Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 13 ಮಾರ್ಚ್ 2020 (08:53 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ಹಲವು ರೀತಿಯ ಅವಕಾಶಗಳು ಒದಗಿ ಬರಲಿವೆ. ಅದನ್ನು ಬಳಸಿಕೊಳ್ಳುವ ಜಾಣತನ ಬೇಕಷ್ಟೇ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಹಣಕಾಸಿನ ವಿಚಾರದಲ್ಲಿ ಲಾಭ ಪಡೆಯುವ ಕೆಲಸಕ್ಕೆ ಮುಂದಾಗಲಿದ್ದೀರಿ.

ವೃಷಭ: ಇಂದು ನಿಮಗೆ ಮಿಶ್ರಫಲ ದೊರೆಯಲಿದೆ. ಭಾವನಾತ್ಮಕವಾಗಿ ಯೋಚನೆ ಮಾಡುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಿದ್ದರೂ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಹಣಕಾಸಿನ ವಿಚಾರದಲ್ಲಿ ಅನಿರೀಕ್ಷಿತ ಖರ್ಚು ವೆಚ್ಚಗಳು ಬರಲಿವೆ. ನಿಮ್ಮ ನಿರ್ಧಾರಗಳನ್ನು ಇತರರು ನಿರ್ಧರಿಸುವ ಪರಿಸ್ಥಿತಿ ತಂದುಕೊಳ್ಳಬೇಡಿ. ಹಿರಿಯರ ವಿಚಾರದಲ್ಲಿ ಅಸಡ್ಡೆ ಬೇಡ. ವಿದ್ಯಾರ್ಥಿಗಳಿಗೆ ಸದ್ಯದಲ್ಲೇ ಶುಭ ಸುದ್ದಿಯಿದೆ. ಚಿಂತೆ ಬೇಡ.

ಕರ್ಕಟಕ: ಹಲವಾರು ಚಿಂತೆಗಳು ಮನಸ್ಸಿನಲ್ಲಿ ಕಾಡುವುದರಿಂದ ದೈನಂದಿನ ಕೆಲಸದಲ್ಲಿ ನಿರುತ್ಸಾಹ ಕಂಡುಬರಲಿದೆ. ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ರಾಜಕೀಯದಲ್ಲಿ ಇರುವವರಿಗೆ ಮುನ್ನಡೆಯ ಅವಕಾಶಗಳು ಸಿಗಲಿವೆ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಯಿಂದಾಗಿ ಎಂತಹ ಸವಾಲು ಬಂದರೂ ಸಮರ್ಥವಾಗಿ ಎದುರಿಸಲಿದ್ದೀರಿ. ವಿನಾಕಾರಣ ಇತರರ ಮೇಲೆ ದೂಷಾರೋಪಣೆ ಮಾಡುವುದನ್ನು ಬಿಡಿ. ಆರ್ಥಿಕವಾಗಿ ಮಿಶ್ರಫಲಗಳಿರಲಿವೆ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ.

ಕನ್ಯಾ: ಕೌಟುಂಬಿಕವಾಗಿ ಕೆಲವೊಂದು ಜವಾಬ್ಧಾರಿಗಳನ್ನು ನಿಭಾಯಿಸಬೇಕಾದ ಒತ್ತಡವಿರಲಿದೆ. ಪ್ರಯತ್ನಬಲವಿದ್ದರೆ ಯಶಸ್ಸು ಸಾಧ‍್ಯವಿದೆ. ಹಣಕಾಸಿನ ವಿಚಾರಲ್ಲಿ ಲೆಕ್ಕಾಚಾರ ಸರಿಯಾಗಿರಲಿ. ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ನಿರುದ್ಯೋಗಿಗಳಿಗೆ ಸ್ವ ಉದ್ಯೋಗ ಉತ್ತಮ.

ತುಲಾ: ಒಂದೇ ಪ್ರಯತ್ನದಲ್ಲಿ ವಿಫಲವಾದಿರೆಂದು ಸೋತು ಹೋದ ಮನೋಭಾವ ಕಾಡಲಿದೆ. ಆದರೆ ನಿರಾಸೆಯಾಗಬೇಡಿ. ಸಾಂಸಾರಿಕವಾಗಿ ಸವಾಲುಗಳನ್ನು ಸ್ವೀಕರಿಸಲು ಸಿದ್ಧರಾಗಿ. ನಿಮ್ಮ ಉತ್ತಮ ನಡೆಯಿಂದಲೇ ಇತರರ ಮನ ಗೆಲ್ಲಲಿದ್ದೀರಿ. ಹೊಂದಾಣಿಕೆ ಅಗತ್ಯ.

ವೃಶ್ಚಿಕ: ದೃಢವಾದ ಹೆಜ್ಜೆಯಿಟ್ಟರೆ ಪ್ರಗತಿ ಸಾಧಿಸುವುದು ಸುಲಭವಾಗಲಿದೆ. ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ರಂಗದಲ್ಲಿ ಮುನ್ನಡೆ ಸಿಗಲಿದೆ. ವೈಯಕ್ತಿಕವಾಗಿ ದೇಹಾರೋಗ್ಯದ ಬಗ್ಗೆ ಗಮನ ಹರಿಸಿ. ಆರ್ಥಿಕವಾಗಿ ನಷ್ಟವಾಗುವ ಭೀತಿ ಎದುರಾಗಲಿದೆ.  

ಧನು: ಮಾತಿನ ಮೇಲೆ ಸಂಯಮವಿರಲಿ. ನಿಮ್ಮ ಕೆಲವೊಂದು ನಿಷ್ಠುರ ನಡೆ ಇತರರ ಮನಸ್ಸಿಗೆ ಕಿರಿ ಕಿರಿಯಾಗಬಹುದು. ವೈವಾಹಿಕ ಸಂಬಂಧದಲ್ಲಿ ಸಮಸ್ಯೆ ಎದುರಾಗಬಹುದು. ಸಾಲ ಮರುಪಾವತಿಯಾಗಲಿದೆ. ಉದ್ಯೋಗದಲ್ಲಿ ಬದಲಾವಣೆಗೆ ಮನಸ್ಸು ಬಯಸುವುದು.

ಮಕರ: ನಿಮ್ಮ ಸಮಸ್ಯೆಗಳನ್ನು ಇತರರಿಗೆ ಅರ್ಥ ಮಾಡಿಸುವಲ್ಲಿ ಸೋಲುವಿರಿ. ಬಯಸಿದ ಕೆಲಸಗಳು ನಡೆಯದೇ ಮನಸ್ಸಿಗೆ ಬೇಸರವಾಗಬಹುದು. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಕಾರ್ಯನಿಮಿತ್ತ ಸಂಚಾರ ಮಾಡುವಾಗ ಎಚ್ಚರಿಕೆಯಿಂದಿರಿ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಸಂಘಟಿತ ಪ್ರಯತ್ನದಿಂದ ಎದುರಾಗುವ ಸಮಸ್ಯೆಗಳನ್ನು ನಿವಾರಿಸುವಿರಿ. ಆರ್ಥಿಕವಾಗಿ ಸಾಲ ಪಾವತಿಯ ಚಿಂತೆ ಕಾಡಲಿದೆ. ಅವಿವಾಹಿತರಿಗೆ ಹೊಸ ನೆಂಟಸ್ತಿಕೆಗಳು ಕೂಡಿಬರಲಿವೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಮೀನ: ನಿಮ್ಮ ಸಮಸ್ಯೆಯನ್ನು ಮುಕ್ತ ಮನಸ್ಸಿನಿಂದ ಸಂಗಾತಿಯೊಂದಿಗೆ ಹಂಚಿಕೊಳ್ಳುವುದರಿಂದ ಪರಿಹಾರ ಸಿಗಲಿದೆ. ಉದ್ಯೋಗದಲ್ಲಿ ಹೊಸ ಸವಾಲುಗಳಿಗೆ ಸಿದ್ಧರಾಗಿ. ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆಯಿಂದ ಪರಿಹಾರ ಕಂಡುಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Durga Mantra: ದುರ್ಗಾ ಚಾಲೀಸ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments