Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 19 ಏಪ್ರಿಲ್ 2020 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಯಾವುದೇ ಕೆಲಸವೇ ಆದರೂ ಆರಂಭದಲ್ಲಿ ಅತಿಯಾದ ಉತ್ಸಾಹದಿಂದ ತೊಡಗಿಸಿಕೊಳ್ಳುವಿರಿ. ಆದರೆ ಸಮಯ ಕಳೆಯದಂತೆ ಉತ್ಸಾಹ ಭಂಗವಾದೀತು. ಆರ್ಥಿಕವಾಗಿ ಗೃಹ ಬಳಕೆ ವಸ್ತುಗಳ ಖರೀದಿಗೆ ಖರ್ಚಾಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ವೃಷಭ: ವ್ಯವಹಾರದಲ್ಲಿ ಮುನ್ನಡೆಯ ಯೋಗವಿದೆ. ವ್ಯಾಪಾರಿಗಳು ಹೊಸ ದಾರಿಗಳನ್ನು ಕಂಡುಕೊಳ್ಳಲಿದ್ದಾರೆ. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ಹಿರಿಯರಿಗೆ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಬೇಕು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಪ್ರೇಮಿಗಳಿಗೆ ಹಿರಿಯರಿಂದ ವಿರೋಧ ವ್ಯಕ್ತವಾಗಲಿದೆ. ಅಗಲುವಿಕೆಯ ನೋವು ಕಾಡಲಿದೆ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಸಾಂಸಾರಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ಕರ್ಕಟಕ: ಹಿರಿಯರಿಗೆ ಆಸ್ತಿ ಪಾಸ್ತಿಗೆ ವಾರಸುದಾರರ ಚಿಂತೆ ಕಾಡಲಿದೆ. ಪ್ರೇಮಿಗಳಿಗೆ ನಿರಾಸೆ ಕಾಡಲಿದೆ. ನೂತನ ದಂಪತಿಗಳು ಸುಮಧುರ ಕ್ಷಣ ಕಳೆಯಲಿದ್ದಾರೆ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ನಿಮ್ಮ ಕ್ರಿಯಾತ್ಮಕತೆಯಿಂದಲೇ ಕಠಿಣ ಪರಿಸ್ಥಿತಿಯಿಂದ ಹೊರಬರಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆಯ ಭೀತಿ ಎದುರಾಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆಯಾಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಕನ್ಯಾ: ಮುಂದಿನ ಕಷ್ಟದ ದಿನಗಳಿಗೆ ಇಂದೇ ತಯಾರಾಗಿ. ದೇಹಾರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಆರ್ಥಿಕವಾಗಿ ಎಚ್ಚರಿಕೆಯಿಂದ ಯೋಜನೆ ರೂಪಿಸಬೇಕಾಗುತ್ತದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮದ ಅಗತ್ಯವಿದೆ.

ತುಲಾ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗವಿದೆ. ಉದರ ಸಂಬಂಧೀ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಕಾರ್ಯರಂಗದಲ್ಲಿ ಅಂದುಕೊಂಡ ಕೆಲಸ ಪೂರ್ತಿ ಮಾಡಲು ವಿಘ್ನಗಳು ಎದುರಾದೀತು. ತಾಳ್ಮೆಯಿರಲಿ.

ವೃಶ್ಚಿಕ: ವ್ಯಾಪಾರ, ವ್ಯವಹಾರಗಳಲ್ಲಿ ಮುನ್ನಡೆಯ ಯೋಗವಿದೆ. ವ್ಯವಹಾರದಲ್ಲಿ ಹಿತಶತ್ರುಗಳ ಹುನ್ನಾರ ಬೆಳಕಿಗೆ ಬರಲಿದೆ. ವಿಘ‍್ನ ಸಂತೋಷಿಗಳ ಮಾತಿಗೆ ಕಿವಿಗೊಡಬೇಕಾಗಿಲ್ಲ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ದೈನಂದಿನ ಬದುಕಿನಲ್ಲಿ ಬದಲಾವಣೆ ಬಯಸುತ್ತೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಅನಿರೀಕ್ಷಿತ ಖರ್ಚು ವೆಚ್ಚಗಳು ತಲೆದೋರಲಿವೆ. ಸಂಗಾತಿಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ಸಾಂಸಾರಿಕವಾಗಿ ಹಲವು ಚಿಂತೆಗಳು ಕಾಡುವುದರಿಂದ ಮನಸ್ಸು ಒಂದು ರೀತಿಯ ಖಿನ್ನತೆಗೊಳಗಾಗಲಿದೆ. ಆರೋಗ್ಯ ಭಾಗ್ಯಕ್ಕಾಗಿ ದೇವರ ಪ್ರಾರ್ಥನೆ ಮಾಡುವಿರಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗಕ್ಕಾಗಿ ಪ್ರಯತ್ನ ನಡೆಸಲಿದ್ದು, ಸಫಲರಾಗುವರು.

ಕುಂಭ: ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚಲಿದೆ. ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ಹೆಚ್ಚಲಿದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಜವಾಬ್ಧಾರಿ ಹೆಚ್ಚಲಿದೆ. ಶಾಂತಿ, ಸಮಾಧಾನ ಮುಖ್ಯ.

ಮೀನ: ನಿಮ್ಮ ಕೆಲವೊಂದು ಕೆಲಸಗಳು ಕುಟುಂಬ ಸದಸ್ಯರ ಅಸಮಾಧಾನಕ್ಕೆ ಕಾರಣವಾದೀತು. ಭಿನ್ನಾಭಿಪ್ರಾಯಗಳನ್ನು ಅಲ್ಲಲ್ಲೇ ಸರಿಪಡಿಸಿದರೆ ಉತ್ತಮ. ಮಹಿಳೆಯರಿಗೆ ತಾಳ್ಮೆ, ಸಂಯಮ ಅಗತ್ಯ. ವಿವಾಹ ಸಂಬಂಧಗಳು ಸ್ವಲ್ಪದರಲ್ಲೇ ತಪ್ಪಿ ಹೋಗಲಿದೆ. ಹಾಗಿದ್ದರೂ ನಿರಾಶೆ ಬೇಡ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ