Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 8 ಏಪ್ರಿಲ್ 2020 (09:22 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬಯಸದೇ ಬರುವ ಭಾಗ್ಯವನ್ನು ಅಲಕ್ಷಿಸಬೇಡಿ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ. ಮಕ್ಕಳ ವಿದ್ಯಾಭ‍್ಯಾಸದ ಬಗ್ಗೆ ಗಮನಕೊಡಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ವೃಷಭ: ಬಯಸಿದ್ದೊಂದು ಆಗುವುದು ಮತ್ತೊಂದು ಎನ್ನುವ ಸ್ಥಿತಿ ನಿಮ್ಮದಾಗಲಿದೆ. ವ್ಯವಹಾರದಲ್ಲಿ ಏನೋ ಮಾಡಲು ಹೋಗಿ ಇನ್ನೇನೋ ಆಗುತ್ತದೆ.ಅಪರಿಚಿತರ ಮೇಲೆ ಅತಿಯಾದ ವಿಶ್ವಾಸ ಬೇಡ. ಹಣಕಾಸಿನ ಲೆಕ್ಕಾಚಾರದ ಬಗ್ಗೆ ನಿಗಾ ಇರಲಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ವ್ಯವಹಾರ ಕ್ಷೇತ್ರದಲ್ಲಿ ಸುಧಾರಣೆಯ ಲಕ್ಷಣಗಳು ಗೋಚರಿಸಲಿವೆ. ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಜಾಣ್ಮೆಯಿಂದ ಬಳಸಿಕೊಳ್ಳಬೇಕು. ನಿರುದ್ಯೋಗಿಗಳು ಸ್ವ ಉದ್ಯೋಗದಿಂದ ಲಾಭ ಪಡೆಯಲಿದ್ದಾರೆ.

ಕರ್ಕಟಕ: ಬಹುದಿನಗಳಿಂದ ಅಂದುಕೊಂಡಿದ್ದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಹೊರಡುತ್ತೀರಿ. ನಿಮ್ಮ ಕ್ರಿಯಾತ್ಮಕತೆಯಿಂದ ಕಷ್ಟಗಳನ್ನು ಗೆಲ್ಲಲಿದ್ದೀರಿ. ಸಂಗಾತಿಯ ಸಹಕಾರ ಸಿಗಲಿದೆ. ಅನ್ಯರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ.

ಸಿಂಹ: ವ್ಯವಹಾರದಲ್ಲಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಲು ಯೋಜನೆ ಮಾಡುತ್ತೀರಿ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಸಲಹೆ ಸೂಚನೆ ಸಿಗಲಿದೆ. ಕನ್ಯಾಮಣಿಗಳಿಗೆ ಶೀಘ್ರದಲ್ಲೇ ಕಂಕಣ ಭಾಗ್ಯವಿದೆ. ಕಿರು ಓಡಾಟ ನಡೆಸಬೇಕಾಗುತ್ತದೆ.

ಕನ್ಯಾ: ಪತ್ನಿಯ ಬಹುದಿನಗಳ ಆಸೆ ನೆರವೇರಿಸಲಿದ್ದೀರಿ. ಕೌಟುಂಬಿಕವಾಗಿ ಸಂತಸ ಅನುಭವಿಸಲಿದ್ದೀರಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಪರಿಶ್ರಮ ಪಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ತುಲಾ: ಅಧಿಕ ಧನಾರ್ಜನೆಗೆ ನಾನಾ ಮಾರ್ಗಗಳು ಗೋಚರವಾಗಲಿವೆ. ಆದರೆ ಕಾರ್ಯರೂಪಕ್ಕೆ ತರುವಾಗ ಎಡವಲಿದ್ದೀರಿ. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ದಾಯಾದಿ ಕಲಹಗಳು ನಿವಾರಣೆಯಾಗಲಿವೆ. ಹೊಸ ಮಿತ್ರರ ಸಂಪಾದನೆ ಮಾಡಲಿದ್ದೀರಿ.

ವೃಶ್ಚಿಕ: ಹಿರಿಯರ ಅತಿಯಾದ ಕಾಳಜಿಯೂ ಉಸಿರುಗಟ್ಟಿಸಿದ ಅನುಭವ ನೀಡಲಿದೆ. ಆದರೆ ಯಾರ ಮನಸ್ಸಿಗೂ ನೋವುಂಟು ಮಾಡಲು ಹೊಗಬೇಡಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಶುಭ ಮಂಗಲ ಕಾರ್ಯಗಳು ಮುಂದೂಡಿಕೆಯಾಗಲಿವೆ.

ಧನು: ನಿಮ್ಮ ನಾಲಿಗೆಯೇ ಇಂದು ನಿಮಗೆ ಶತ್ರುವಾಗಲಿದೆ. ಅಧಿಕ ಮಾತನಾಡಿ ಕಾರ್ಯ ಹಾಳುಮಾಡಿಕೊಳ್ಳಬೇಡಿ. ಸಂಗಾತಿಯ ಎಚ್ಚರಿಕೆಯ ಮಾತು ಕಡೆಗಣಿಸಿದರೆ ದಂಡ ತೆರಬೇಕಾದೀತು. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ಎಚ್ಚರ.

ಮಕರ: ನೂತನ ದಂಪತಿಗಳಿಗೆ ಶೀಘ್ರದಲ್ಲೇ ಸಂತಾನ ಯೋಗವಿದೆ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚಲಿದೆ. ಕುಲದೇವರಿಗೆ ಹರಕೆ ತೀರಿಸಲು ಮುಂದಾಗಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ದೈವಾನುಗ್ರಹದಿಂದ ಶುಭ ದಿನವಾಗಿರಲಿದೆ.

ಕುಂಭ: ನಾನಾ ರೀತಿಯ ಜವಾಬ್ಧಾರಿಗಳನ್ನು ಮೈಮೇಲೆಳದುಕೊಳ್ಳಬೇಡಿ. ಒಂದೊಂದಾಗಿ ಸಮಸ್ಯೆ ಪರಿಹರಿಸಲು ಮುಂದಾಗಿ ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಸಿಗಲಿದೆ. ಹಿರಿಯರು ಕೊಟ್ಟ ವಸ್ತು ಉಪಯೋಗಕ್ಕೆ ಬರುವುದು. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ಮೀನ: ನೆರೆಹೊರೆಯವರೊಂದಿಗೆ ನೀರಿಗಾಗಿ ವಾಗ್ವಾದವಾದೀತು ಎಚ್ಚರಿಕೆ ಅಗತ್ಯ. ಮಾತಿನ ಮೇಲೆ ನಿಗಾ ಇರಲಿ. ನಿಮ್ಮ ಆಸಕ್ತಿಯ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ನೀವು ಬಯಸಿದ ಉದ್ಯೋಗಕ್ಕೆ ಸದ್ಯದಲ್ಲೇ ಸಂದರ್ಶನ ಕರೆ ಬರಲಿದೆ. ಆಶಾವಾದಿಗಳಾಗಿರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments