Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 20 ಏಪ್ರಿಲ್ 2020 (09:19 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಮೇಲಧಿಕಾರಿಗಳ ಸಲಹೆ-ಸೂಚನೆ ಪಾಲಿಸಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಅನಗತ್ಯ ಚಿಂತೆಯಿಂದ ಅನಾರೋಗ್ಯ ಕಾಡಲಿದೆ.

ವೃಷಭ: ನಿಮ್ಮ ವ್ಯವಹಾರ ಚತುರತೆಯನ್ನು ಪ್ರದರ್ಶಿಸುವ ಕಾಲ ಬಂದಿದ್ದು, ಕ್ರಿಯಾತ್ಮಕವಾಗಿ ಯೋಚನೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ. ಕೌಟುಂಬಿಕವಾಗಿ ನಿಮ್ಮ ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಿಥುನ: ಕಾರ್ಯರಂಗದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕವಾಗಿ ಭಕ್ತಿಭಾವ ಮೂಡಲಿದೆ. ಧನ ವ್ಯಯ ಮಾಡುವಾಗ ಎಚ್ಚರವಿರಲಿ.

ಕರ್ಕಟಕ: ಸಣ್ಣ ವ್ಯಾಪಾರಿಗಳಿಗೆ ಭವಿಷ್ಯದ ಯೋಚನೆ ಕಾಡುವುದು. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಇಷ್ಟ ಭೋಜನ ಮಾಡುವ ಯೋಗವಿದೆ. ಸುಲಭವಾಗಿ ಕೈಗೆ ಸಿಗುವ ವಸ್ತು ಹೆಚ್ಚು ದಿನ ಬಾಳಿಕೆ ಬರದು ಎಂಬುದನ್ನು ಅರಿಯಲಿದ್ದೀರಿ.

ಸಿಂಹ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಅಪವಾದದ ಭೀತಿಯಿದೆ. ಮಹಿಳೆಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಕಾರ್ಯದೊತ್ತಡ ಅನುಭವಕ್ಕೆ ಬರುವುದು. ನೂತನವಾಗಿ ಕೈಗೆತ್ತಿಕೊಂಡ ಯೋಜನೆಗಳು ಅರ್ಧಕ್ಕೇ ನಿಲ್ಲಲಿವೆ. ನಿರುದ್ಯೋಗಿಗಳು ಉತ್ತಮ ದಿನಕ್ಕಾಗಿ ಕೆಲವು ದಿನ ಕಾಯಬೇಕಾಗುತ್ತದೆ.

ಕನ್ಯಾ: ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯವಿದೆ. ವಿದೇಶ ಯಾನವನ್ನು ಕೆಲವು ದಿನ ಮುಂದೂಡುವುದು ಒಳಿತು. ಉದ್ಯೋಗಾರ್ಥಿಗಳಿಗೆ ಭವಿಷ್ಯದ ಚಿಂತೆ ಕಾಡುವುದು. ಹಿರಿಯರ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ.

ತುಲಾ: ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ದೇಹಾಯಾಸವಾಗದಂತೆ ಕಾಳಜಿ ವಹಿಸಿ. ಗೃಹ ಬಳಕೆ ವಸ್ತುಗಳ ಖರೀದಿಗೆ ಧನ ವ್ಯಯವಾಗಲಿದೆ. ಆಸ್ತಿ ಖರೀದಿ ಮಾಡಲು ಚಿಂತನೆ ನಡೆಸಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಿಗಲಿದೆ.

ವೃಶ್ಚಿಕ: ಉದ್ಯೋಗಾರ್ಥಿಗಳಿಗೆ ಹೊಸ ಸವಾಲುಗಳು ಎದುರಾಗಲಿವೆ. ಕಾರ್ಯನಿಮಿತ್ತ ಕಿರು ಸಂಚಾರ, ಓಡಾಟ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳಲ್ಲಿ ಆಲಸ್ಯತನ ಪ್ರವೃತ್ತಿ ಕಂಡುಬರಲಿದೆ. ಅವಿವಾಹಿತರ ವಿವಾಹ ಮಾತುಕತೆ ಮುರಿದು ಬೀಳುವುದು.

ಧನು: ದೈವಾನುಗ್ರಹದಿಂದ ಇಂದು ನೀವು ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಹೊಸ ವಿಚಾರಗಳನ್ನು ಕಲಿಯಲಿದ್ದೀರಿ. ಮಕ್ಕಳ ವಿಚಾರದಲ್ಲಿ ವಿನಾಕಾರಣ ಚಿಂತೆ ಬೇಡ. ವಿದ್ಯಾರ್ಥಿಗಳಿಗೆ ಕಲಿಕೆಗೆ ಹೊಸ ದಾರಿಗಳು ಕಂಡುಬರಲಿದೆ.

ಮಕರ: ದುಡುಕಿ ಮಾತನಾಡಿ ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟು ಮಾಡಬೇಡಿ. ಕೌಟುಂಬಿಕವಾಗಿ ಹೊಸ ಕೆಲಸಗಳಿಗೆ ಕೈ ಹಾಕಲಿದ್ದೀರಿ. ಆರ್ಥಿಕವಾಗಿ ಹಣಕಾಸಿಗೆ ಅಡಚಣೆಯಿರದು. ಆದರೆ ದುಂದು ವೆಚ್ಚ ಬೇಡ. ಭವಿಷ್ಯದ ಸವಾಲುಗಳಿಗೆ ಇಂದೇ ಸಿದ್ಧರಾಗಿ.

ಕುಂಭ: ಎಷ್ಟೇ ಕಷ್ಟ ಬಂದರೂ ನಿಮ್ಮ ಮಾನಸಿಕ ಸ್ಥೈರ್ಯದಿಂದಲೇ ಗೆಲುವು ಕಾಣಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಬಂಧು ಮಿತ್ರರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಗಮನಕೊಡಿ. ದಿನದಂತ್ಯಕ್ಕೆ ಶುಭ ಸುದ್ದಿ.

ಮೀನ: ಮಹಿಳೆಯರಿಗೆ ಮನೆ ನಡೆಸುವ ಚಿಂತೆ ಕಾಡಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿದ್ದು, ಬೇಸರ ಉಂಟುಮಾಡಲಿದೆ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ಹೊಸ ಮಿತ್ರರ ಸಂಪಾದನೆ ಮಾಡಲಿದ್ದೀರಿ. ಚಿಂತೆಗೆ ಕಡಿವಾಣವಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ