Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 19 ಮಾರ್ಚ್ 2020 (09:26 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೈವಾನುಗ್ರಹದಿಂದ ನೀವು ಅಂದುಕೊಂಡಿದ್ದನ್ನು ಸಾಧಿಸುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಅನಿರೀಕ್ಷಿತ ಖರ್ಚುಗಳು ಬರಬಹುದು. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಬೇರೆಯವರ ಮಾತಿನಿಂದ ಪ್ರಚೋದನೆಗೊಳಗಾಗಬೇಡಿ.

ವೃಷಭ: ಸಂಸಾರದಲ್ಲಿ ಸಾಮರಸ್ಯದ ಕೊರತೆ ಕಂಡುಬರಬಹುದು. ಮಾನಸಿಕ ಒತ್ತಡ ಕಂಡುಬರಲಿದೆ. ಕಾರ್ಯನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಪ್ರೀತಿ ಪಾತ್ರರಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಆದರೆ ಪ್ರಯತ್ನಗಳಿಗೆ ತಕ್ಕ ಫಲ ಇದ್ದೇ ಇರುತ್ತದೆ.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಲೆಕ್ಕಾಚಾರ ತಪ್ಪಿಹೋದಂತೆ ಅನಿಸಬಹುದು. ಪ್ರಯತ್ನಬಲದಿಂದಲೇ ಕಾರ್ಯ ಸಾಧನೆ ಮಾಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಕಾರ್ಯರಂಗದಲ್ಲಿ ನಿಮ್ಮ ಕೆಲಸ ಮುಗಿಸಬೇಕಾದರೆ ಕಠಿಣ ಪರಿಶ್ರಮಪಡಲೇಬೇಕು. ವಾದ ವಿವಾದಗಳಿಂದ ದೂರವಿರುವುದು ಉತ್ತಮ. ಹಿರಿಯರ ಬುದ್ಧಿ ಮಾತುಗಳು ಅಪಥ್ಯವೆನಿಸಬಹುದು. ಸಂಗಾತಿಗೆ ಉಡುಗೊರೆ ನೀಡಲಿದ್ದೀರಿ.

ಸಿಂಹ: ವಾಹನ, ಭೂಮಿ ಖರೀದಿಗೆ ಇದು ಸಕಾಲ. ಆರ್ಥಿಕವಾಗಿ ನಿಮ್ಮ ಲೆಕ್ಕಾಚಾರಗಳು ಸರಿಯಾಗಿ ಕೆಲಸ ಮಾಡಲಿವೆ. ಅವಿವಾಹಿತರಿಗೆ ಶೀಘ್ರ ವಿವಾಹ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಅದೃಷ್ಟಬಲವಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಹಿರಿಯರ ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಆದರೆ ಪ್ರೀತಿ ಪಾತ್ರರಿಂದ ದೂರವಾಗುವ ಅಗಲುವಿಕೆಯ ನೋವು ಕಾಡಲಿದೆ. ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಹಣಕಾಸಿನ ಹರಿವಿಗೆ ತೊಂದರಯಿರದು.

ತುಲಾ: ಬಂಧು ಮಿತ್ರರ ಸಹಕಾರದಿಂದ ನೀವು ಅಂದುಕೊಂಡ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಪಾಲು ಬಂಡವಾಳ ಹೂಡಿಕೆ ವ್ಯವಹಾರ ಮಾಡುವವರಿಗೆ ಮುನ್ನಡೆಯಿರಲಿದೆ. ಮಹಿಳೆಯರಿಗೆ ಆರೋಗ್ಯದಲ್ಲಿ ಸಮಸ್ಯೆ ಕಂಡುಬರಬಹುದು. ಎಚ್ಚರಿಕೆ ಅಗತ್ಯ.

ವೃಶ್ಚಿಕ: ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯಿರಲಿದೆ. ವೈದ್ಯಕೀಯ ಶಿಕ್ಷಣ ಮಾಡುವವರಿಗೆ ಕಠಿಣ ಸವಾಲುಗಳು ಎದುರಾಗಲಿವೆ. ಆರ್ಥಿಕವಾಗಿ ಅಭಿವೃದ್ಧಿ ಗೋಚರಕ್ಕೆ ಬರಲಿದೆ. ಅವಿವಾಹಿತರು ಉತ್ತಮ ಸಂಬಂಧಕ್ಕೆ ಕೆಲವು ದಿನ ಕಾಯುವುದು ಒಳಿತು.

ಧನು: ಚಿಂತಿತ ಕಾರ್ಯಗಳು ನಿಧಾನಗತಿಯಲ್ಲಿ ನಡೆಯಲಿವೆ. ಮಾನಸಿಕವಾಗಿ ನಿರುತ್ಸಾಹ ಕಾಡಲಿದೆ. ಆದಾಯವಿದ್ದರೂ ಖರ್ಚು ವೆಚ್ಚದ ಬಗ್ಗೆ ಹಿಡಿತ ಅಗತ್ಯ. ಸಾಂಸಾರಿಕವಾಗಿ ಬಂಧು ಬಳಗದವರ ಪ್ರೀತಿಗೆ ಪಾತ್ರವಾಗಲಿದ್ದೀರಿ. ದಿನದಂತ್ಯಕ್ಕೆ ಶುಭ ಸುದ್ದಿ.

ಮಕರ: ದೈವಾನುಗ್ರಹದಿಂದ ನಿಮ್ಮ ಮನೋಭಿಲಾಷೆಗಳು ಪೂರ್ತಿಯಾಗಲಿವೆ. ವಾಹನ ಸಂಚಾರದಿಂದ ದೇಹಾಯಾಸವಾಗಬಹುದು. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಕೌಟುಂಬಿಕವಾಗಿ ಸಂತಸದ ದಿನವಾಗಿರಲಿದೆ.

ಕುಂಭ: ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗ ಸಿಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿ ಬರಲಿವೆ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ದೊರೆಯಲಿದೆ. ಹೊಸ ಯೋಜನೆಗಳಿಗೆ ಕೈ ಹಾಕುವಿರಿ. ದೇವಾಲಯ ಸಂದರ್ಶನ ಯೋಗವಿದೆ.

ಮೀನ: ಕೆಳ ಹಂತದ ನೌಕರ ವರ್ಗಕ್ಕೆ ಮುನ್ನಡೆಯ ಯೋಗವಿದೆ. ಗೃಹ ಸಂಬಂಧೀ ಕೆಲಸಗಳಿಗೆ ಕೈ ಹಾಕಿದರೆ ಅಡೆತಡೆಗಳು ಗ್ಯಾರಂಟಿ. ದೇಹಾರೋಗ್ಯದ ಬಗ್ಗೆ ಗಮನಕೊಡುವುದು ಅಗತ್ಯ. ಮಹಿಳೆಯರು ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments