Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 15 ಮಾರ್ಚ್ 2020 (08:44 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಗೃಹಬಳಕೆ ವಸ್ತುಗಳಿಗಾಗಿ ಧನವ್ಯಯ ಮಾಡಲಿದ್ದೀರಿ. ಸಹೋದರರೊಂದಿಗೆ ಪಾಲು ವ್ಯವಹಾರದಲ್ಲಿ ಭಿನ್ನಾಭಿಪ್ರಾಯವಾಗಬಹುದು. ಹಿರಿಯರ ಮಾತಿಗೆ ಕಿವಿಗೊಡಿ. ರಾಜಕಾರಣಿಗಳಿಗೆ ಮುನ್ನಡೆಯ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಹಿರಿಯರಿಂದ ಬಳವಳಿ ಸ್ವೀಕರಿಸುವಿರಿ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಇಂದು ನಿಮಗೆ ಮಿಶ್ರಫಲವಿದ್ದು, ಕೆಲಸ ಕಾರ್ಯಗಳಲ್ಲಿ ಪ್ರಯತ್ನಪಟ್ಟರೆ ಮಾತ್ರ ಉತ್ತಮ ಫಲ ದೊರೆಯಲಿದೆ. ಆರ್ಥಿಕವಾಗಿ ದುಂದುವೆಚ್ಚಗಳಿಗೆ ಕಡಿವಾಣ ಹಾಕಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಲಿದ್ದು, ಕಾಳಜಿ ವಹಿಸಬೇಕಾಗುತ್ತದೆ.

ಕರ್ಕಟಕ: ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು. ಆಗಾಗ ಸಂಚಾರ ಮಾಡಬೇಕಾಗಿರುವುದರಿಂದ ಖರ್ಚು ವೆಚ್ಚಗಳಾಗಬಹುದು. ನಿಮ್ಮ ಬಹುದಿನಗಳ ಆಸೆ ನೆರವೇರಿಸಲಿದ್ದೀರಿ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಗಳಿಸಲಿದ್ದೀರಿ.

ಸಿಂಹ: ವ್ಯಾಪಾರ, ವ್ಯವಹಾರದಲ್ಲಿ ಮುನ್ನಡೆಯ ಲಾಭವಾಗಲಿದೆ, ಹಾಗಿದ್ದರೂ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ವಾಹನ ಸಂಚಾರದಲ್ಲಿ ಜಾಗ್ರತೆಯಿಂದಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಗೆ ಭಂಗವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಆಕಸ್ಮಿಕವಾಗಿ ಖರ್ಚು ವೆಚ್ಚ ಮಾಡಬೇಕಾದ ಸಂದರ್ಭಗಳು ಬರಲಿವೆ. ವಾಹನ, ಮನೆ ರಿಪೇರಿಗೆ ಧನವ್ಯಯ ಮಾಡಬೇಕಾಗುತ್ತದೆ. ಆದರೆ ದಾಂಪತ್ಯ ಸುಖ ಪಡೆಯುವಿರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ಗೃಹ, ವಾಹನಾದಿ ಖರೀದಿಗಳಿಗೆ ಸೂಕ್ತ ಕಾಲ. ಆರ್ಥಿಕವಾಗಿ ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ವ್ಯವಹಾರದಲ್ಲಿ ಕೊಂಚ ಹಿನ್ನಡೆಯಾದರೂ, ನಷ್ಟವಾಗದು. ನೆರೆಹೊರೆಯವರಿಂದ ಚಾಡಿ ಮಾತು ಕೇಳಿಬಂದೀತು. ಕಾರ್ಯ ನಿಮಿತ್ತ ಕಿರು ಸಂಚಾರ ಮಾಡುವಿರಿ.

ವೃಶ್ಚಿಕ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರೀತಿ ಪಾತ್ರವಾಗಿರುವುದನ್ನು ಪಡೆಯಬೇಕಾದರೆ ಧನವ್ಯಯ ಮಾಡಲೇಬೇಕಾಗುತ್ತದೆ. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಮುನ್ನಡೆ ಸಿಗಲಿದೆ.

ಧನು: ಶತ್ರು ಪೀಡೆಗಳಿದ್ದರೂ ನಿಮ್ಮ ಆತ್ಮವಿಶ್ವಾಸದಿಂದ ಎಲ್ಲವನ್ನೂ ಮೆಟ್ಟಿನಿಲ್ಲುವಿರಿ. ವಿದ್ಯಾರ್ಥಿಗಳಿಗೆ ಶುಭ ಫಲ ಸಿಗಲಿದೆ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ದೇಹಾರೋಗ್ಯದಲ್ಲಿ ಕಾಳಜಿಯಿರಲಿ. ಕೆಳಹಂತದ ನೌಕರರಿಗೆ ಸದ್ಯದಲ್ಲೇ ಸಿಹಿ ಸುದ್ದಿಯಿದೆ.

ಮಕರ: ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕಾಗಬಹುದು. ಗೃಹ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಬಹುದು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆಯಿರಲಿ.

ಕುಂಭ: ವ್ಯವಹಾರದಲ್ಲಿ ನಿಮ್ಮ ಲೆಕ್ಕಾಚಾರಗಳು ಕೈತಪ್ಪಿ ಹೋದಂತೆ ಅನಿಸಬಹುದು. ಕಷ್ಟದ ಸಮಯದಲ್ಲಿ ಮಿತ್ರರ ನೆರವು ಪಡೆಯಲಿದ್ದೀರಿ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ವಾಹನ ಸವಾರರಿಗೆ ದೂರ ಸಂಚಾರದ ಸಾಧ‍್ಯತೆಯಿದೆ.

ಮೀನ: ನಿಮ್ಮ ಅವಿವೇಕದ ವರ್ತನೆಯಿಂದ ಸದವಾಕಾಶವನ್ನು ಕೈ ಚೆಲ್ಲಿ ನಿರಾಸೆ ಅನುಭವಿಸಬೇಕಾದೀತು. ಸಂಗಾತಿಯ ಸಲಹೆಗೆ ಕಿವಿಗೊಡಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಉದ್ಯಮಿಗಳು ಲಾಭ ಗಳಿಸುವರು. ಆರೋಗ್ಯದ ಬಗ್ಗೆ ಎಚ್ಚರ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಪದೋಷ ನಿವಾರಣೆಯಾಗಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋದಾಗ ಈ ಚಿಕ್ಕ ಕೆಲಸ ಮಾಡಿ