Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 1 ಏಪ್ರಿಲ್ 2020 (09:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಅಧಿಕ ಕಾರ್ಯದೊತ್ತಡವಿರಲಿದ್ದು, ಸಹೋದ್ಯೋಗಿಗಳ ಸಹಕಾರ ಸಿಗದೇ ಬೇಸರವಾಗಲಿದೆ. ಮನೆಯಲ್ಲಿ ಸಂಗಾತಿಯೊಂದಿಗೆ ಅನಗತ್ಯ ಕಿರಿ ಕಿರಿಗಳು ಬರಲಿವೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಕಾರ್ಯಕ್ಷೇತ್ರದಲ್ಲಿ ನೀವು ಅಂದುಕೊಂಡ ಕೆಲಸ ಮಾಡಲು ಅಡೆತಡೆಗಳು ತೋರಿಬಂದೀತು. ಆಂಜನೇಯನ ಪ್ರಾರ್ಥನೆ ಮಾಡುವುದರಿಂದ ಮನಸ್ಸಿಗೆ ಶಕ್ತಿ ಬರಲಿದೆ. ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ.

ಮಿಥುನ: ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಹೆಚ್ಚಿನ ಕಾರ್ಯ ಸಾಧನೆಗೆ ಪಾಲಿಗೆ ಬಂದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕಾಗುತ್ತದೆ. ವ್ಯವಹಾರಗಳು ಕೈಗೂಡಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಶುಭವಾಗಲಿದೆ. ಸಂಗಾತಿಯ ಕೆಲಸಗಳಿಗೆ ಸಹಾಯ ಮಾಡಲಿದ್ದೀರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಕಾರ್ಯ ನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ಸಿಂಹ: ಸಾಮಾಜಿಕವಾಗಿ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಲಭ್ಯವಾಗಲಿದೆ. ಹೆಚ್ಚಿನ ಕಾರ್ಯ ಸಾಧನೆಗೆ ಮಿತ್ರರ ಸಹಾಯ ಪಡೆಯುವಿರಿ. ಕಲಾ ಕ್ಷೇತ್ರದಲ್ಲಿರುವವರಿಗೆ ಉನ್ನತ ಸ್ಥಾನ ಮಾನ ಯೋಗವಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಗಮನ ಹರಿಸಲಿದ್ದಾರೆ.

ಕನ್ಯಾ: ವ್ಯವಹಾರದಲ್ಲಿ ಸಾಕಷ್ಟು ಬಿಡುವು ಸಿಗಲಿದ್ದು, ಕ್ರಿಯಾತ್ಮಕ ಕೆಲಸಗಳ ಕಡೆಗೆ ಗಮನ ಹರಿಸುವಿರಿ. ನಿಮ್ಮ ಇಷ್ಟದ ಚಟುವಟಿಕೆ ಮಾಡಲಿದ್ದೀರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಚಿಂತೆಯಾಗಲಿದೆ. ಅವಿವಾಹಿತರು ಉತ್ತಮ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಒಳಿತು.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ವಾಗ್ವಾದಗಳಾಗದಂತೆ ಎಚ್ಚರಿಕೆ ವಹಿಸಿ. ಸರಕಾರಿ ಕೆಲಸಗಳಿಗೆ ತೊಂದರೆಯಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ.

ವೃಶ್ಚಿಕ: ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾಗಬಹುದು. ನೂತನ ದಂಪತಿಗಳಿಗೆ ಸಾಮರಸ್ಯದ ಕೊರತೆ ಕಾಡಲಿದೆ. ಕುಟುಂಬದವರ ಕ್ಷೇಮಕ್ಕಾಗಿ ಕೆಲವೊಂದು ಹೊಸ ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ.

ಧನು: ಸಹೋದರರ ಪ್ರೀತಿ, ಆದರಗಳಿಗೆ ಪಾತ್ರರಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಆಲಸ್ಯತನ ಕಂಡುಬರಲಿದೆ. ಕೃಷಿಕರಿಗೆ ಕೈಗೆ ಬಂದ ಬೆಳೆಗೆ ತಕ್ಕ ಬೆಲೆ ಸಿಗದೇ ನಿರಾಸೆಯಾಗಬಹುದು. ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ದಿನದಂತ್ಯಕ್ಕೆ ಶುಭ ಸುದ್ದಿ.

ಮಕರ: ಇಷ್ಟು ದಿನ ಬೇಡವೆಂದು ದೂರವಿಟ್ಟಿದ್ದ ವಸ್ತುಗಳೂ ಈಗ ಉಪಯೋಗಕ್ಕೆ ಬರುವುದು. ವ್ಯಾಪಾರಿಗಳಿಗೆ ಆದಾಯದ ಮೂಲಕ್ಕೆ ತೊಂದರೆಯಾಗಲಿದೆ. ಇಷ್ಟಾರ್ಥ ಸಿದ್ಧಿಗೆ ಹೆಚ್ಚಿನ ಪರಿಶ್ರಮ ಪಡಬೇಕಾಗುತ್ತದೆ. ಸಂಗಾತಿಗೆ ಪ್ರೀತಿಯ ಉಡುಗೊರೆ ನೀಡಲಿದ್ದೀರಿ.

ಕುಂಭ: ಉನ್ನತ ಸ್ಥಾನ ಮಾನಕ್ಕಾಗಿ ಹೆಚ್ಚಿನ ಪರಿಶ್ರಮ ಪಡಬೇಕಾಗುತ್ತದೆ. ಮಹಿಳೆಯರಿಗೆ ಗೃಹ ಕೃತ್ಯಗಳಿಗಾಗಿ ಹೆಚ್ಚಿನ ಓಡಾಟ ನಡೆಸಬೇಕಾಗುತ್ತದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಶತ್ರು ಬಾಧೆ ನಾಶವಾಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮೀನ: ನೂತನ ಗೃಹ ನಿರ್ಮಾಣ ಕಾರ್ಯಗಳಿಗೆ ಅಡ್ಡಿ ಆತಂಕಗಳು ಎದುರಾಗಲಿವೆ. ದಾಯಾದಿಗಳೊಂದಿಗಿನ ಕಲಹ ನಿವಾರಣೆಯಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಲಕ್ಷ್ಮೀ ಕವಚ ಸ್ತೋತ್ರಂ ಕನ್ನಡದಲ್ಲಿ

Ganesha Mantra: ವಿಘ್ನಗಳನ್ನು ನಿವಾರಿಸಲು ಗಣೇಶನ ಈ ಸ್ತೋತ್ರವನ್ನು ತಪ್ಪದೇ ಓದಿ

Devi Mantra: ಮಂಗಳವಾರದಂದು ತಪ್ಪದೇ ಲಲಿತಾ ದೇವಿಯ ಈ ಸ್ತೋತ್ರ ಓದಿ

Mrthyunjaya mantra: ರೋಗ ಭಯ, ಅಕಾಲ ಮೃತ್ಯುಭಯ ನಾಶಕ್ಕೆ ಮೃತ್ಯುಂಜಯ ಅಷ್ಟೋತ್ತರ

ಜೀವನದಲ್ಲಿ ಸುಖ, ನೆಮ್ಮದಿಗಾಗಿ ಭಾನುವಾರ ಬೆಳಗ್ಗೆ ಈ ಪೂಜೆ ಮಾಡಿ

ಮುಂದಿನ ಸುದ್ದಿ
Show comments