Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 5 ಏಪ್ರಿಲ್ 2020 (09:13 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಅತೀವ ಸಂಯಮ ಅಗತ್ಯ. ನಿಮ್ಮ ಕೆಲವೊಂದು ನಿರ್ಧಾರಗಳು ಕುಟುಂಬ ಸದಸ್ಯರ ಅಸಮಾಧಾನಕ್ಕೆ ಕಾರಣವಾಗಬಹುದು. ಕಾರ್ಯಕ್ಷೇತ್ರದಲ್ಲಿ ಉತ್ಸಾಹದ ಕೊರತೆ ಕಂಡುಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ವಿನಾಕಾರಣ ಚಿಂತೆ ಮಾಡಿಕೊಂಡು ನಿಮ್ಮ ಮಾನಸಿಕ ಆರೋಗ್ಯವನ್ನು ಹಾಳು ಮಾಡಿಕೊಳ್ಳಬೇಡಿ. ಇಷ್ಟಮಿತ್ರರನ್ನು ಭೇಟಿಯಾಗುವ ಭಾಗ್ಯವಿದೆ. ಅವಿವಾಹಿತರ ವಿವಾಹ ಮಾತುಕತೆ ಮುಂದೂಡಿಕೆಯಾಗಲಿದೆ. ಕೃಷಿಕರಿಗೆ ಬೆಳೆಗೆ ತಕ್ಕ ಬೆಲೆ ಸಿಗದೇ ನಿರಾಸೆಯಾಗಬಹುದು.

ಮಿಥುನ: ಆಸ್ತಿ ವಿವಾದಗಳಿಗೆ ಹಿರಿಯರ ಮಧ್ಯಸ್ಥಿಕೆಯಿಂದ ಪರಿಹಾರ ಕಂಡುಕೊಳ್ಳಲಿದ್ದೀರಿ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಆದರೆ ಅಷ್ಟೇ ಖರ್ಚೂ ಆಗಲಿದೆ.

ಕರ್ಕಟಕ: ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲಿದ್ದೀರಿ. ನೂತನ ದಂಪತಿಗಳಿಗೆ ಏಕಾಂತದ ಕ್ಷಣ ಸಿಗದೇ ನಿರಾಸೆಯಾಗಬಹುದು. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗುವ ಸಂಭವ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಿಂಹ: ಸರಕಾರಿ ನೌಕರರಿಗೆ ಬಿಡುವಿಲ್ಲದ ಕೆಲಸವಿರಲಿದ್ದು, ದೇಹಾಯಾಸವಾಗಲಿದೆ. ಮೇಲಧಿಕಾರಿಗಳೊಂದಿಗೆ ಅಸಮಾಧಾನವಾಗಬಹುದು. ವ್ಯವಹಾರದಲ್ಲಿ ಹಿನ್ನಡೆಯಾಗಬಹುದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಅಧಿಕ ಧನಾರ್ಜನೆ ಮಾಡುವ ಮಾರ್ಗಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯಲಿದ್ದೀರಿ. ಹಳೆಯ ಮಿತ್ರನ ಜತೆಗಿನ ಮಾತುಕತೆ ಮನಸ್ಸಿಗೆ ಮುದ ನೀಡಲಿದೆ.

ತುಲಾ: ಹಿರಿಯರಿಂದ ಬಂದ ಸಂಪತ್ತು ಕಳೆದುಕೊಳ್ಳುವ ಭಯ ಕಾಡಲಿದೆ. ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಭೀತಿ ಎದುರಾಗಲಿದೆ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ವೃಶ್ಚಿಕ: ಬಹುದಿನಗಳ ಕನಸು ನನಸು ಮಾಡಿಕೊಳ್ಳಲು ಪ್ರಯತ್ನ ನಡೆಸುತ್ತೀರಿ. ಆದರೆ ಸಾಕಷ್ಟು ಅಡೆತಡೆಗಳು ಎದುರಾಗಲಿವೆ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಧನು: ಮಿತ್ರರೊಂದಿಗೆ ಸಂಘರ್ಷ ಬೇಡ. ನಿಮ್ಮದೇ ನಿರ್ಧಾರ ನಡೆಯಬೇಕು ಎನ್ನುವ ಹಠವಾದಿ ಧೋರಣೆಯಿಂದ ಇತರರ ಮನಸ್ಸಿಗೆ ನೋವುಂಟಾಗಬಹುದು. ಸಂಯಮದಿಂದ ವರ್ತಿಸಿ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಹೊಸ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಸಂಗಾತಿಯೊಂದಿಗೆ ಪರಾಮರ್ಶಿಸುವುದು ಉತ್ತಮ. ವ್ಯವಹಾರದಲ್ಲಿ ಸೋಲಿನ ಭೀತಿ ಕಾಡಲಿದೆ. ಆದರೆ ಮಕ್ಕಳಿಂದ ಸಂತಸ ಅನುಭವಿಸಲಿದ್ದೀರಿ. ದೂರ ಸಂಚಾರ ಕೆಲವು ದಿನ ಮುಂದೂಡಿದರೆ ಉತ್ತಮ.

ಕುಂಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಹೆಚ್ಚಾಗಲಿದೆ. ನಿಮ್ಮ ಮೇಲೆ ಹೆಚ್ಚಿನ ಜವಾಬ್ಧಾರಿಗಳಿದ್ದು ಅದನ್ನು ನಿಭಾಯಿಸಲು ಹೆಣಗಾಡಬೇಕಾಗುತ್ತದೆ. ಗೃಹ ಕೃತ್ಯಗಳಲ್ಲಿ ಮುನ್ನಡೆಯಿರಲಿದೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮೀನ: ಪ್ರಿಯತಮೆಯೊಂದಿಗೆ ಮನಸ್ತಾಪವಾಗಬಹುದು. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ. ಚಾಡಿ ಮಾತುಗಳನ್ನು ಅಲಕ್ಷಿಸುವುದು ಉತ್ತಮ. ವಿದ್ಯಾರ್ಥಿಗಳಲ್ಲಿ ಆಲಸ್ಯತನ ಕಂಡುಬರುವುದು. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments