ್ಷಿಸಬೇಕಾದ ಹೊಣೆಗಾರಿಕೆ ಸಿಗಲಿದೆ.

ತುಲಾ: ಅನಿರೀಕ್ಷಿತವಾಗಿ ಬರುವ ಅದೃಷ್ಟವನ್ನು ಸ್ವೀಕರಿಸಿದರೆ ಒಳಿತು. ಯಾರನ್ನೂ ಹಗುರವಾಗಿ ಪರಿಗಣಿಸುವುದು ಒಳ್ಳೆಯದಲ್ಲ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು.

ವೃಶ್ಚಿಕ: ನಿಮ್ಮ ಸಮಸ್ಯೆಗಳಿಗೆ ಮಿತ್ರರಿಂದ ಪರಿಹಾರ ಸಿಗುವುದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಓಡಾಟ ನಡೆಸಬೇಕಾಗುತ್ತದೆ.

ಧನು: ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಖುಷಿಯಾಗುವುದು. ಆದರೆ ನಿಮ್ಮ ಗುಟ್ಟುಗಳನ್ನು ಹೊರತೆಗೆಯಲು ಕಾಯುವ ಜನರ ಮುಂದೆ ಎಚ್ಚರಿಕೆಯಿಂದಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಒಳ್ಳೆಯದಲ್ಲ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಮಕರ: ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಬಂಧು ಜನರ ಚಾಡಿ ಮಾತುಗಳಿಂದ ಮನಸ್ಸಿಗೆ ನೋವಾದೀತು. ಮಹಿಳಾ ಉದ್ಯೋಗಿಗಳಿಗೆ ಮುನ್ನಡೆಯಿರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ಕುಂಭ: ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗಿರುವುದರಿಂದ ದೇಹಾಯಾಸವಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಸಂಗಾತಿಯ ಪ್ರೀತಿಗೆ ಪಾತ್ರರಾಗುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ವ್ಯವಹಾರದಲ್ಲಿ ಲಾಭವಾಗಲಿದೆ.

ಮೀನ: ಪಾಲು ಬಂಡವಾಳ ಹೂಡಿಕೆಗೆ ಇದು ಸಕಾಲ. ಮಿತ್ರರ ಸಹಕಾರದಿಂದ ವೃತ್ತಿರಂಗದಲ್ಲಿ ಉನ್ನತ ಸ್ಥಾನ ಮಾನ ಪಡೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ವಿವಾಹ ಪ್ರಯತ್ನ ನಡೆಸಲು ಇದು ಸಕಾಲ. ಭೂಮಿ, ವಾಹನ ಖರೀದಿಗೆ ಮುಂದಾಗಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಎಲೆಗಳಿಂದ ನಿಮ್ಮ ಹಣದ ಸಮಸ್ಯೆ ದೂರಮಾಡಿಕೊಳ್ಳಬಹುದು