Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 23 ಮಾರ್ಚ್ 2020 (09:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಆದರೆ ಸಾಂಸಾರಿಕವಾಗಿ ಅನಗತ್ಯ ವಾದ ವಿವಾದಗಳಿಗೆ ಅವಕಾಶ ಕೊಡಬೇಡಿ. ಸಂಯಮ ಕಾಪಾಡಿಕೊಳ್ಳಬೇಕಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ವೃಷಭ: ವೃತ್ತಿರಂಗದಲ್ಲಿ ಅಧಿಕ ಕಾರ್ಯದೊತ್ತಡವರಲಿದ್ದು, ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಬೇಕಿದೆ. ಹೊಸ ಯೋಜನೆಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಮಿಥುನ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಚಿಂತಿತ ಕಾರ್ಯಗಳನ್ನು ಜಾರಿಗೆ ತರಲು ಕೆಲವು ಅಡೆತಡೆಗಳು ತೋರಿಬರಲಿವೆ.  ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಮನಸ್ಸಿನ ನೆಮ್ಮದಿಗಾಗಿ ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಕಾರ್ಯಕ್ಷೇತ್ರದಲ್ಲಿ ಬರುವ ವಿಘ್ನಗಳನ್ನು ನಿವಾರಿಸಲು ಕುಲದೇವರ ಪ್ರಾರ್ಥನೆ ಮಾಡಿ ಮುನ್ನಡೆಯಿರಿ. ಸಂಗಾತಿಯ ಸಹಕಾರ ಸಿಗಲಿದೆ. ಇಷ್ಟ ಭೋಜನ ಮಾಡುವ ಯೋಗವಿದೆ. ಆಕಸ್ಮಿಕವಾಗಿ ಧನಲಾಭವಾಗಲಿದೆ. ದುಂದುವೆಚ್ಚಗಳಿಗೆ ಕಡಿವಾಣ ಹಾಕಬೇಕು.

ಸಿಂಹ: ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಲು ವಿಘ್ನಗಳು ಎದುರಾಗಲಿವೆ. ವಾಹನ ಸವಾರರಿಗೆ ಆಕಸ್ಮಿಕ ಧನಲಾಭ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಬರುವ ಸವಾಲುಗಳಿಗೆ ನಿಮ್ಮ ಕ್ರಿಯಾಶೀಲತೆಯಿಂದ ಪರಿಹಾರ ಕಂಡುಕೊಳ್ಳುವಿರಿ. ಇಷ್ಟ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಸರಕಾರಿ ಉದ್ಯೋಗಿಗಳಿಗೆ ಮುನ್ನಡೆಯ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಸ್ವಯಂ ವೃತ್ತಿಯವರಿಗೆ ವ್ಯವಹಾರದಲ್ಲಿ ಅಧಿಕ ಧನಲಾಭ ತರುವ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಭೂಮಿ, ಮನೆ ಖರೀದಿಗೆ ಇದು ಸಕಾಲ. ಗೃಹೋಪಯೋಗಿ ವಸ್ತುಗಳಿಗೆ ಹೆಚ್ಚಿನ ಧನವ್ಯಯ ಮಾಡಲಿದ್ದೀರಿ. ಸಂಗಾತಿಗೆ ಉಡುಗೊರೆ ನೀಡಲಿದ್ದೀರಿ.

ವೃಶ್ಚಿಕ: ನಿಮ್ಮ ಕೆಲವೊಂದು ನಿರ್ಧಾರಗಳು ಪ್ರೀತಿ ಪಾತ್ರರಿಗೆ ಹಿಡಿಸದೇ ಹೋಗಬಹದು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಹಿನ್ನಡೆಯಾಗಲಿದೆ. ಹಿತಶತ್ರುಗಳ ಬಗ್ಗೆ ಎಚ್ಚರವಾಗಿರಬೇಕು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ.

ಧನು: ಅನಿರೀಕ್ಷಿತವಾಗಿ ಮನೆಗೆ ನೆಂಟರಿಷ್ಟರ ಆಗಮನವಾಗಲಿದ್ದು, ನಿಮ್ಮ ಮೇಲೆ ಹೆಚ್ಚಿನ ಕಾರ್ಯದೊತ್ತಡ ಬೀಳಲಿದೆ. ಮಕ್ಕಳ ವಿಚಾರದಲ್ಲಿ ಅನಗತ್ಯ ಚಿಂತೆ ಮಾಡಬೇಡಿ. ಅವಿವಾಹಿತರು ಉತ್ತಮ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಒಳಿತು.

ಮಕರ: ಎಂದೋ ಅಂದುಕೊಂಡಿದ್ದ ಕೆಲಸ ಕಾರ್ಯಗಳಿಗೆ ಚಾಲನೆ ನೀಡಲಿದ್ದೀರಿ. ದೈವಾನುಗ್ರಹದಿಂದ ನಿಮ್ಮ ಕೆಲಸಗಳಲ್ಲಿ ಇಂದು ಯಶಸ್ಸು ಕಾಣುವಿರಿ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ.

ಕುಂಭ: ಅಧಿಕ ಧನಾರ್ಜನೆ ಮಾಡುವ ದುರಾಲೋಚನೆಯಿಂದ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಕಡಿವಾಣ ಹಾಕುವುದು ಅಗತ್ಯ. ದೈನಂದಿನ ಕೆಲಸಗಳಲ್ಲಿ ನಿರುತ್ಸಾಹ ಕಾಡಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಮೀನ: ವೃತ್ತಿರಂಗದಲ್ಲಿ ಹೆಚ್ಚಿನ ಕಾರ್ಯಲಾಭಕ್ಕೆ ಮಿತ್ರರ ಸಹಕಾರ ದೊರೆಯಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಮುನ್ನಡೆ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ಕಿರು ಸಂಚಾರ ಮಾಡಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments