Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 17 ಮಾರ್ಚ್ 2020 (09:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೈವಾನುಗ್ರಹದಿಂದ ನಿಮ್ಮ ಮೇಲಿದ್ದು ಮನೋಕಾಮನೆಗಳನ್ನು ಪೂರ್ತಿ ಮಾಡುವಿರಿ. ಆದರೆ ಆರೋಗ್ಯ ನಿಮಿತ್ತ ಅನಿರೀಕ್ಷಿತವಾಗಿ ಅಧಿಕ ಧನವ್ಯಯವಾಗಲಿದ್ದು, ಚಿಂತೆಗೀಡುಮಾಡಲಿದೆ. ಸಂಗಾತಿಯೊಂದಿಗೆ ವಿನಾಕಾರಣ ಕೆಂಡ ಕಾರುವುದನ್ನು ಬಿಡಿ.

ವೃಷಭ: ನಿಮ್ಮ ಆಪ್ತರೆನಿಸಿಕೊಂಡವರ ಬೆಲೆ ನಿಮಗೆ ಅರಿವಾಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರೆಯಲಿದೆ. ವೃತ್ತಿರಂಗದಲ್ಲಿ ಮಿಕ್ಕ ವಿಚಾರಗಳಿಗೆ ತಲೆಕೆಡಿಸಿಕೊಳ್ಳದೇ ಕರ್ತವ್ಯದ ಬಗ್ಗೆ ಮಾತ್ರ ಗಮನಹರಿಸಿ. ಕೋರ್ಟು ಕಚೇರಿ ವ್ಯವಹಾರದಲ್ಲಿ ವಿಳಂಬವಾದೀತು.

ಮಿಥುನ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧ ಸಿಗದೇ ಕಾಯುವ ಪರಿಸ್ಥಿತಿ ಎದುರಾದೀತು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ನಿಮ್ಮ ಉದಾರ ಬುದ್ಧಿಯಿಂದ ಸಂಗಾತಿಯಿಂದ ಬೈಸಿಕೊಳ್ಳಬೇಕಾದೀತು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕರ್ಕಟಕ: ಗ್ರಹಗತಿಗಳ ಪ್ರತಿಕೂಲ ದೃಷ್ಟಿಯಿಂದ ನೀವು ಅಂದುಕೊಂಡ ಕೆಲಸ ಕಾರ್ಯಗಳಲ್ಲಿ ಕೊಂಚ ವಿಳಂಬವಾದೀತು. ನಿರುದ್ಯೋಗಿಗಳಿಗೆ ಸಹನೆ ಬೇಕು. ಉತ್ತಮ ಅವಕಾಶಗಳಿಗಾಗಿ ಕಾಯಬೇಕಾಗುತ್ತದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಆರ್ಥಿಕವಾಗಿ ಸಾಕಷ್ಟು ಆದಾಯವಿದ್ದು, ವ್ಯವಹಾರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದೆ. ದೈವಾನುಕೂಲದಿಂದ ಅಂದುಕೊಂಡಿದ್ದನ್ನು ಸಾಧಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆ, ಸಮಾಧಾನ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಕುಟುಂಬದಲ್ಲಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಎಲ್ಲವನ್ನೂ ನಿಭಾಯಿಸಲು ಮುಖ್ಯವಾಗಿ ತಾಳ್ಮೆ ಬೇಕು. ವಿದ್ಯಾರ್ಥಿಗಳ ಪ್ರಯತ್ನ ಬಲಕ್ಕೆ ಪ್ರತಿಫಲ ಸಿಗಲಿದೆ. ಉದ್ಯೋಗಸ್ಥರಿಗೆ ಉದ್ಯೋಗ ಬದಲಾವಣೆಗೆ ಅವಕಾಶಗಳು ಸಿಗಲಿವೆ.

ತುಲಾ: ಉದ್ಯೋಗಿಗಳಿಗೆ ವರ್ಗಾವಣೆಯ ಕಿರಿ ಕಿರಿ ಎದುರಾಗಲಿದೆ. ರಾಜಕೀಯ ವರ್ಗದವರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ಸಾರ್ವಜನಿಕವಾಗಿ ನಿಮ್ಮ ಕೆಲಸಗಳಿಗೆ ಪ್ರಶಂಸೆ ಸಿಗಲಿದೆ. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ದಿನದಂತ್ಯಕ್ಕೆ ಶುಭ ಸುದ್ದಿ.

ವೃಶ್ಚಿಕ: ವೃತ್ತಿರಂಗದಲ್ಲಿ ಉನ್ನತ ಸ್ಥಾನಮಾನ ಯೋಗವಿದೆ.  ಮೇಲಧಿಕಾರಿಗಳೊಂದಿಗೆ ಸಂಘರ್ಷಕ್ಕೆ ಎಡೆ ಮಾಡಿಕೊಡಬೇಡಿ. ನಾನಾ ಮೂಲಗಳಿಂದ ಧನಾಗಮನವಾಗಲಿದೆ. ಸಾಂಸಾರಿಕವಾಗಿ ಮನೆಯಲ್ಲಿ ಸಂತಸದ ಕ್ಷಣ ಕಳೆಯಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಅವಿವಾಹಿತರು ತಮ್ಮ ವಿವಾಹದ ಬಗ್ಗೆ ಯೋಚನೆ ಮಾಡಲಿದ್ದಾರೆ. ವ್ಯಾಪಾರ, ವ್ಯವಹಾರಗಳು ತಕ್ಕಮಟ್ಟಿಗೆ ಲಾಭ ಕೊಡಲಿವೆ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಕಿರು ಸಂಚಾರ ಮಾಡುವಿರಿ.

ಮಕರ: ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯ ಮಾಡಲಿದ್ದೀರಿ. ವ್ಯವಹಾರದಲ್ಲಿ ಓಡಾಟ ಅಧಿಕವಾಗಿ ದೇಹಾಯಾಸವಾಗಲಿದೆ. ಹೊಸ ಪ್ರಯತ್ನಗಳನ್ನು ಮಾಡುವುದನ್ನು ಬಿಡಬೇಡಿ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಸಿಗಲಿವೆ.

ಕುಂಭ: ಮಹಿಳೆಯರಿಗೆ ಉದ್ಯೋಗದಲ್ಲಿ ಉನ್ನತ ಸ್ಥಾನ ಮಾನದ ಯೋಗವಿದೆ. ಚಿನ್ನಾಭರಣ ಖರೀದಿಯಿಂದ ಲಾಭವಾಗುವುದು. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿ ವಹಿಸಿ. ಕುಲದೇವರ ಪ್ರಾರ್ಥನೆಯಿಂದ ಒಳಿತಾಗುವುದು.

ಮೀನ: ನಯವಂಚಕರು ನಿಮ್ಮ ವಿಶ್ವಾಸದ ದುರುಪಯೋಗಪಡಿಸಿಕೊಳ್ಳಲಿದ್ದಾರೆ. ದುಡುಕಿ ಮಾತನಾಡಬೇಡಿ. ವ್ಯವಹಾರದಲ್ಲಿ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಿ. ಆರ್ಥಿಕವಾಗಿ ನಾನಾ ರೀತಿಯ ಖರ್ಚು ವೆಚ್ಚಗಳು ಕಂಡುಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

Share this Story:

Follow Webdunia kannada

ಮುಂದಿನ ಸುದ್ದಿ

ನೀವು ಮಾಡುವ ಈ ತಪ್ಪಿನಿಂದ ನೀವು ಕಟ್ಟಲು ಹೊರಟ ಮನೆ ಕೆಲಸ ಅರ್ಧಕ್ಕೆ ನಿಲ್ಲುತ್ತದೆ