Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 17 ಮಾರ್ಚ್ 2020 (09:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೈವಾನುಗ್ರಹದಿಂದ ನಿಮ್ಮ ಮೇಲಿದ್ದು ಮನೋಕಾಮನೆಗಳನ್ನು ಪೂರ್ತಿ ಮಾಡುವಿರಿ. ಆದರೆ ಆರೋಗ್ಯ ನಿಮಿತ್ತ ಅನಿರೀಕ್ಷಿತವಾಗಿ ಅಧಿಕ ಧನವ್ಯಯವಾಗಲಿದ್ದು, ಚಿಂತೆಗೀಡುಮಾಡಲಿದೆ. ಸಂಗಾತಿಯೊಂದಿಗೆ ವಿನಾಕಾರಣ ಕೆಂಡ ಕಾರುವುದನ್ನು ಬಿಡಿ.

ವೃಷಭ: ನಿಮ್ಮ ಆಪ್ತರೆನಿಸಿಕೊಂಡವರ ಬೆಲೆ ನಿಮಗೆ ಅರಿವಾಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರೆಯಲಿದೆ. ವೃತ್ತಿರಂಗದಲ್ಲಿ ಮಿಕ್ಕ ವಿಚಾರಗಳಿಗೆ ತಲೆಕೆಡಿಸಿಕೊಳ್ಳದೇ ಕರ್ತವ್ಯದ ಬಗ್ಗೆ ಮಾತ್ರ ಗಮನಹರಿಸಿ. ಕೋರ್ಟು ಕಚೇರಿ ವ್ಯವಹಾರದಲ್ಲಿ ವಿಳಂಬವಾದೀತು.

ಮಿಥುನ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧ ಸಿಗದೇ ಕಾಯುವ ಪರಿಸ್ಥಿತಿ ಎದುರಾದೀತು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ನಿಮ್ಮ ಉದಾರ ಬುದ್ಧಿಯಿಂದ ಸಂಗಾತಿಯಿಂದ ಬೈಸಿಕೊಳ್ಳಬೇಕಾದೀತು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕರ್ಕಟಕ: ಗ್ರಹಗತಿಗಳ ಪ್ರತಿಕೂಲ ದೃಷ್ಟಿಯಿಂದ ನೀವು ಅಂದುಕೊಂಡ ಕೆಲಸ ಕಾರ್ಯಗಳಲ್ಲಿ ಕೊಂಚ ವಿಳಂಬವಾದೀತು. ನಿರುದ್ಯೋಗಿಗಳಿಗೆ ಸಹನೆ ಬೇಕು. ಉತ್ತಮ ಅವಕಾಶಗಳಿಗಾಗಿ ಕಾಯಬೇಕಾಗುತ್ತದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಆರ್ಥಿಕವಾಗಿ ಸಾಕಷ್ಟು ಆದಾಯವಿದ್ದು, ವ್ಯವಹಾರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದೆ. ದೈವಾನುಕೂಲದಿಂದ ಅಂದುಕೊಂಡಿದ್ದನ್ನು ಸಾಧಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆ, ಸಮಾಧಾನ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಕುಟುಂಬದಲ್ಲಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಎಲ್ಲವನ್ನೂ ನಿಭಾಯಿಸಲು ಮುಖ್ಯವಾಗಿ ತಾಳ್ಮೆ ಬೇಕು. ವಿದ್ಯಾರ್ಥಿಗಳ ಪ್ರಯತ್ನ ಬಲಕ್ಕೆ ಪ್ರತಿಫಲ ಸಿಗಲಿದೆ. ಉದ್ಯೋಗಸ್ಥರಿಗೆ ಉದ್ಯೋಗ ಬದಲಾವಣೆಗೆ ಅವಕಾಶಗಳು ಸಿಗಲಿವೆ.

ತುಲಾ: ಉದ್ಯೋಗಿಗಳಿಗೆ ವರ್ಗಾವಣೆಯ ಕಿರಿ ಕಿರಿ ಎದುರಾಗಲಿದೆ. ರಾಜಕೀಯ ವರ್ಗದವರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ಸಾರ್ವಜನಿಕವಾಗಿ ನಿಮ್ಮ ಕೆಲಸಗಳಿಗೆ ಪ್ರಶಂಸೆ ಸಿಗಲಿದೆ. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ದಿನದಂತ್ಯಕ್ಕೆ ಶುಭ ಸುದ್ದಿ.

ವೃಶ್ಚಿಕ: ವೃತ್ತಿರಂಗದಲ್ಲಿ ಉನ್ನತ ಸ್ಥಾನಮಾನ ಯೋಗವಿದೆ.  ಮೇಲಧಿಕಾರಿಗಳೊಂದಿಗೆ ಸಂಘರ್ಷಕ್ಕೆ ಎಡೆ ಮಾಡಿಕೊಡಬೇಡಿ. ನಾನಾ ಮೂಲಗಳಿಂದ ಧನಾಗಮನವಾಗಲಿದೆ. ಸಾಂಸಾರಿಕವಾಗಿ ಮನೆಯಲ್ಲಿ ಸಂತಸದ ಕ್ಷಣ ಕಳೆಯಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಅವಿವಾಹಿತರು ತಮ್ಮ ವಿವಾಹದ ಬಗ್ಗೆ ಯೋಚನೆ ಮಾಡಲಿದ್ದಾರೆ. ವ್ಯಾಪಾರ, ವ್ಯವಹಾರಗಳು ತಕ್ಕಮಟ್ಟಿಗೆ ಲಾಭ ಕೊಡಲಿವೆ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಕಿರು ಸಂಚಾರ ಮಾಡುವಿರಿ.

ಮಕರ: ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯ ಮಾಡಲಿದ್ದೀರಿ. ವ್ಯವಹಾರದಲ್ಲಿ ಓಡಾಟ ಅಧಿಕವಾಗಿ ದೇಹಾಯಾಸವಾಗಲಿದೆ. ಹೊಸ ಪ್ರಯತ್ನಗಳನ್ನು ಮಾಡುವುದನ್ನು ಬಿಡಬೇಡಿ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಸಿಗಲಿವೆ.

ಕುಂಭ: ಮಹಿಳೆಯರಿಗೆ ಉದ್ಯೋಗದಲ್ಲಿ ಉನ್ನತ ಸ್ಥಾನ ಮಾನದ ಯೋಗವಿದೆ. ಚಿನ್ನಾಭರಣ ಖರೀದಿಯಿಂದ ಲಾಭವಾಗುವುದು. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿ ವಹಿಸಿ. ಕುಲದೇವರ ಪ್ರಾರ್ಥನೆಯಿಂದ ಒಳಿತಾಗುವುದು.

ಮೀನ: ನಯವಂಚಕರು ನಿಮ್ಮ ವಿಶ್ವಾಸದ ದುರುಪಯೋಗಪಡಿಸಿಕೊಳ್ಳಲಿದ್ದಾರೆ. ದುಡುಕಿ ಮಾತನಾಡಬೇಡಿ. ವ್ಯವಹಾರದಲ್ಲಿ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಿ. ಆರ್ಥಿಕವಾಗಿ ನಾನಾ ರೀತಿಯ ಖರ್ಚು ವೆಚ್ಚಗಳು ಕಂಡುಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments