Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 18 ಮಾರ್ಚ್ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸರಕಾರಿ ಅಧಿಕಾರಿ ವರ್ಗದವರಿಗೆ ವರ್ಗಾವಣೆಯ ಭೀತಿಯಿದೆ. ದೇಹಾರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾಗಿ ಚಿಂತೆಗೆ ಕಾರಣವಾಗಲಿದೆ. ಸಾಂಸಾರಿಕವಾಗಿ ತಾಳ್ಮೆ, ಹೊಂದಾಣಿಕೆ ಅಗತ್ಯ. ಕಾರ್ಯನಿಮಿತ್ತ ಆಗಾಗ ಓಡಾಟ ನಡೆಸಬೇಕಾಗಬಹುದು.

ವೃಷಭ: ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ಕಂಡುಬರಲಿದೆ. ಗೃಹನಿರ್ಮಾಣ ಕಾರ್ಯಗಳಿಗೆ ಕೈ ಹಾಕಲು ಇದು ಸಕಾಲ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯವಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ.

ಮಿಥುನ: ನ್ಯಾಯಾಲಯದ ಕಲಾಪದಲ್ಲಿ ಹಿನ್ನಡೆಯಾದೀತು. ಹಿತಶತ್ರುಗಳಿಂದ ತೊಂದರೆಯಾಗಲಿದೆ. ಎಚ್ಚರಿಕೆ ಅಗತ್ಯ. ವ್ಯವಹಾರದಲ್ಲಿ ಲೆಕ್ಕಾಚಾರಗಳ ಬಗ್ಗೆ ನಿಗಾ ಇರಲಿ. ವಿದ್ಯಾರ್ಥಿಗಳಿಗೆ ವಿದೇಶ ಯಾನದ ಯೋಗವಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ಅವಿವಾಹಿತರಿಗೆ ವಿವಾಹ ಪ್ರಯತ್ನ ನಡೆಸಲು ಇದು ಸಕಾಲ. ನೂತನ ದಂಪತಿಗಳಿಗೆ ಮಧು ಚಂದ್ರ ಭಾಗ್ಯವಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಕಂಡುಬರಲಿದೆ. ದುರ್ಜನರಿಂದ ದೂರವಿರುವುದೇ ಉತ್ತಮ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಎಲ್ಲವೂ ನಿಮ್ಮ ಪ್ರತಿಕೂಲವಾಗಿ ನಡೆಯುತ್ತದೆ ಎಂಬ ಭಾವನೆ ಮೂಡಲಿದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಅಗತ್ಯ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ಕೌಟುಂಬಿಕವಾಗಿ ಹೆಚ್ಚಿನ ಹೊಣೆಗಾರಿಕೆ ಹೊರಬೇಕಾಗುತ್ತದೆ.

ಕನ್ಯಾ: ಅಧಿಕ ಧನಲಾಭ ತರುವ ಯೋಜನೆಗಳಿಗೆ ಕೈಹಾಕುವ ಮುನ್ನ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ. ಮನೆರಿಪೇರಿ ಇತ್ಯಾದಿಗಳಿಗೆ ಖರ್ಚು ವೆಚ್ಚಗಳಾಗಲಿವೆ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ತುಲಾ: ವ್ಯವಹಾರ ನಿಮಿತ್ತ ಅಧಿಕ ಓಡಾಟದಿಂದ ದೇಹಾಯಾಸವಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಹಣಕಾಸಿನ ಅಡಚಣೆಯಿಂದಾಗಿ ಅಂದುಕೊಂಡ ಕೆಲಸ ನೆರವೇರಿಸಲು ತೊಂದರೆಯಾಗಬಹುದು.

ವೃಶ್ಚಿಕ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹಿತಶತ್ರುಗಳ ಕಾಟದಿಂದ ಕೈಗೆ ಬಂದ ಭಾಗ್ಯ ಬಾಯಿಗೆ ಬರದಂತಾಗಬಹುದು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಧನು: ಕಾರ್ಯರಂಗದಲ್ಲಿ ಯಶಸ್ಸಿಗಾಗಿ ದುಪ್ಪಟ್ಟು ಶ್ರಮವಹಿಸಬೇಕಾಗುತ್ತದೆ. ದುಡುಕು ಮಾತಿಗೆ ಕಡಿವಾಣ ಹಾಕುವುದು ಉತ್ತಮ. ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಮನೆಗೆ ಅತಿಥಿಗಳ ಆಗಮನವಾಗಲಿದೆ. ಮಕ್ಕಳಿಂದ ಸಂತಸ ಸಿಗಲಿದೆ.

ಮಕರ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಪ್ರಯತ್ನಪಡುತ್ತಿದ್ದರೆ ಅಡೆತಡೆಗಳು ತೋರಿಬಂದಾವು. ಕುಲದೇವರ ಪ್ರಾರ್ಥನೆ ನಡೆಸುವುದು ಉತ್ತಮ. ಯಾವುದೇ ಕೆಲಸ ನಿರೀಕ್ಷಿತ ರೀತಿಯಲ್ಲಿ ನಡೆಯದೇ ಬೇಸರವಾಗಬಹುದು. ಆದರೆ ತಾಳ್ಮೆ ಕಳೆದುಕೊಳ್ಳಬೇಡಿ.

ಕುಂಭ: ಅನಗತ್ಯ ವಿಚಾರಗಳಿಗೆ ಚಿಂತೆ ಮಾಡುವುದನ್ನು ಬಿಡಿ. ಮಕ್ಕಳ ಆರೋಗ್ಯ ಸಮಸ್ಯೆ ಚಿಂತೆಗೀಡು ಮಾಡುವುದು. ಪುಣ್ಯ ಕ್ಷೇತ್ರಗಳ ಸಂದರ್ಶನ ಮಾಡುವಿರಿ. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಹಳೆಯ ಸಂಬಂಧಗಳು ಮರಳಿ ಕೂಡಿಕೊಳ್ಳಲಿದೆ.

ಮೀನ: ಸಾಂಸಾರಿಕವಾಗಿ ಸಂತಸದ ದಿನಗಳಿದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ಸಹೋದರಿಯರ ವಿವಾಹ ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಆದರೆ ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ಎದುರಾಗಲಿವೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments