Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 9 ಮಾರ್ಚ್ 2020 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂಘರ್ಷಕ್ಕಿಳಿಯಬೇಕಾಗುತ್ತದೆ. ಅಂದುಕೊಂಡ ಕಾರ್ಯ ಸಾಧನೆ ಮಾಡಲು ಅಡೆತಡೆಗಳು ತೋರಿಬರಲಿವೆ. ಆರ್ಥಿಕವಾಗಿ ಹಣಕಾಸಿನ ಬಗ್ಗೆ ಸೂಕ್ತ ಯೋಜನೆ ಮಾಡಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಹಳೆಯ ಮಿತ್ರರ ಅನಿರೀಕ್ಷಿತ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಪ್ರೀತಿ ಪಾತ್ರರ ಭಾವನೆಗಳಿಗೆ ಬೆಲೆಕೊಡಬೇಕಾಗುತ್ತದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಉದ್ಯೋಗ ರಂಗದಲ್ಲಿ ಕಿರಿ ಕಿರಿಯಿಂದಾಗಿ ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ಮನೆ, ಭೂಮಿ ಖರೀದಿ ವ್ಯವಹಾರದಲ್ಲಿ ತೊಡಗಿಸಿಕೊಳ್ಳಬಹುದು. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿರಲಿದೆ. ಸರ್ಕಾರಿ ಅಧಿಕಾರಿಗಳಿಗೆ ಮುಂಬಡ್ತಿ ಯೋಗವಿದೆ.

ಕರ್ಕಟಕ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರುವುದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯ ಕೊರತೆ ಉಂಟಾಗಬಹುದು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ.

ಸಿಂಹ: ಕೌಟುಂಬಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ತಲೆದೋರಲಿವೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡುವಾಗ ಎಚ್ಚರಿಕೆಯಿಂದಿರಿ.

ಕನ್ಯಾ: ನಿಮ್ಮ ಮೇಲೆ ಮೇಲಧಿಕಾರಿಗಳು ವಿನಾಕಾರಣ ಗೂಬೆ ಕೂರಿಸಬಹುದು. ಆದರೆ ಸಂಯಮದಿಂದ ನಡೆದುಕೊಳ್ಳಿ. ನಿಮ್ಮ ಆತ್ಮವಿಶ್ವಾಸವೇ ನಿಮಗೆ ಶ್ರೀರಕ್ಷೆಯಾಗಲಿದೆ. ಸಂಗಾತಿಯಿಂದ ಸಾಂತ್ವನ ಸಿಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು.

ತುಲಾ: ಹೊಸ ಉದ್ಯೋಗಕ್ಕೆ ಸೇರಿಕೊಂಡವರಿಗೆ ಹೊಂದಾಣಿಕೆ ಕಷ್ಟವೆನಿಸಬಹುದು. ಮಿತ್ರರ ಸಹಾಯ ಪಡೆಯಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಇಷ್ಟ ಭೋಜನ ಯೋಗವಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ವೃಶ್ಚಿಕ: ಅಧಿಕ ಧನಲಾಭ ತರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಅಪರಿಚಿತರಿಂದ ಸಹಾಯ ಸಿಗಲಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಮಾನಸಿಕವಾಗಿ ನಿರ್ಧಾರ ಕೈಗೊಳ್ಳುವಾಗ ಗೊಂದಲ ಕಾಡಬಹುದು. ದೇವತಾ ಪ್ರಾರ್ಥನೆ ಮಾಡಿ.

ಧನು: ಸಹೋದರರಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ದಾಯಾದಿ ಕಲಹಗಳು ಸಮಾಪ್ತಿಯಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ಉತ್ತಮ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದೇವತಾ ಪ್ರಾರ್ಥನೆ ಮಾಡಿ.

ಮಕರ: ಮನೆಗೆ ಅನಿರೀಕ್ಷಿತವಾಗಿ ಬರುವ ಅತಿಥಿಯಿಂದ ಸಂತಸದ ವಾತಾವರಣವಿರಲಿದೆ. ಇಷ್ಟ ಭೋಜನ ಸವಿಯುವ ಯೋಗವಿದೆ. ಅಧಿಕ ಖರ್ಚು ವೆಚ್ಚಗಳಾಗದಂತೆ ಯೋಜನೆ ರೂಪಿಸಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗಬಹುದು. ತಾಳ್ಮೆಯಿರಲಿ.

ಕುಂಭ: ಪ್ರೀತಿ ಪಾತ್ರರಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ದೇಹಾರೋಗ್ಯದಲ್ಲಿ ಹೊಸ ಸಮಸ್ಯೆಗಳು ಚಿಂತೆಗೀಡು ಮಾಡಲಿವೆ. ದೈನಂದಿನ ಕೆಲಸ ಕಾರ್ಯಗಳಲ್ಲಿ ಓಡಾಟ ಹೆಚ್ಚಲಿದ್ದು, ದೇಹಾಯಾಸವಾಗಲಿದೆ. ಹಣಕಾಸಿಗೆ ತೊಂದರೆಯಿರುದು.

ಮೀನ: ಅನಿರೀಕ್ಷಿತವಾಗಿ ಧನಪ್ರಾಪ್ತಿಯಾಗಲಿದ್ದು, ಅಂದುಕೊಂಡ ಯೋಜನೆಗಳನ್ನು ಪೂರ್ತಿ ಮಾಡುವಿರಿ. ಮಹಿಳೆಯರಿಗೆ ಉನ್ನತ ಸ್ಥಾನ ಮಾನ ಯೋಗವಿದೆ. ಕಲಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments