ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 11 ಏಪ್ರಿಲ್ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಕ್ರಿಯಾತ್ಮಕ ಕೌಶಲ್ಯಗಳಿಗೆ ಚಾಲನೆ ನೀಡುವಿರಿ. ಮನಸ್ಸಿನ ಬೇಸರ ಕಳೆಯಲು ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಆದರೆ ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ.

ವೃಷಭ: ಕಷ್ಟದ ಪರಿಸ್ಥಿತಿ ಎದುರಿಸಲು ಇಂದೇ ತಯಾರಾಗುವುದು ಉತ್ತಮ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ನೆರೆಹೊರೆಯವರ ಚಾಡಿ ಮಾತುಗಳನ್ನು ಅಲಕ್ಷಿಸುವುದು ಉತ್ತಮ. ಹಿರಿಯರ ಮಾತಿಗೆ ಕಿವಿಗೊಡಬೇಕಾಗುತ್ತದೆ.

ಮಿಥುನ: ಇಷ್ಟ ಮಿತ್ರರ, ಬಾಂಧವರ ಭೇಟಿಗಾಗಿ ಮನಸ್ಸು ಹಾತೊರೆಯಲಿದೆ. ಆದರೆ ಅಂದುಕೊಂಡ ಕೆಲಸಗಳನ್ನು ನೆರವೇರಿಸಲಾಗದೇ ಬವಣೆ ಪಡುವಿರಿ. ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸುವುದು ಉತ್ತಮ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕರ್ಕಟಕ: ಕಾರ್ಯರಂಗದಲ್ಲಿ ಮೇಲಧಿಕಾರಿಗಳು ನೀಡಿದ ಗುರಿ ತಲುಪಲು ಹೆಣಗಾಡಬೇಕಾಗುತ್ತದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯುವಿರಿ. ಸಾಂಸಾರಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಮಕ್ಕಳಿಂದ ಸಂತಸ ಸಿಗಲಿದೆ.

ಸಿಂಹ: ಸಾಹಿತ್ಯ, ಕಲಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ ಎದುರಾಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಜವಾಬ್ಧಾರಿ ಹೆಚ್ಚಾಗಲಿದೆ. ಗೃಹಬಳಕೆ ವಸ್ತುಗಳಿಗೆ ಖರ್ಚು ವೆಚ್ಚಗಳಾಗಲಿವೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕನ್ಯಾ: ವ್ಯವಹಾರದಲ್ಲಿ ಉನ್ನತ ಸ್ಥಾನ ಮಾನದ ಯೋಗವಿದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ತೋರಿಬರಲಿದೆ. ಕೌಟುಂಬಿಕವಾಗಿ ಖುಷಿಯ ದಿನ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ದೂರ ಸಂಚಾರಕ್ಕೆ ಅಡ್ಡಿ ಎದುರಾಗಲಿದೆ.

ತುಲಾ: ಆಸೆ ಆಕಾಂಕ್ಷೆಗಳಿಗೆ ಕಡಿವಾಣ ಹಾಕುವುದು ಅತೀ ಅಗತ್ಯ. ಉದ್ಯೋಗ ಕ್ಷೇತ್ರದಲ್ಲಿ ಬರುವ ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ಹೊಸ ಯೋಜನೆಗಳಿಗೆ ಕೈಹಾಕಲು ಕೆಲವು ದಿನ ಕಾಯುವುದು ಸೂಕ್ತ. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಆತಂಕವಾಗಲಿದೆ.

ವೃಶ್ಚಿಕ: ಕೌಟುಂಬಿಕವಾಗಿ ನಿಮ್ಮ ಖುಷಿಯನ್ನು ಯಾರೂ ತಡೆಯಲಾಗದು. ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯುವಿರಿ. ಇಷ್ಟ ದೇವರ ಪ್ರಾರ್ಥನೆ ಮಾಡಿದರೆ ಇನ್ನಷ್ಟು ಶುಭ ಫಲ ಪಡೆಯಬಹುದು. ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟದ ಭೀತಿ ಎದುರಾಗಲಿದೆ.

ಧನು: ಸಹೋದರರೊಂದಿಗೆ ಆಸ್ತಿ ವಿಚಾರವಾಗಿ ಅನಗತ್ಯ ವೈಮನಸ್ಯ ತಂದುಕೊಳ್ಳಬೇಡಿ. ಸಂಗಾತಿಯ ಮಾತಿಗೆ ಕಿವಿಗೊಡಿ. ಅಧಿಕ ಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಸಿದವರಿಗೆ ಅನ್ನ ನೀಡುವ ಪುಣ್ಯ ಕೆಲಸ ಮಾಡಲಿದ್ದೀರಿ.

ಮಕರ: ದಂಪತಿಗಳಲ್ಲಿ ಸಾಮರಸ್ಯದ ಕೊರತೆ ಎದುರಾಗಬಹುದು. ತಾಳ್ಮೆಯಿಂದಿದ್ದಷ್ಟೂ ಸಮಾಧಾನ ನೆಲಸಲಿದೆ. ಕೃಷಿಕರಿಗೆ ಬೆಳೆಗೆ ತಕ್ಕ ಬೆಲೆ ಸಿಗದೇ ನಿರಾಸೆಯಾಗಬಹುದು. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಮಾನಸಿಕವಾಗಿ ಒಂದು ರೀತಿಯ ಬೇಸರ ಕಾಡಲಿದೆ. ಋಣಾತ್ಮಕ ಚಿಂತನೆಗಳಿಂದ ಕೆಲಸ ಕಾರ್ಯದಲ್ಲಿ ನಿರುತ್ಸಾಹ ಕಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಗೆ ಅಡೆತಡೆಗಳು ತೋರಿಬಂದೀತು. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಗಮನ ಹರಿಸುವುದು ಉತ್ತಮ.

ಮೀನ: ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲಿದ್ದೀರಿ. ಆದರೆ ಹಿರಿಯರ ಹಿತ ವಚನಗಳು ಅಪಥ್ಯವೆನಿಸಲಿದೆ. ವ್ಯವಹಾರದಲ್ಲಿ ಮುನ್ನಡೆಯ ಯೋಗವಿದೆ. ಮಹಿಳೆಯರಿಗೆ ಗೃಹ ಕೃತ್ಯಗಳಲ್ಲಿ ಎಡೆಬಿಡದೇ ತೊಡಗಿಸಿಕೊಳ್ಳಬೇಕಾಗಿರುವುದರಿಂದ ದೇಹಾಯಾಸವಾಗಬಹುದು. ಕಾಳಜಿ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಕಾಶೀ ವಿಶ್ವನಾಥನ ಭಕ್ತರಾಗಿದ್ದರೆ ಈ ಸ್ತೋತ್ರ ತಪ್ಪದೇ ಓದಿ

ಶನಿ ದೋಷ ನಿವಾರಣೆಗೆ ದಶರಥ ಕೃತ ಶನಿ ಮಂತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments