Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 28 ಮಾರ್ಚ್ 2020 (09:06 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದಿನವೂ ಸಾಯುವವರಿಗೆ ಅಳುವವರು ಯಾರು ಎಂಬ ಸ್ಥಿತಿ ನಿಮ್ಮದಾಗಲಿದೆ. ಅನಗತ್ಯ ಚಿಂತೆಗಳನ್ನು ಮರೆತು ಮುಂದೆ ಹೆಜ್ಜೆ ಹಾಕಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಗೃಹಕೃತ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂಘರ್ಷವಾಗದಂತೆ ಎಚ್ಚರಿಕೆ ವಹಿಸಿ. ಹೊಸ ರೀತಿಯ ಪ್ರಯತ್ನಗಳಿಗೆ ಕೈ ಹಾಕಲಿದ್ದೀರಿ. ವ್ಯವಹಾರದಲ್ಲಿ ಹಿತಶತ್ರುಗಳ ಕಾಟವಿರಲಿದೆ. ಧಾರ್ಮಿಕವಾಗಿ ಭಕ್ತಿ ಭಾವ ಮೂಡಲಿದೆ.

ಮಿಥುನ: ಸಾಲಗಾರರ ಕಾಟದಿಂದ ಮುಕ್ತಿ ಪಡೆಯಲಿದ್ದೀರಿ. ಆರ್ಥಿಕವಾಗಿ ಸ್ಥಿತಿ ಗತಿ ಸುಧಾರಣೆಯಾಗಲಿದೆ. ಅಧಿಕ ಮಿತ್ರರ ಸಂಗದಿಂದ ಲಾಭವೇನೂ ಆಗದು. ಸಮಯ ವ್ಯರ್ಥವಾಗುವುದಷ್ಟೇ. ಅವಿವಾಹಿತರ ವಿವಾಹ ಪ್ರಯತ್ನಗಳನ್ನು ಕೆಲವು ದಿನ ಮುಂದೂಡುವುದು ಉತ್ತಮ.

ಕರ್ಕಟಕ: ಕಾರ್ಯಕ್ಷೇತ್ರದಲ್ಲಿ ಶತ್ರು ಬಾಧೆ ಅಧಿಕವಾಗಲಿದ್ದು, ಕೈಗೊಂಡ ಕೆಲಸಗಳು ಅರ್ಧಕ್ಕೇ ನಿಲ್ಲಲಿವೆ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ನಿರುದ್ಯೋಗಿಗಳು ಸ್ವಯಂ ವೃತ್ತಿಯ ಕಡೆಗೆ ಗಮನ ಹರಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ಸಿಂಹ: ಕಷ್ಟದ ಸಂದರ್ಭದಲ್ಲಿ ಸಮಸ್ಯೆ ಪರಿಹಾರಕ್ಕೆ ಸಂಗಾತಿಯ ಸಲಹೆಗಳನ್ನು ಸ್ವೀಕರಿಸಿ. ಹೊಸ ಜನರ ಭೇಟಿಯಿಂದ ಲಾಭವಾಗಲಿದೆ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಸ್ಥಾನ ಪಲ್ಲಟ ಭೀತಿಯಿದೆ. ಕಲಾ ಕ್ಷೇತ್ರದಲ್ಲಿರುವವರಿಗೆ ಪ್ರತಿಭೆ ಅನಾವರಣಗೊಳಿಸಲು ವೇದಿಕೆ ಸಿಗಲಿದೆ.

ಕನ್ಯಾ: ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಂಡು ನಿಮ್ಮ ಮನಸ್ಸಿನ ಲಹರಿ ಹಾಳು ಮಾಡಿಕೊಳ್ಳಬೇಡಿ. ಮೇಲಧಿಕಾರಿಗಳೊಂದಿಗೆ ವ್ಯವಹರಿಸುವಾಗ ಸಂಯಮವಿರಲಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತಲೆದೋರಲಿವೆ. ತಾಳ್ಮೆಯಿರಲಿ.

ತುಲಾ: ಇಷ್ಟ ಮಿತ್ರರ ಭೇಟಿ, ಭೋಜನ ಯೋಗವಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ವೃಶ್ಚಿಕ: ಸಹೋದರಿಯರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ದೂರ ಸಂಚಾರ ಅನಿವಾರ್ಯವಾಗಿ ಮುಂದೂಡಬೇಕಾಗುತ್ತದೆ. ಮನೆ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ.

ಧನು: ಭೂಮಿ, ಮನೆ ಖರೀದಿ ವ್ಯವಹಾರಗಳನ್ನು ಮುಂದೂಡುವುದು ಉತ್ತಮ. ಆರ್ಥಿಕವಾಗಿ ಆದಾಯ ಕುಂಠಿತವಾಗಲಿದ್ದು, ಚಿಂತೆಗೆ ಕಾರಣವಾಗಲಿದೆ. ನೂತನ ದಂಪತಿಗಳು ಹೊಂದಾಣಿಕೆ ಕೊರತೆ ಅನುಭವಿಸಲಿದ್ದೀರಿ. ಸಮಾಧಾನ ಚಿತ್ತದಿಂದ ಆಲೋಚನೆ ಮಾಡುವುದು ಮುಖ್ಯ.

ಮಕರ: ಅನಗತ್ಯವಾಗಿ ಮಕ್ಕಳ ವಿಚಾರದಲ್ಲಿ ತಲೆಕೆಡಿಸಿಕೊಂಡು ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಿರಿ. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು, ಎಚ್ಚರ. ಪ್ರಿಯತಮೆಯನ್ನು ಸಂತುಷ್ಠಗೊಳಿಸಲು ಉಡುಗೊರೆ ನೀಡಲಿದ್ದೀರಿ.

ಕುಂಭ: ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ನಿಮ್ಮ ಯೋಜನೆಗಳಿಗೆ ಸಂಗಾತಿಯ ಸಹಕಾರ ದೊರೆಯಲಿದೆ. ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿದರೆ ಮತ್ತಷ್ಟು ಶುಭ.

ಮೀನ: ವೃತ್ತಿರಂಗದಲ್ಲಿ ನಿಮ್ಮ ದೈನಂದಿನ ಚಟುವಟಿಕೆಗಳಿಗೆ ಅಡೆತಡೆಗಳು ಬರಲಿವೆ. ಕೊಡು ಕೊಳ್ಳುವಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾಗಬಹುದು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಗೆ ಭಂಗವಾಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ದೆಶೆ ತಿರುಗಿಬಿದ್ದರೆ ಎಂಥಾ ಕೆಟ್ಟ ಪರಿಣಾಮವಾಗುತ್ತದೆ ನೋಡಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments