Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 14 ಮಾರ್ಚ್ 2020 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಅಧಿಕ ಧನವ್ಯಯವಾಗಲಿದೆ. ಸಾಂಸಾರಿಕವಾಗಿ ಮಾನಸಿಕ ನೆಮ್ಮದಿಗೆ ಭಂಗವಾಗುವ ಅನೇಕ ಪ್ರಸಂಗಗಳು ಎದುರಾಗಲಿವೆ. ತಾಳ್ಮೆ ಅಗತ್ಯ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ.

ವೃಷಭ: ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದ್ದು, ಅಂದುಕೊಂಡ ಕೆಲಸಗಳನ್ನು ಸುಗಮವಾಗಿ ನೆರವೇರಿಸುವಿರಿ. ಸ್ವಂತ ವ್ಯಾಪಾರಿಗಳಿಗೆ ಮುನ್ನಡೆ ಕಾಣಬಹುದು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚಗಳ ಬಗ್ಗೆ ಎಚ್ಚರಿಕೆಯಿಂದಿರಿ. ಸರಕಾರಿ ಉದ್ಯೋಗಿಗಳಿಗೆ ಬಡ್ತಿ ಯೋಗವಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ವ್ಯವಹಾರದಲ್ಲಿ ಏರಿಳಿತ ಸಾಮಾನ್ಯ. ಸಂಯಮದಿಂದಿರುವುದು ಮುಖ್ಯ.

ಕರ್ಕಟಕ: ರಾಜಕೀಯ ವರ್ಗದವರ ಸ್ಥಾನ ಮಾನಕ್ಕೆ ಧಕ್ಕೆಯಾಗಬಹುದು. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆಯುಂಟಾಗಬಹುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗಬಹುದು.

ಸಿಂಹ: ಅಧಿಕ ಧನಲಾಭ ತರುವ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರ. ದೈವಾನುಗ್ರಹದಿಂದ ಕೈಹಿಡಿದ ಕೆಲಸಗಳಲ್ಲಿ ಯಶಸ್ಸು ಸಾಧಿಸಲಿದ್ದೀರಿ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ.

ಕನ್ಯಾ: ಮಕ್ಕಳ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಕುಟುಂಬದವರ ಅಭಿಪ್ರಾಯ ತೆಗೆದುಕೊಳ್ಳುವುದು ಮುಖ್ಯ. ಭವಿಷ್ಯದ ಯೋಜನೆ ರೂಪಿಸುವಿರಿ. ಆರ್ಥಿಕವಾಗಿ ಆದಾಯವಿದ್ದರೂ ಅಷ್ಟೇ ಖರ್ಚು ವೆಚ್ಚಗಳಿರಲಿವೆ. ಉದ್ಯೋಗದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ.

ತುಲಾ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆಬರಲಿದ್ದು, ದೂರ ಸಂಚಾರ ಮಾಡಲಿದ್ದೀರಿ. ಸಾಂಸಾರಿಕವಾಗಿ ಭಿನ್ನಾಭಿಪ್ರಾಯದಿಂದ ಮನಸ್ಸಿನ ನೆಮ್ಮದಿಗೆ ಭಂಗವಾಗಲಿದೆ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ವೃಶ್ಚಿಕ: ಕೈ ತಪ್ಪಿ ಹೋಯಿತೆಂದು ಭಾವಿಸಿದ್ದ ಸಂಬಂಧಗಳು ಮತ್ತೆ ಚಿಗುರೊಡೆಯಲಿವೆ. ದುಡುಕಿ ಮಾತನಾಡಬೇಡಿ. ಪೋಷಕರ ಮನಸ್ಸಿಗೆ ಮೆಚ್ಚುಗೆಯಾಗುವಂತಹ ಕೆಲಸ ಮಾಡಲಿದ್ದೀರಿ. ವೃತ್ತಿರಂಗದಲ್ಲಿ ಹಿನ್ನಡೆಯಾದೀತು. ಆದರೆ ತಾಳ್ಮೆ ಕಳೆದುಕೊಳ್ಳಬೇಡಿ.  

ಧನು: ಧಾರ್ಮಿಕ ಕಾರ್ಯದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಮಕ್ಕಳ ವಿಚಾರದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಬೇಡಿ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ವಾಹನ ಚಾಲನೆ ವೃತ್ತಿಯಲ್ಲಿ ಇರುವವರಿಗೆ ಅಪಘಾತದ ಭಯವಿರಲಿದೆ. ಎಚ್ಚರಿಕೆಯಿಂದಿರಿ.

ಮಕರ: ಇಷ್ಟ ಮಿತ್ರರ ಭೇಟಿ, ಭೋಜನ ಸಾಧ್ಯತೆಯಿದೆ. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು, ಕಾಳಜಿ ಅಗತ್ಯ. ಸಾಂಸಾರಿಕವಾಗಿ ಸಂತೋಷಕ್ಕೆ ಕೊರತೆಯಿರದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಅಗತ್ಯ.

ಕುಂಭ: ಮನಸ್ಸಿಗೆ ಸಂತೋಷವೆನಿಸುವ ಕೆಲಸ ಮಾಡಿ. ಬೇರೆಯವರ ಮಾತಿಗೆ ಕಿವಿಗೊಡಬೇಕಿಲ್ಲ. ವಾಹನ ಖರೀದಿ ಯೋಗವಿದೆ. ಸಾಲಗಳು ಮರುಪಾವತಿಯಾಗಲಿದ್ದು, ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮೀನ: ಆಪ್ತರಿಂದ ದೂರವಾದ ಬೇಸರ ಕಾಡಲಿದೆ. ಸಾಂಸಾರಿಕವಾಗಿ ಮಕ್ಕಳಿಗೆ ಅಭಿವೃದ್ಧಿ ಪೂರಕವಾದ ವಾತಾವರಣವಿರಲಿದೆ. ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಹೊಸ ವಸ್ತುಗಳ ಖರೀದಿ ಮಾಡಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ