Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 27 ಮಾರ್ಚ್ 2020 (09:16 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಮಯೋಚಿತ ನಿರ್ಧಾರಗಳಿಂದ ಸಂಭಾವ್ಯ ಅಪಾಯಗಳು ತಪ್ಪಲಿವೆ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಮಾಡಬೇಡಿ. ಆದರೆ ಎಚ್ಚರಿಕೆ ಅಗತ್ಯ. ವೃತ್ತಿರಂಗದಲ್ಲಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಕೆಲಸಗಳು ನಡೆಯಲಿವೆ. ತಾಳ್ಮೆಯಿಂದಿರಿ.

ವೃಷಭ: ಗೃಹಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಸಂಗಾತಿಯ ಕೆಲಸಕ್ಕೆ ಕೈ ಜೋಡಿಸಲಿದ್ದೀರಿ. ದೈಹಿಕವಾಗಿ ಆರೋಗ್ಯದಲ್ಲಿ ಸುಧಾರಣೆಯಿದ್ದರೂ ಮಾನಸಿಕ ಚಿಂತೆ ಕಾಡಲಿದೆ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ.

ಮಿಥುನ: ಅವಿವಾಹಿತರ ವಿವಾಹ ಪ್ರಸ್ತಾಪಗಳಿಗೆ ತಡೆಯುಂಟಾಗಲಿದ್ದು, ಕೆಲವು ದಿನ ತಾಳ್ಮೆಯಿಂದ ಕಾಯುವುದು ಉತ್ತಮ. ಮೇಲಧಿಕಾರಿಗಳೊಂದಿಗೆ ಸಂಘರ್ಷ ಬೇಡ. ತಾಳ್ಮೆ, ಸಂಯಮ ಅಗತ್ಯ. ಸ್ವಯಂ ವೃತ್ತಿಯವರಿಗೆ ಲಾಭವಾಗಲಿದೆ. ಬೇರೆಯವರ ಮೇಲೆ ಅವಲಂಬನೆ ಬೇಡ.

ಕರ್ಕಟಕ: ಆಸ್ತಿ ವಿಚಾರವಾಗಿ ದಾಯಾದಿಗಳೊಂದಿಗೆ ವೈಮನಸ್ಯವಾದೀತು. ಹಿರಿಯರ ಮಧ್ಯಸ್ಥಿಕೆಗೆ ಬೆಲೆ ಕೊಡಿ. ಆದಾಯದಲ್ಲಿ ಹೆಚ್ಚು ಕಡಿಮೆಯಾಗಲಿದೆ. ದುಂದುವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಸಿಂಹ: ಅನ್ಯರ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಹೋಗಿ ವಿವಾದ ಎಳೆದುಕೊಳ್ಳಬೇಡಿ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ. ವ್ಯವಹಾರದಲ್ಲಿ ಕಾರ್ಯಚಟುವಟಿಕೆಗಳಿಗೆ ಪುನರಾರಂಭ ನೀಡುವಿರಿ. ಹಳೆಯ ಸಂಬಂಧಗಳು ಮರಳಿ ಕೂಡಲಿವೆ.

ಕನ್ಯಾ: ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸಲಾಗದೇ ನಿರಾಸೆ ಕಾಡಬಹುದು. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಶುಭವಾಗಲಿದೆ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ.

ತುಲಾ: ಸಂಗಾತಿಯ ಪ್ರೀತಿ ಆದರಗಳಿಗೆ ಪಾತ್ರರಾಗಲಿದ್ದೀರಿ. ಕಿರಿಯರಿಗೆ ಉಡುಗೊರೆ ನೀಡಿ ಸಂತೃಪ್ತಿಗೊಳಿಸಲಿದ್ದೀರಿ. ಕೃಷಿಕರಿಗೆ ಕೆಲಸ ಕಾರ್ಯಗಳಲ್ಲಿ ಮುನ್ನಡೆಯಿರಲಿದೆ. ಸಾಧು ಸಂತರ ಭೇಟಿ ಯೋಗವಿದೆ. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ವೃಶ್ಚಿಕ: ದುರ್ಜನರ ಸಂಗದಿಂದ ಹಾಳಾಗಬೇಡಿ. ಮಿತ್ರರನ್ನು ಆರಿಸುವಾಗ ಎಚ್ಚರಿಕೆಯಿಂದ ಆಯ್ಕೆ ಮಾಡಿ. ನಿಮಗೆ ಇಷ್ಟವಿಲ್ಲದ ವಿಚಾರವನ್ನು ಕಡ್ಡಿ ತುಂಡು ಮಾಡಿದಂತೆ ಹೇಳಬೇಕು. ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ.

ಧನು: ಕೌಟುಂಬಿಕವಾಗಿ ಮನೆಗೆ ಅತಿಥಿಗಳ ಆಗಮನವಾಗುವುದರಿಂದ ನಿಮ್ಮ ಕೆಲಸ ಕಾರ್ಯಗಳು ಹೆಚ್ಚಲಿವೆ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆ ಲಭ‍್ಯವಾಗಲಿದೆ. ವಿದ್ಯಾರ್ಥಿಗಳಿಗೆ ಆಲಸ್ಯತನವೇ ಮುಳ್ಳಾಗಲಿದೆ. ಆರ್ಥಿಕವಾಗಿ ಬಾಕಿ ಹಣ ತೀರಿಸಲು ಮುಂದಾಗುವಿರಿ.

ಮಕರ: ಬ್ಯಾಂಕ್ ವ್ಯವಹಾರಗಳನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡುವುದು ಉತ್ತಮ. ಆರ್ಥಿಕವಾಗಿ ಹಣಕಾಸಿನ ಬಗ್ಗೆ ಸ್ಪಷ್ಟ ಯೋಜನೆ ಅಗತ್ಯ. ಹಿರಿಯರ ಮಾತಿಗೆ ಕಿವಿಗೊಡಬೇಕಾಗುತ್ತದೆ. ನೂತನ ದಂಪತಿಗಳಲ್ಲಿ ಸಾಮರಸ್ಯದ ಕೊರತೆ ಕಂಡುಬರಲಿದೆ. ತಾಳ್ಮೆಯಿರಲಿ.

ಕುಂಭ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೈಗೊಂಡ ಕೆಲಸಗಳು ಯಶಸ್ವಿಯಾಗಲಿವೆ. ಕ್ರಿಯಾತ್ಮಕ ಕೆಲಸಗಳಲ್ಲಿ ಆಸಕ್ತಿ ಮೂಡಲಿದೆ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮೀನ: ಸರಕಾರಿ ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯದೊತ್ತಡವಿರಲಿದೆ. ಲೆಕ್ಕಪತ್ರಗಳ ಬಗ್ಗೆ ಸರಿಯಾದ ಮಾಹಿತಿ ಇಟ್ಟುಕೊಂಡಿರಿ. ಯಂತ್ರೋಪಕರಣ ಕೆಲಸ ಮಾಡುವವರಿಗೆ ಉನ್ನತಿಯ ಯೋಗವಿದೆ. ಕೌಟುಂಬಿಕವಾಗಿ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments