Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 29 ಮಾರ್ಚ್ 2020 (08:58 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕೊಂಚ ಬಿಡುವಿದ್ದರೂ ಗೃಹಕೃತ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಆರ್ಥಿಕವಾಗಿ ಸಂಪಾದನೆಯ ಚಿಂತೆಯಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಹಿರಿಯರಿಂದ ಬಂದ ಆಸ್ತಿ ಕಳೆದುಕೊಳ್ಳುವ ಭಯ ಕಾಡಲಿದೆ. ಕೋರ್ಟು ಕಚೇರಿ ವ್ಯವಹಾರಗಳನ್ನು ಮುಂದೂಡುವುದು ಉತ್ತಮ. ವ್ಯವಹಾರದಲ್ಲಿ ಅಂದುಕೊಂಡ ಕೆಲಸ ಕಾರ್ಯ ನೆರವೇರಿಸಲು ಅಡ್ಡಿಗಳು ಎದುರಾಗಲಿವೆ. ತಾಳ್ಮೆ ಅಗತ್ಯ.

ಮಿಥುನ: ಹಣಕ್ಕಿಂತ ಮನಶ್ಶಾಂತಿ ಮುಖ್ಯ ಎನ್ನುವುದನ್ನು ಅರಿಯಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಅಮೂಲ್ಯ ಸಯಮ ಕಳೆಯಲಿದ್ದೀರಿ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ದತೆ ನಡೆಸಲಿದ್ದೀರಿ.

ಕರ್ಕಟಕ: ಮನದೆನ್ನೆಯ ಇಷ್ಟಾರ್ಥ ಪೂರೈಸಲು ಹಣ ಖರ್ಚು ಮಾಡಬೇಕಾಗಿ ಬರುತ್ತದೆ. ಮಹಿಳೆಯರಿಗೆ ಚಿನ್ನಾಭರಣಗಳನ್ನು ಕಳೆದುಕೊಳ್ಳುವ ಭೀತಿ ಎದುರಾಗುವುದು. ಮಾನಸಿಕವಾಗಿ ಗಟ್ಟಿಯಾಗಬೇಕಾದ ಸಮಯವಿದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಸಿಂಹ: ವಿಷಮ ಸನ್ನಿವೇಶ ಎದುರಿಸಲು ಸಿದ್ಧರಾಗಬೇಕಾಗುತ್ತದೆ. ಕ್ರಿಯಾತ್ಮಕ ಬುದ್ಧಿಶಕ್ತಿಯಿಂದ ಸವಾಲುಗಳನ್ನು ಎದುರಿಸುವಿರಿ. ಮನೆಯ ಕಿರಿಯ ಸದಸ್ಯರ ಕಷ್ಟಗಳಿಗೆ ನೆರವಾಗುವಿರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ಮುಂದಿನ ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು. ಹಿರಿಯರ ಮಧ್ಯಸ್ಥಿಕೆಯಿಂದ ಕುಟುಂಬ ಸದಸ್ಯರ ನಡುವಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ದೂರ ಸಂಚಾರವನ್ನು ಮುಂದೂಡಿದರೆ ಉತ್ತಮ.

ತುಲಾ: ಅಧಿಕ ಧನಲಾಭ ಮಾಡುವ ದುರಾಲೋಚನೆಯಿಂದ ತಪ್ಪು ಮಾರ್ಗಗಳ ಬಗ್ಗೆ ಮನಸ್ಸು ವಾಲುವುದು. ಸಂಯಮ ಕಳೆದುಕೊಳ್ಳದಿರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಸಾಧು ಸಂತರ ಭೇಟಿಯಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.

ವೃಶ್ಚಿಕ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಸೆಯಾಗಬಹುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದಿದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಲಿದೆ. ಹೊಸ ಮಿತ್ರರ ಸಂಪಾದನೆ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಾಡಲಿದೆ.

ಧನು: ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ನೆರೆಹೊರೆಯವರು ನಿಮ್ಮ ಗುಟ್ಟುಗಳನ್ನು ಹೊರಗೆಳೆಯಲು ಕಾಯುತ್ತಿರುತ್ತಾರೆ. ಎಚ್ಚರಿಕೆಯಿಂದ ವರ್ತಿಸಿ. ಸಂಗಾತಿಯ ಮಾತಿಗೆ ಕಿವಿಗೊಡಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮಕರ: ನೂತನ ದಂಪತಿಗಳು ಸುಮಧುರ ಕ್ಷಣ ಕಳೆಯುವರು. ದಾಂಪತ್ಯ ಸುಖಕ್ಕೆ ಕೊರತೆಯಿರದು. ಆದರೆ ಅಂದುಕೊಂಡ ಕೆಲಸಗಳಿಗೆ ಹಣಕಾಸಿನ ಅಡಚಣೆ ಕಂಡುಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ದಿನ. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ನಿಮ್ಮ ಬಗ್ಗೆ ನೀವೇ ಕಾಳಜಿವಹಿಸಬೇಕಾದ ಸಮಯವಿದು. ಅನ್ಯರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆ. ವಾಹನ ಸವಾರರಿಗೆ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮೀನ: ಅವಿವಾಹಿತರಿಗೆ ಬಯಸಿದ ಸಂಬಂಧ ಸಿಗದೇ ನಿರಾಸೆಯಾಗಬಹುದು. ಪ್ರೇಮಿಗಳಿಗೆ ಶುಭ ದಿನ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಅನುಭವಕ್ಕೆ ಬರಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

ಮುಂದಿನ ಸುದ್ದಿ
Show comments