Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 11 ಮಾರ್ಚ್ 2020 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂಘರ್ಷಕ್ಕಿಳಿಯಬೇಡಿ. ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸಲು ಅಡೆತಡೆಗಳು ತೋರಿಬಂದೀತು. ದೂರ ಸಂಚಾರದಲ್ಲಿ ಹೆಚ್ಚಿನ ಗಮನ ಅಗತ್ಯವಿರುತ್ತದೆ. ಆರೋಗ್ಯದಲ್ಲಿ ಕಾಳಜಿಯಿರಲಿ.

ವೃಷಭ: ಹಿತ ಶತ್ರುಗಳಿಂದ ನಿಮ್ಮ ಕೆಲಸ ಕಾರ್ಯಗಳಿಗೆ ತೊಂದರೆಯಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಚೇತರಿಕೆ ಕಂಡುಬರಲಿದೆ. ಕೊಡು ಕೊಳ್ಳುವಿಕೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಹಿರಿಯರ ತೀರ್ಥ ಯಾತ್ರೆಗೆ ಸಿದ್ಧತೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಉನ್ನತಿಯ ಯೋಗವಿದೆ. ಆರ್ಥಿಕವಾಗಿ ಸಕಾಲದಲ್ಲಿ ಧನಾಗಮನವಾಗಲಿದ್ದು, ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸುವಿರಿ.

ಕರ್ಕಟಕ: ಸಾಂಸಾರಿಕವಾಗಿ ದಿಡೀರ್ ಆಗಿ ಕೆಲವೊಂದು ಬದಲಾವಣೆಗಳು ಸಂಭವಿಸಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಾಗಬಹುದು. ಸಾರ್ವಜನಿಕ ಕ್ಷೇತ್ರದಲ್ಲಿ ವ್ಯವಹಾರ ನಡೆಸುವಾಗ ಅಪವಾದಗಳು ಬರದಂತೆ ಎಚ್ಚರಿಕೆ ವಹಿಸಿ.

ಸಿಂಹ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಲಿದ್ದೀರಿ. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರಾಗಬಹುದು. ದೂರ ಸಂಚಾರದಿಂದ ಕಾರ್ಯ ಸಿದ್ಧಿಯಾಗಲಿದೆ. ಇಷ್ಟ ಮಿತ್ರರೊಂದಿಗೆ ಇಷ್ಟ ಭೋಜನ ಸವಿಯುವ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕನ್ಯಾ: ಇಷ್ಟು ದಿನ ವ್ಯವಹಾರದಲ್ಲಿ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗೆ ಅಚಾನಕ್ ಆಗಿ ಪರಿಹಾರದ ದಾರಿ ಕಂಡುಬರಲಿದೆ. ಸಂಗಾತಿಗೆ ಉಡುಗೊರೆ ನೀಡಲಿದ್ದೀರಿ. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕು. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಬಗ್ಗೆ ಕಾಳಜಿವಹಿಸಿ.

ತುಲಾ: ಉದ್ಯೋಗ ರಂಗದಲ್ಲಿ ಸಹೋದ್ಯೋಗಿಗಳಿಂದಲೇ ನಿಮ್ಮ ಕೆಲಸ ಕಾರ್ಯಗಳಿಗೆ ಅಡೆತಡೆ ಬರಬಹುದು. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ.

ವೃಶ್ಚಿಕ: ಮನೆಯಲ್ಲಿ ಸಾಮಾಧಾನಕರ ವಾತಾವರಣವಿರಲಿದ್ದು, ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯಲಿದ್ದೀರಿ. ವಾಹನ ಚಾಲನೆ ವೃತ್ತಿಯವರಿಗೆ ದೂರ ಸಂಚಾರ ಮಾಡಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲಿದ್ದೀರಿ. ಆದರೆ ನಿಮ್ಮ ಅನಗತ್ಯ ಮಾತುಗಳಿಂದ ಪಾಲಿಗೆ ಬಂದ ಅವಕಾಶ ಕಳೆದುಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಬಹುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ಸಿಗಲಿದೆ.

ಮಕರ: ವ್ಯವಹಾರ ಕ್ಷೇತ್ರದಲ್ಲಿ ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ನೆರೆಹೊರೆಯವರೊಂದಿಗೆ ಸಣ್ಣ ಮಟ್ಟಿನ ಮನಸ್ತಾಪ ಕಂಡುಬರಬಹುದು. ಸಂಯಮದಿಂದ ವರ್ತಿಸಿ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ಕಾಳಜಿಯಿರಲಿ.

ಕುಂಭ: ಅನ್ಯರೊಂದಿಗೆ ವಿನಾ ಮನಸ್ತಾಪಕ್ಕೆ ಎಡೆ ಮಾಡಿಕೊಡದಿರಿ. ಸಂಗಾತಿಯ ದುಡುಕು ಮಾತಿನಿಂದ ಸಂಸಾರದಲ್ಲಿ ಭಿನ್ನಾಭಿಪ್ರಾಯ ಮೂಡೀತು. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ.

ಮೀನ: ಆರಾಮದಾಯಕ ಜೀವನಕ್ಕೆ ದಾರಿ ಹುಡುಕಲಿದ್ದೀರಿ. ಆರ್ಥಿಕವಾಗಿ ಕೂಡಿಟ್ಟ ಹಣ ಖರ್ಚಾಗಲಿದೆ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಸ್ತ್ರೀಯರಿಗೆ ವೈವಾಹಿಕ ಭಾಗ್ಯ ಒದಗಿಬರಲಿದೆ. ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಂತ ಮನೆ ಕನಸು ನನಸಾಗಲು ಶಿವನಿಗೆ ಈ ಒಂದು ವಸ್ತುವನ್ನು ಅರ್ಪಿಸಿ