Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 7 ಮಾರ್ಚ್ 2020 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೇಹಾರೋಗ್ಯದ ಮೇಲೆ ಕಾಳಜಿಯಿರಲಿ. ಉದ್ಯೋಗ ಬದಲಾವಣೆಯ ಅವಕಾಶಗಳು ಕಂಡುಬರಲಿವೆ. ಸಾಂಸಾರಿಕವಾಗಿ ನೆಮ್ಮದಿ ತೋರಿಬಂದರೂ ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿವೆ. ಸಂಚಾರದಲ್ಲಿ ಜಾಗ್ರತೆ.

ವೃಷಭ: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಉನ್ನತಿಗೆ ಅವಕಾಶಗಳು ಒದಗಿಬರಲಿವೆ. ಅವಿವಾಹಿತರಿಗೆ ವಿವಾಹ ಪ್ರಯತ್ನಗಳಿಗೆ ಕೊನೆಯ ಕ್ಷಣದಲ್ಲಿ ಹಿನ್ನಡೆಯಾದೀತು. ತಾಳ್ಮೆಯಿಂದಿರಿ. ವೃತ್ತಿರಂಗದಲ್ಲಿ ಹೆಚ್ಚಿನ ಯಶಸ್ಸಿಗೆ ಪರಿಶ್ರಮಪಡಬೇಕಾದೀತು.

ಮಿಥುನ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ವೃತ್ತಿರಂಗದಲ್ಲಿ ಆದಾಯ ಗಳಿಕೆಗೆ ನಾನಾ ಮಾರ್ಗ ಕಂಡುಬರಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಕರ್ಕಟಕ: ಖರ್ಚು ವೆಚ್ಚಗಳ ಬಗ್ಗೆ ನಿಯಂತ್ರಣವಿರಲಿ. ಅಧಿಕಾರಿ ವರ್ಗದವರಿಗೆ ಅಡೆತಡೆಗಳಿದ್ದರೂ ಅಂತಿಮವಾಗಿ ಕಾರ್ಯಸಾಧನೆಯಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆಗಾಗಿ ಕಾಯಬೇಕಾದೀತು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಸಿಂಹ: ವೃತ್ತಿರಂಗದಲ್ಲಿ ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ಪ್ರೀತಿ ಪಾತ್ರರ ಮನಸ್ಸಿಗೆ ನೋವಾಗುವಂತೆ ನಡೆದುಕೊಳ್ಳಬೇಡಿ. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಕಟ್ಟು ನಿಟ್ಟು ಅಗತ್ಯ. ಆದರೆ ಸಾಲ ಬಾಧೆ ನಿವಾರಣೆಯಾಗಲಿದೆ.

ಕನ್ಯಾ: ಪ್ರಯತ್ನ ಬಲದಿಂದ ಹಂತ ಹಂತವಾಗಿ ಎದುರಾಗುವ ಸಮಸ್ಯೆಗಳನ್ನು ನಿವಾರಿಸಬಹುದು. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ಸಾಂಸಾರಿಕವಾಗಿ ನೆಮ್ಮದಿಯಿರಲಿದೆ. ಹಿರಿಯರಿಂದ ಬಂದ ಬಳವಳಿ ಸಂರಕ್ಷಿಸಬೇಕಾದ ಹೊಣೆಗಾರಿಕೆ ಸಿಗಲಿದೆ.

ತುಲಾ: ಅನಿರೀಕ್ಷಿತವಾಗಿ ಬರುವ ಅದೃಷ್ಟವನ್ನು ಸ್ವೀಕರಿಸಿದರೆ ಒಳಿತು. ಯಾರನ್ನೂ ಹಗುರವಾಗಿ ಪರಿಗಣಿಸುವುದು ಒಳ್ಳೆಯದಲ್ಲ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು.

ವೃಶ್ಚಿಕ: ನಿಮ್ಮ ಸಮಸ್ಯೆಗಳಿಗೆ ಮಿತ್ರರಿಂದ ಪರಿಹಾರ ಸಿಗುವುದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಓಡಾಟ ನಡೆಸಬೇಕಾಗುತ್ತದೆ.

ಧನು: ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಖುಷಿಯಾಗುವುದು. ಆದರೆ ನಿಮ್ಮ ಗುಟ್ಟುಗಳನ್ನು ಹೊರತೆಗೆಯಲು ಕಾಯುವ ಜನರ ಮುಂದೆ ಎಚ್ಚರಿಕೆಯಿಂದಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಒಳ್ಳೆಯದಲ್ಲ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಮಕರ: ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಬಂಧು ಜನರ ಚಾಡಿ ಮಾತುಗಳಿಂದ ಮನಸ್ಸಿಗೆ ನೋವಾದೀತು. ಮಹಿಳಾ ಉದ್ಯೋಗಿಗಳಿಗೆ ಮುನ್ನಡೆಯಿರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ಕುಂಭ: ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗಿರುವುದರಿಂದ ದೇಹಾಯಾಸವಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಸಂಗಾತಿಯ ಪ್ರೀತಿಗೆ ಪಾತ್ರರಾಗುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ವ್ಯವಹಾರದಲ್ಲಿ ಲಾಭವಾಗಲಿದೆ.

ಮೀನ: ಪಾಲು ಬಂಡವಾಳ ಹೂಡಿಕೆಗೆ ಇದು ಸಕಾಲ. ಮಿತ್ರರ ಸಹಕಾರದಿಂದ ವೃತ್ತಿರಂಗದಲ್ಲಿ ಉನ್ನತ ಸ್ಥಾನ ಮಾನ ಪಡೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ವಿವಾಹ ಪ್ರಯತ್ನ ನಡೆಸಲು ಇದು ಸಕಾಲ. ಭೂಮಿ, ವಾಹನ ಖರೀದಿಗೆ ಮುಂದಾಗಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹನುಮಾನ್ ಚಾಲೀಸಾ ಓದುವುದರ ಲಾಭಗಳು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ ಈ ಒಂದು ವಸ್ತು ತಂದಿಟ್ಟರೆ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಮುಂದಿನ ಸುದ್ದಿ
Show comments