Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 26 ಮಾರ್ಚ್ 2020 (09:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಸಂಬಂಧವಾಗಿ ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕಾಗುತ್ತದೆ. ಕಾರ್ಯಕ್ಷೇತ್ರದಲ್ಲಿ ಅಂದುಕೊಂಡ ಕೆಲಸಗಳಿಗೆ ಅಡೆತಡೆಗಳು ತೋರಿಬರಲಿವೆ. ಆತ್ಮವಿಶ್ವಾಸದಿಂದ ನಿಭಾಯಿಸಿ. ಆರೋಗ್ಯದ ಬಗ್ಗೆ ಚಿಂತೆಯಾಗಲಿದೆ.

ವೃಷಭ: ದೈವಾನುಕೂಲದಿಂದ ಇಂದು ನೀವು ಅಂದುಕೊಂಡ ಕೆಲಸಗಳು ನೆರವೇರಲಿದೆ. ವೃತ್ತಿರಂಗದಲ್ಲಿ ಮುನ್ನಡೆಯಿರಲಿದೆ. ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಎಲ್ಲಾ ಇದ್ದರೂ ಅನುಭವಿಸಲಾಗದ ಸ್ಥಿತಿ ಎದುರಾಗಲಿದೆ. ಇನ್ನೊಬ್ಬರಿಗೆ ಸಹಾಯ ಮಾಡಬೇಕೆನಿಸದರೂ ಅಸಹಾಯಕತೆ ಕಾಡಲಿದೆ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚಲಿದೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಕರ್ಕಟಕ: ಸ್ವಯಂ ವೃತ್ತಿಯವರಿಗೆ ಮುನ್ನಡೆಯಿರಲಿದೆ. ವೃತ್ತಿರಂಗದಲ್ಲಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕೆ ಮಿತ್ರರ ಸಹಕಾರ ಪಡೆಯುವಿರಿ. ಕೌಟುಂಬಿಕವಾಗಿ ಹೆಚ್ಚುವರಿ ಹೊಣೆಗಾರಿಕೆ ಬೀಳಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಸಿಂಹ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಸ್ಥಾನ ಮಾನ ವೃದ್ಧಿಯಾಗಲಿದೆ. ಸಾಮಾಜಿಕವಾಗಿ ನಿಮ್ಮೆ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ಸಂಗಾತಿಯ ಪ್ರೀತಿಗೆ ಪಾತ್ರರಾಗಲಿದ್ದೀರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ. ಇಷ್ಟದೇವರ ಪ್ರಾರ್ಥನೆ ಮಾಡಿ.

ಕನ್ಯಾ: ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಕಾಲ ಕಳೆಯಲಿದ್ದೀರಿ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ಗೃಹ ಬಳಕೆ ವಸ್ತುಗಳ ಖರೀದಿಗಾಗಿ ಧನವ್ಯಯ ಮಾಡಲಿದ್ದೀರಿ. ನಿರುದ್ಯೋಗಿಗಳು ಸ್ವ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದಾರೆ.

ತುಲಾ: ನೀವು ಬಹುದಿನಗಳಿಂದ ನೆನೆಸಿಕೊಳ್ಳುತ್ತಿದ್ದ ಮಿತ್ರನ ಭೇಟಿ ಮನಸ್ಸಿಗೆ ಸಂತಸ ನೀಡಲಿದೆ. ಕಾರ್ಯಕ್ಷೇತ್ರದಲ್ಲಿ ಅಡಚಣೆಗಳು ತೋರಿಬಂದೀತು. ಕೆಲವು ದಿನ ತಾಳ್ಮೆಯಿಂದ ಕಾಯುವುದು ಒಳಿತು. ದೇಹಾರೋಗ್ಯದಲ್ಲಿ ಏರುಪೇರಾದೀತು. ಎಚ್ಚರ.

ವೃಶ್ಚಿಕ: ಸಹೋದರರೊಂದಿಗೆ ಆಸ್ತಿ ವಿಚಾರವಾಗಿ ಕಿರಿ ಕಿರಿಯಾದೀತು. ನಿಮ್ಮ ಕೆಲವೊಂದು ನಿರ್ಧಾರಗಳು ಸಂಗಾತಿಯ ಅಸಮಾಧಾನಕ್ಕೆ ಕಾರಣವಾದೀತು. ನೆರೆಹೊರೆಯವರ ಚಾಡಿ ಮಾತುಗಳನ್ನು ಅಲಕ್ಷಿಸುವುದು ಒಳಿತು. ಕುಲದೇವರ ಪ್ರಾರ್ಥನೆ ಮಾಡಿ.

ಧನು: ನಿಮ್ಮ ಉತ್ತಮ ನಡುವಳಿಕೆಯಿಂದ ಜನರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಮಹಿಳೆಯರಿಗೆ ಚಿನ್ನಾಭರಣ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಉದಾಸೀನ ಪ್ರವೃತ್ತಿ ಕಂಡುಬರಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು.

ಮಕರ: ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಾಣಬಹುದು. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಖರ್ಚಿನ ಬಗ್ಗೆ ನಿಗಾ ಇರಲಿ.

ಕುಂಭ: ಯಾವುದೋ ಹಳೆಯ ಯೋಚನೆಗಳಿಂದ ಮಾನಸಿಕವಾಗಿ ಬೇಸರವಾಗಬಹುದು. ಕೆಲಸ ಕಾರ್ಯಗಳಲ್ಲಿ ಚುರುಕುತನ ತೋರಿಸಬೇಕಾಗುತ್ತದೆ. ವಿವಾಹ ಪ್ರಯತ್ನಗಳು ಸ್ವಲ್ಪದರಲ್ಲೇ ಕೈತಪ್ಪಿ ಹೋಗಲಿವೆ. ವಿದ್ಯಾರ್ಥಿಗಳು ಪರಿಶ್ರಮಕ್ಕೆ ತಕ್ಕ ಫಲ ಪಡೆಯಲಿದ್ದಾರೆ.

ಮೀನ: ನಿರುದ್ಯೋಗಿಗಳು ಬಹುದಿನಗಳ ಕನಸು ನನಸು ಮಾಡಿಕೊಳ್ಳಲಿದ್ದಾರೆ. ದೂರ ಸಂಚಾರಕ್ಕೆ ಅಡೆತಡೆಗಳು ತೋರಿಬರಲಿವೆ. ಸರಕಾರಿ ನೌಕರರಿಗೆ ಆರಾಮದಾಯಕ ದಿನಗಳು. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಬಗ್ಗೆ ಎಚ್ಚರಿಕೆ ವಹಿಸಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments