Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 15 ಮಾರ್ಚ್ 2020 (08:44 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಗೃಹಬಳಕೆ ವಸ್ತುಗಳಿಗಾಗಿ ಧನವ್ಯಯ ಮಾಡಲಿದ್ದೀರಿ. ಸಹೋದರರೊಂದಿಗೆ ಪಾಲು ವ್ಯವಹಾರದಲ್ಲಿ ಭಿನ್ನಾಭಿಪ್ರಾಯವಾಗಬಹುದು. ಹಿರಿಯರ ಮಾತಿಗೆ ಕಿವಿಗೊಡಿ. ರಾಜಕಾರಣಿಗಳಿಗೆ ಮುನ್ನಡೆಯ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಹಿರಿಯರಿಂದ ಬಳವಳಿ ಸ್ವೀಕರಿಸುವಿರಿ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಇಂದು ನಿಮಗೆ ಮಿಶ್ರಫಲವಿದ್ದು, ಕೆಲಸ ಕಾರ್ಯಗಳಲ್ಲಿ ಪ್ರಯತ್ನಪಟ್ಟರೆ ಮಾತ್ರ ಉತ್ತಮ ಫಲ ದೊರೆಯಲಿದೆ. ಆರ್ಥಿಕವಾಗಿ ದುಂದುವೆಚ್ಚಗಳಿಗೆ ಕಡಿವಾಣ ಹಾಕಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಲಿದ್ದು, ಕಾಳಜಿ ವಹಿಸಬೇಕಾಗುತ್ತದೆ.

ಕರ್ಕಟಕ: ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು. ಆಗಾಗ ಸಂಚಾರ ಮಾಡಬೇಕಾಗಿರುವುದರಿಂದ ಖರ್ಚು ವೆಚ್ಚಗಳಾಗಬಹುದು. ನಿಮ್ಮ ಬಹುದಿನಗಳ ಆಸೆ ನೆರವೇರಿಸಲಿದ್ದೀರಿ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಗಳಿಸಲಿದ್ದೀರಿ.

ಸಿಂಹ: ವ್ಯಾಪಾರ, ವ್ಯವಹಾರದಲ್ಲಿ ಮುನ್ನಡೆಯ ಲಾಭವಾಗಲಿದೆ, ಹಾಗಿದ್ದರೂ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ವಾಹನ ಸಂಚಾರದಲ್ಲಿ ಜಾಗ್ರತೆಯಿಂದಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಗೆ ಭಂಗವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಆಕಸ್ಮಿಕವಾಗಿ ಖರ್ಚು ವೆಚ್ಚ ಮಾಡಬೇಕಾದ ಸಂದರ್ಭಗಳು ಬರಲಿವೆ. ವಾಹನ, ಮನೆ ರಿಪೇರಿಗೆ ಧನವ್ಯಯ ಮಾಡಬೇಕಾಗುತ್ತದೆ. ಆದರೆ ದಾಂಪತ್ಯ ಸುಖ ಪಡೆಯುವಿರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ಗೃಹ, ವಾಹನಾದಿ ಖರೀದಿಗಳಿಗೆ ಸೂಕ್ತ ಕಾಲ. ಆರ್ಥಿಕವಾಗಿ ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ವ್ಯವಹಾರದಲ್ಲಿ ಕೊಂಚ ಹಿನ್ನಡೆಯಾದರೂ, ನಷ್ಟವಾಗದು. ನೆರೆಹೊರೆಯವರಿಂದ ಚಾಡಿ ಮಾತು ಕೇಳಿಬಂದೀತು. ಕಾರ್ಯ ನಿಮಿತ್ತ ಕಿರು ಸಂಚಾರ ಮಾಡುವಿರಿ.

ವೃಶ್ಚಿಕ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರೀತಿ ಪಾತ್ರವಾಗಿರುವುದನ್ನು ಪಡೆಯಬೇಕಾದರೆ ಧನವ್ಯಯ ಮಾಡಲೇಬೇಕಾಗುತ್ತದೆ. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಮುನ್ನಡೆ ಸಿಗಲಿದೆ.

ಧನು: ಶತ್ರು ಪೀಡೆಗಳಿದ್ದರೂ ನಿಮ್ಮ ಆತ್ಮವಿಶ್ವಾಸದಿಂದ ಎಲ್ಲವನ್ನೂ ಮೆಟ್ಟಿನಿಲ್ಲುವಿರಿ. ವಿದ್ಯಾರ್ಥಿಗಳಿಗೆ ಶುಭ ಫಲ ಸಿಗಲಿದೆ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ದೇಹಾರೋಗ್ಯದಲ್ಲಿ ಕಾಳಜಿಯಿರಲಿ. ಕೆಳಹಂತದ ನೌಕರರಿಗೆ ಸದ್ಯದಲ್ಲೇ ಸಿಹಿ ಸುದ್ದಿಯಿದೆ.

ಮಕರ: ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕಾಗಬಹುದು. ಗೃಹ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಬಹುದು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆಯಿರಲಿ.

ಕುಂಭ: ವ್ಯವಹಾರದಲ್ಲಿ ನಿಮ್ಮ ಲೆಕ್ಕಾಚಾರಗಳು ಕೈತಪ್ಪಿ ಹೋದಂತೆ ಅನಿಸಬಹುದು. ಕಷ್ಟದ ಸಮಯದಲ್ಲಿ ಮಿತ್ರರ ನೆರವು ಪಡೆಯಲಿದ್ದೀರಿ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ವಾಹನ ಸವಾರರಿಗೆ ದೂರ ಸಂಚಾರದ ಸಾಧ‍್ಯತೆಯಿದೆ.

ಮೀನ: ನಿಮ್ಮ ಅವಿವೇಕದ ವರ್ತನೆಯಿಂದ ಸದವಾಕಾಶವನ್ನು ಕೈ ಚೆಲ್ಲಿ ನಿರಾಸೆ ಅನುಭವಿಸಬೇಕಾದೀತು. ಸಂಗಾತಿಯ ಸಲಹೆಗೆ ಕಿವಿಗೊಡಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಉದ್ಯಮಿಗಳು ಲಾಭ ಗಳಿಸುವರು. ಆರೋಗ್ಯದ ಬಗ್ಗೆ ಎಚ್ಚರ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments