Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 10 ಏಪ್ರಿಲ್ 2020 (09:17 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮನಸ್ಸಿನಲ್ಲಿ ಅಂದುಕೊಂಡಿದ್ದ ಕೆಲಸ ಕಾರ್ಯಗಳನ್ನು ನಿರ್ವಹಿಸಲಾಗದೇ ಒದ್ದಾಡಬೇಕಾದೀತು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆಯಿರಲಿ.

ವೃಷಭ: ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲು ಅಡೆತಡೆಗಳು ತೋರಿಬಂದೀತು. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದಿಂದ ಲಾಭ ಪಡೆಯಬಹುದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅಗತ್ಯ.

ಮಿಥುನ: ಇಷ್ಟು ದಿನ ಮಾಡಬೇಕೆಂದಿದ್ದ ನಿಮ್ಮ ಇಷ್ಟದ ಕೆಲಸಗಳನ್ನು ಮಾಡಲಿದ್ದೀರಿ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಮಕ್ಕಳಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಕರ್ಕಟಕ: ಕಾರ್ಯಕ್ಷೇತ್ರದಲ್ಲಿ ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಸಿಗಲಿದೆ. ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟಾಗುವಂತಹ ಮಾತನಾಡಬೇಡಿ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಿ. ಸಂಗಾತಿಗೆ ಉಡುಗೊರೆ ನೀಡಲಿದ್ದೀರಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಕ್ಕಾಗಿ  ಶ್ರಮ ಪಡಬೇಕಾಗುತ್ತದೆ. ಮೇಲಧಿಕಾರಿಗಳೊಂದಿಗೆ ನಾಜೂಕಿನಿಂದ ವರ್ತಿಸಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲಿದ್ದೀರಿ. ರಾಜಕೀಯ ವರ್ಗದವರಿಗೆ ಜವಾಬ್ಧಾರಿ ಹೆಚ್ಚಲಿದೆ.

ಕನ್ಯಾ: ವ್ಯಾಪಾರಿಗಳಿಗೆ ಲಾಭವಾಗಲಿದೆ. ಆದರೆ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಲೆಕ್ಕಪತ್ರಗಳ ಬಗ್ಗೆ ಸರಿಯಾದ ನಿಗಾ ಇರಲಿ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ಕೃಷಿಕರಿಗೆ ನಷ್ಟದ ಚಿಂತೆ ಕಾಡಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ವಿದ್ಯಾರ್ಥಿಗಳಿಗೆ ಭವಿಷ್ಯದ ಚಿಂತೆ ಕಾಡಲಿದೆ. ಪರೀಕ್ಷೆಗಳಿಗೆ ಸಿದ್ಧರಾಗಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಸೆಯಾಗಬಹುದು. ಮುಂದಿನ ಕಷ್ಟದ ದಿನಗಳಿಗೆ ಸಿದ್ಧರಾಗಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಶ್ಚಿಕ: ಮನಸ್ಸಿಗೆ ಹಚ್ಚಿಕೊಂಡ ವ್ಯಕ್ತಿಗಳಿಂದಲೇ ನೋವುಂಟಾಗುವ ಪರಿಸ್ಥಿತಿ ಎದುರಾಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಧನು: ಅನಗತ್ಯ ವಿಚಾರಗಳಿಗೆ ತಲೆಕಡಿಸಿಕೊಳ್ಳುವುದನ್ನು ಬಿಟ್ಟು ನಿಮ್ಮ ಕೆಲಸ ಕಾರ್ಯಗಳತ್ತ ಗಮನ ಹರಿಸಿ. ಮಕ್ಕಳ ವಿಚಾರದಲ್ಲಿ ವಿನಾಕಾರಣ ಮೂಗು ತೂರಿಸುವ ಪ್ರಯತ್ನ ಮಾಡಬೇಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕು. ಮಹಿಳೆಯರಿಗೆ ಶುಭ ದಿನ.

ಮಕರ: ಮನಸ್ಸು ಬೇಡದ ಆಲೋಚನೆಗಳಿಂದ ತುಂಬಿ ಹೋಗಿರುತ್ತದೆ. ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ನಿಮ್ಮ ಕ್ರಿಯಾತ್ಮಕತೆಗೆ ಕೆಲಸ ಕೊಡಿ. ವ್ಯವಹಾರದಲ್ಲಿ ಹೊಸ ದಾರಿಗಳಿಗೆ ಹುಡುಕಾಟ ನಡೆಸಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕಾದಿದೆ.

ಕುಂಭ: ಕಾರ್ಯರಂಗದಲ್ಲಿ ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಆದರೆ ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಭೀತಿ ಎದುರಾಗಲಿದೆ. ಮನಸ್ಸಿಗೆ ಇಷ್ಟವಾಗುವವರ ಜತೆ ಮದುವೆಯಾಗಲು ಹಿರಿಯರ ಬೆಂಬಲ ಸಿಗಲಿದೆ. ಸಹೋದರರ ಪ್ರೀತಿಗೆ ಪಾತ್ರರಾಗಲಿದ್ದೀರಿ.

ಮೀನ: ಸಂಗಾತಿಯ ದೇಹಾರೋಗ್ಯದ ಬಗ್ಗೆ ತೀವ್ರ ಕಾಳಜಿವಹಿಸಬೇಕಾಗುತ್ತದೆ. ಅನ್ಯರ ವಿಚಾರಗಳಿಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರೈಸುವಿರಿ. ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಂಡುಬರಬಹುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments