Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 27 ಮಾರ್ಚ್ 2020 (09:16 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಮಯೋಚಿತ ನಿರ್ಧಾರಗಳಿಂದ ಸಂಭಾವ್ಯ ಅಪಾಯಗಳು ತಪ್ಪಲಿವೆ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಮಾಡಬೇಡಿ. ಆದರೆ ಎಚ್ಚರಿಕೆ ಅಗತ್ಯ. ವೃತ್ತಿರಂಗದಲ್ಲಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಕೆಲಸಗಳು ನಡೆಯಲಿವೆ. ತಾಳ್ಮೆಯಿಂದಿರಿ.

ವೃಷಭ: ಗೃಹಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಸಂಗಾತಿಯ ಕೆಲಸಕ್ಕೆ ಕೈ ಜೋಡಿಸಲಿದ್ದೀರಿ. ದೈಹಿಕವಾಗಿ ಆರೋಗ್ಯದಲ್ಲಿ ಸುಧಾರಣೆಯಿದ್ದರೂ ಮಾನಸಿಕ ಚಿಂತೆ ಕಾಡಲಿದೆ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ.

ಮಿಥುನ: ಅವಿವಾಹಿತರ ವಿವಾಹ ಪ್ರಸ್ತಾಪಗಳಿಗೆ ತಡೆಯುಂಟಾಗಲಿದ್ದು, ಕೆಲವು ದಿನ ತಾಳ್ಮೆಯಿಂದ ಕಾಯುವುದು ಉತ್ತಮ. ಮೇಲಧಿಕಾರಿಗಳೊಂದಿಗೆ ಸಂಘರ್ಷ ಬೇಡ. ತಾಳ್ಮೆ, ಸಂಯಮ ಅಗತ್ಯ. ಸ್ವಯಂ ವೃತ್ತಿಯವರಿಗೆ ಲಾಭವಾಗಲಿದೆ. ಬೇರೆಯವರ ಮೇಲೆ ಅವಲಂಬನೆ ಬೇಡ.

ಕರ್ಕಟಕ: ಆಸ್ತಿ ವಿಚಾರವಾಗಿ ದಾಯಾದಿಗಳೊಂದಿಗೆ ವೈಮನಸ್ಯವಾದೀತು. ಹಿರಿಯರ ಮಧ್ಯಸ್ಥಿಕೆಗೆ ಬೆಲೆ ಕೊಡಿ. ಆದಾಯದಲ್ಲಿ ಹೆಚ್ಚು ಕಡಿಮೆಯಾಗಲಿದೆ. ದುಂದುವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಸಿಂಹ: ಅನ್ಯರ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಹೋಗಿ ವಿವಾದ ಎಳೆದುಕೊಳ್ಳಬೇಡಿ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ. ವ್ಯವಹಾರದಲ್ಲಿ ಕಾರ್ಯಚಟುವಟಿಕೆಗಳಿಗೆ ಪುನರಾರಂಭ ನೀಡುವಿರಿ. ಹಳೆಯ ಸಂಬಂಧಗಳು ಮರಳಿ ಕೂಡಲಿವೆ.

ಕನ್ಯಾ: ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸಲಾಗದೇ ನಿರಾಸೆ ಕಾಡಬಹುದು. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಶುಭವಾಗಲಿದೆ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ.

ತುಲಾ: ಸಂಗಾತಿಯ ಪ್ರೀತಿ ಆದರಗಳಿಗೆ ಪಾತ್ರರಾಗಲಿದ್ದೀರಿ. ಕಿರಿಯರಿಗೆ ಉಡುಗೊರೆ ನೀಡಿ ಸಂತೃಪ್ತಿಗೊಳಿಸಲಿದ್ದೀರಿ. ಕೃಷಿಕರಿಗೆ ಕೆಲಸ ಕಾರ್ಯಗಳಲ್ಲಿ ಮುನ್ನಡೆಯಿರಲಿದೆ. ಸಾಧು ಸಂತರ ಭೇಟಿ ಯೋಗವಿದೆ. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ವೃಶ್ಚಿಕ: ದುರ್ಜನರ ಸಂಗದಿಂದ ಹಾಳಾಗಬೇಡಿ. ಮಿತ್ರರನ್ನು ಆರಿಸುವಾಗ ಎಚ್ಚರಿಕೆಯಿಂದ ಆಯ್ಕೆ ಮಾಡಿ. ನಿಮಗೆ ಇಷ್ಟವಿಲ್ಲದ ವಿಚಾರವನ್ನು ಕಡ್ಡಿ ತುಂಡು ಮಾಡಿದಂತೆ ಹೇಳಬೇಕು. ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ.

ಧನು: ಕೌಟುಂಬಿಕವಾಗಿ ಮನೆಗೆ ಅತಿಥಿಗಳ ಆಗಮನವಾಗುವುದರಿಂದ ನಿಮ್ಮ ಕೆಲಸ ಕಾರ್ಯಗಳು ಹೆಚ್ಚಲಿವೆ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆ ಲಭ‍್ಯವಾಗಲಿದೆ. ವಿದ್ಯಾರ್ಥಿಗಳಿಗೆ ಆಲಸ್ಯತನವೇ ಮುಳ್ಳಾಗಲಿದೆ. ಆರ್ಥಿಕವಾಗಿ ಬಾಕಿ ಹಣ ತೀರಿಸಲು ಮುಂದಾಗುವಿರಿ.

ಮಕರ: ಬ್ಯಾಂಕ್ ವ್ಯವಹಾರಗಳನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡುವುದು ಉತ್ತಮ. ಆರ್ಥಿಕವಾಗಿ ಹಣಕಾಸಿನ ಬಗ್ಗೆ ಸ್ಪಷ್ಟ ಯೋಜನೆ ಅಗತ್ಯ. ಹಿರಿಯರ ಮಾತಿಗೆ ಕಿವಿಗೊಡಬೇಕಾಗುತ್ತದೆ. ನೂತನ ದಂಪತಿಗಳಲ್ಲಿ ಸಾಮರಸ್ಯದ ಕೊರತೆ ಕಂಡುಬರಲಿದೆ. ತಾಳ್ಮೆಯಿರಲಿ.

ಕುಂಭ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೈಗೊಂಡ ಕೆಲಸಗಳು ಯಶಸ್ವಿಯಾಗಲಿವೆ. ಕ್ರಿಯಾತ್ಮಕ ಕೆಲಸಗಳಲ್ಲಿ ಆಸಕ್ತಿ ಮೂಡಲಿದೆ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮೀನ: ಸರಕಾರಿ ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯದೊತ್ತಡವಿರಲಿದೆ. ಲೆಕ್ಕಪತ್ರಗಳ ಬಗ್ಗೆ ಸರಿಯಾದ ಮಾಹಿತಿ ಇಟ್ಟುಕೊಂಡಿರಿ. ಯಂತ್ರೋಪಕರಣ ಕೆಲಸ ಮಾಡುವವರಿಗೆ ಉನ್ನತಿಯ ಯೋಗವಿದೆ. ಕೌಟುಂಬಿಕವಾಗಿ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ