Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 10 ಮಾರ್ಚ್ 2020 (09:04 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ನಿಮ್ಮ ಸಮಸ್ಯೆಗಳ ನಿವಾರಣೆಗೆ ಮಾತುಕತೆಯೇ ಪರಿಹಾರವಾಗಲಿದೆ. ಆತ್ಮವಿಶ್ವಾಸದ ಕೊರತೆ ಕಾಡಲಿದೆ. ವೃತ್ತಿರಂಗದಲ್ಲಿ ನೀವು ಅಂದುಕೊಂಡಿದ್ದನ್ನು ಸಾಧಿಸುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಸರಿಯಾದ ಯೋಜನೆ ಅಗತ್ಯ.

ವೃಷಭ: ಯೋಗಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಪರಿಸ್ಥಿತಿಯೊಂದಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಿಥುನ: ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯಕ್ಕೆ ಪೂರಕವಾದ ಶುಭ ಸುದ್ದಿ ಬರಲಿದೆ. ನಿರುದ್ಯೋಗಿಗಳಿಗೆ ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಿವು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ.

ಕರ್ಕಟಕ: ಹೊಸ ಕೆಲಸಗಳನ್ನು ಆರಂಭಿಸಲು ಇದು ಉತ್ತಮ ಸಮಯ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಅನವಶ್ಯಕವಾಗಿ ಇತರರೊಡನೆ ವಾದ ವಿವಾದದಲ್ಲಿ ತೊಡಗಬೇಡಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ಶೈಕ್ಷಣಿಕ ರಂಗದಲ್ಲಿರುವವರಿಗೆ ಮುನ್ನಡೆಗೆ ಪೂರಕವಾದ ಸನ್ನಿವೇಶ ಒದಗಿಬರಲಿದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳೇ ಅಸೂಯೆಪಡವಂತೆ ಮೇಲುಗೈ ಸಾಧಿಸಲಿದ್ದೀರಿ. ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಆರ್ಥಿಕ ಪರಿಸ್ಥಿತಿಯಲ್ಲಿ ಹಣಕಾಸಿನ ಮುಗ್ಗಟ್ಟುಗಳು ತೋರಿಬಂದು, ಅಂದುಕೊಂಡ ಕೆಲಸ ಕಾರ್ಯ ಪೂರ್ತಿ ಮಾಡಲು ಅಡೆತಡೆಗಳು ತೋರಿಬಂದೀತು. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ. ಸಂಶಯ ಪ್ರವೃತ್ತಿಯಿಂದ ಸಂಬಂಧ ಹಾಳಾಗಬಹುದು, ಎಚ್ಚರಿಕೆಯಿಂದಿರಿ.

ತುಲಾ: ನಿಮ್ಮ ವೃತ್ತಿರಂಗದಲ್ಲಿ ಕ್ರಿಯಾಶೀಲತೆಗೆ ಬೆಲೆ ಸಿಗದೇ ಬೇಸರವಾಗಬಹುದು. ಎಲ್ಲಾ ವಿಚಾರದಲ್ಲಿ ಆತ್ಮವಿಶ್ವಾಸವೇ ಮುಖ್ಯವಾಗಲಿದೆ. ನ್ಯಾಯಾಲಯದ ಕಾರ್ಯ ಕಲಾಪದಲ್ಲಿ ಹಿನ್ನಡೆಯಾಗಬಹುದು. ಚಿಂತೆ ಬೇಡ. ಸಂಯಮದಿಂದ ನಡೆದುಕೊಳ್ಳುವುದು ಮುಖ್ಯ.

ವೃಶ್ಚಿಕ: ಬಂಧು ಮಿತ್ರರ ಸಮಾಗಮದಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಸಂಗಾತಿಯ ಮಾತಿಗೆ ಕಿವಿಗೊಡಿ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳಾಗಬಹುದು. ದೇವತಾ ಪ್ರಾರ್ಥನೆ ಮಾಡಿ.

ಧನು: ವೃತ್ತಿರಂಗದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ದಿನದಂತ್ಯಕ್ಕೆ ಶುಭ ಸುದ್ದಿ ಕೇಳಿಬರಲಿದೆ.

ಮಕರ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಹಿತ ಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರುವುದು ಮುಖ್ಯ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು, ಎಚ್ಚರಿಕೆಯಿಂದಿರಿ.

ಕುಂಭ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಗೃಹಕೃತ್ಯಗಳಿಗೆ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ.

ಮೀನ: ನಿರುದ್ಯೋಗಿಗಳಿಗೆ ಹಲವಾರು ಅವಕಾಶಗಳು ಒದಗಿಬರಲಿದ್ದು, ಯೋಗ್ಯವಾದ ವೃತ್ತಿಯನ್ನೇ ಆರಿಸಿ. ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಆರ್ಥಿಕವಾಗಿ ಆದಾಯದಷ್ಟೇ ಖರ್ಚೂ ಇರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೋಳಿ ಹುಣ್ಣಿಮೆಯಂದು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ