Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 12 ಮಾರ್ಚ್ 2020 (09:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದ ವೇತನ ಹೆಚ್ಚಳ ಸಾಧ್ಯತೆಯಿದೆ. ಆದರೆ ಕಾರ್ಯದೊತ್ತಡ ಅಧಿಕವಾಗಲಿದೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಕೌಟುಂಬಿಕವಾಗಿ ನಿಮ್ಮ ಚಿಂತನೆಗೆ ಬೆಲೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ವೃಷಭ: ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. ಆದರೆ ವೃತ್ತಿರಂಗದಲ್ಲಿ ಕಠಿಣ ಸವಾಲುಗಳು ಎದುರಾಗಲಿವೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗುವುದು.

ಮಿಥುನ: ಸಾಂಸಾರಿಕವಾಗಿ ಉಲ್ಲಾಸದ ದಿನವಿದು. ಪತ್ನಿ, ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ದತೆ ನಡೆಸುವಿರಿ. ನೂತನ ದಂಪತಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಕಿರು ಸಂಚಾರ ಮಾಡುವಿರಿ.

ಕರ್ಕಟಕ: ಸರಕಾರಿ ಕೆಲಸಗಳಿಗಾಗಿ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಅಪರಿಚಿತರೂ ಇಂದು ನಿಮ್ಮ ನೆರವಿಗೆ ಬರಲಿದ್ದಾರೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ.

ಸಿಂಹ: ನೀವು ಇಷ್ಟು ದಿನ ಯೋಚಿಸುತ್ತಿದ್ದ ಕೆಲಸಗಳು ನಿಧಾನಗತಿಯಲ್ಲಾದರೂ ಹಂತ ಹಂತವಾಗಿ ನಡೆಯುವುದು. ಆರ್ಥಿಕವಾಗಿ ಹಣಕಾಸಿನ ತೊಂದರೆಗಳು ನಿವಾರಣೆಯಾಗಲಿವೆ. ಮಾನಸಿಕವಾಗಿ ಋಣಾತ್ಮಕ ಚಿಂತೆ ಬೇಡ. ದಿನದಂತ್ಯಕ್ಕೆ ಶುಭ ಸುದ್ದಿ ಕಾದಿದೆ.

ಕನ್ಯಾ: ಸಾಂಸಾರಿಕವಾಗಿ ರಾಜಿಮನೋಭಾವವಿದ್ದರೆ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಬಹುದು. ದಾಯಾದಿ ಕಲಹಗಳಿಗೆ ಹಿರಿಯರ ಮಧ‍್ಯಸ್ಥಿಕೆ ಉತ್ತಮ. ದೇಹ ಪರಿಸ್ಥಿತಿಯಲ್ಲಿ ಏರುಪೇರಾಗಲಿದ್ದು, ಆಸ್ಪತ್ರೆಗೆ ಅಲೆದಾಡಬೇಕಾದೀತು. ಕೆಲಸ ಕಾರ್ಯಗಳಲ್ಲಿ ಯಶಸ್ಸಿಗೆ ದೇವರ ಪ್ರಾರ್ಥನೆ ಮಾಡಿ.

ತುಲಾ: ವೃತ್ತಿರಂಗದಲ್ಲಿ ಹೊಸದಾಗಿ ಕೆಲವು ನೂತನ ಜವಾಬ್ಧಾರಿಗಳನ್ನು ಹೊರಬೇಕಾಗುತ್ತದೆ. ಸಂಗಾತಿಯು ನಿಮ್ಮ ನಿರ್ಧಾರದಿಂದ ಅಸಮಾಧಾನಗೊಳ್ಳಬಹುದು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರುವುದು. ಕುಲದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಏಕಾಗ್ರತೆ ವಹಿಸಲು ನಾನಾ ಅಡೆತಡೆಗಳು ಉಂಟಾಗಬಹುದು. ಸಾಮಾಜಿಕವಾಗಿ ಜನಮನ್ನಣೆ ಗಳಿಸಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಹಿನ್ನಡೆಯಾದೀತು. ಆದರೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದೆ.

ಧನು: ಇಷ್ಟು ದಿನ ನೀವು ಅತಿಯಾಗಿ ನಂಬಿದ್ದವರೊಂದಿಗೆ ಮನಸ್ತಾಪವಾಗಬಹುದು. ಮಾತಿನ ಮೇಲೆ ನಿಗಾ ಇರಲಿ. ನೆರೆಹೊರೆಯವರ ಚಾಡಿ ಮಾತಿಗೆ ಕಿವಿಗೊಡಬೇಡಿ. ಬಂಧು ಮಿತ್ರರ ಭೇಟಿಯಾಗಲಿದ್ದೀರಿ. ಶುಭ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಮಕರ: ನಿಮ್ಮ ಸಹಾಯ ಮಾಡುವ ಗುಣದಿಂದಲೇ ಕೈಸುಟ್ಟುಕೊಳ್ಳಬೇಕಾದ ಪರಿಸ್ಥಿತಿ ಎದುರಾದೀತು. ನಯ ವಂಚಕರಿಂದ ದೂರವಿರುವುದು ಉತ್ತಮ. ಮನೆಗೆ ಅತಿಥಿಗಳ ಆಗಮನವಾಗಲಿದ್ದು, ಅನಿರೀಕ್ಷಿತ ಖರ್ಚು ವೆಚ್ಚಗಳಾಗಬಹುದು. ವಿದ್ಯಾರ್ಥಿಗಳಿಗೆ ಕಠಿಣ ಶ್ರಮ ಅಗತ್ಯ.

ಕುಂಭ: ಸಂಗಾತಿಯೊಂದಿಗೆ ದೂರ ಸಂಚಾರ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಹಳೆಯ ಸಂಬಂಧಗಳು ಮತ್ತೆ ಕೂಡಲಿವೆ. ಸಾಂಸಾರಿಕವಾಗಿ ಸಂತೋಷ ಸಿಗುವುದು. ಆದರೆ ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು. ತಾಳ್ಮೆಯಿರಲಿ.

ಮೀನ: ಮಹಿಳೆಯರಿಗೆ ಚಿನ್ನಾಭರಣ ಖರೀದಿಯ ಯೋಗವಿದೆ. ಕನ್ಯಾಮಣಿಗಳಿಗೆ ಮನಸ್ಸಿಗೆ ಒಪ್ಪುವ ವರ ಸಿಗುವನು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿಯಿದ್ದರೂ ನಿಮ್ಮ ಮುನ್ನಡೆ ಯಾರೂ ತಡೆಯಲಾಗದು. ತಾಳ್ಮೆ, ಸಮಾಧಾನವಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಹಣಕಾಸಿನ ಸಮಸ್ಯೆಯಿಂದ ಹೊರಬರಲು 10ರೂ ನಿಂದ ಈ ತಂತ್ರವನ್ನು ಮಾಡಿ