Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 21 ಏಪ್ರಿಲ್ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಿತ್ರರೊಂದಿಗೆ ಉತ್ತಮ ಸಹಕಾರವಿದ್ದರೆ ಸಂಭಾವ್ಯ ಸಮಸ್ಯೆಗಳನ್ನು ದೂರ ಮಾಡಬಹುದು. ಶಾಂತ ಚಿತ್ತದಿಂದ ನಿಭಾಯಿಸುವುದು ಮುಖ್ಯ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ದೇಹಾರೋಗ್ಯದ ಬಗ್ಗೆ ಚಿಂತೆ ಬೇಡ.

ವೃಷಭ: ಪ್ರೀತಿ ಪಾತ್ರರ ಅಗಲುವಿಕೆಯ ನೋವು ಕಾಡುವುದು. ಮನೆಯ ಸದಸ್ಯರಿಗೆ ಆರೋಗ್ಯ ಸಮಸ್ಯೆಯಾಗಿ ಚಿಂತೆಯಾಗಬಹುದು. ವ್ಯವಹಾರದಲ್ಲಿ ಮುನ್ನಡೆಯಿದ್ದರೂ ಸಕಾಲದಲ್ಲಿ ಹಣ ಕೈಗೆಟುಕದೇ ಹೋಗಬಹುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಿಥುನ: ಕಾರ್ಯರಂಗದಲ್ಲಿ ಅಧಿಕ ಕಾರ್ಯದೊತ್ತಡವಿರಲಿದ್ದು, ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಪ್ರೀತಿ ಪಾತ್ರರೊಂದಿಗೆ ಹೆಚ್ಚು ಬೆರೆಯುವುದರಿಂದ ಮನಸ್ಸಿಗೆ ಸಂತೋಷವಾಗಲಿದೆ. ನಿಮ್ಮ ಕ್ರಿಯಾತ್ಮಕ ಯೋಚನೆಗಳಿಗೆ ಕೆಲಸ ಕೊಡಿ.

ಕರ್ಕಟಕ: ವ್ಯವಹಾರದಲ್ಲಿ ನಿಮ್ಮ ಧಾರಾಳತನವೇ ಮುಳುವಾಗಬಹುದು. ಇನ್ನೊಬ್ಬರಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಕ್ಕಿಹಾಕಿಕೊಳ್ಳುವಿರಿ. ಎಚ್ಚರಿಕೆಯಿಂದ ಹೆಜ್ಜೆಯಿಡಿ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಸೆಯಾಗಬಹುದು. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕೃಷಿಕರಿಗೆ ತಮ್ಮ ವ್ಯವಹಾರ ಸುಗಮಗೊಳಿಸಲು ಹೊಸ ದಾರಿ ಹುಡುಕಬೇಕಾಗತ್ತದೆ.

ಕನ್ಯಾ: ಭವಿಷ್ಯದ ಕೆಲಸಗಳಿಗೆ ಇಂದೇ ಯೋಜನೆ ರೂಪಿಸುವಿರಿ. ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರದಿಂದಲೇ ಹೆಜ್ಜೆಯಿಡುವುದು ಸೂಕ್ತ. ಹಿರಿಯರ ಸಲಹೆಗಳು ಪಥ್ಯವಾಗದೇ ಹೋಗಬಹುದು. ದುಡಕು ವರ್ತನೆ ತೋರಬೇಡಿ. ಮನಸ್ಸಿಗೆ ಸಂತೋಷ ಕೊಡುವ ಕೆಲಸ ಮಾಡಿ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಹಿಂದೆ ಪಿತೂರಿ ನಡೆಸುತ್ತಿದ್ದವರ ವಂಚನೆ ಬೆಳಕಿಗೆ ಬರಲಿದೆ. ನಿಮ್ಮ ಆತ್ಮಸ್ಥೈರ್ಯವೇ ನಿಮ್ಮನ್ನು ಕಾಪಾಡಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ವಿದ್ಯಾರ್ಥಿಗಳಿಗೆ ಪರಿಶ್ರಮ ಅಗತ್ಯ.

ವೃಶ್ಚಿಕ: ಸ್ವ ಪ್ರಯತ್ನವಿಲ್ಲದೇ ಕಾರ್ಯ ಸಾಗದು. ಉದಾಸೀನ ಪ್ರವೃತ್ತಿ ಬಿಟ್ಟು ಕೆಲಸ ಮಾಡಿದರೆ ಯಶಸ್ಸು ಗಳಿಸುವಿರಿ. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ಚಿಂತಿತ ಕೆಲಸಗಳನ್ನು ಮಾಡಲು ಖರ್ಚು ವೆಚ್ಚಗಳಾಗಲಿವೆ.

ಧನು: ಪ್ರೀತಿ ಪಾತ್ರರೊಂದಿಗೆ ಮನಸ್ಸು ಬಿಚ್ಚಿ ಮಾತನಾಡುವುದರಿಂದ ನಿಮ್ಮ ಮನಸ್ಸಿಗೆ ಬೇಸರ ಕಳೆಯುವಿರಿ. ಆರ್ಥಿಕವಾಗಿ ಹೆಚ್ಚು ಲಾಭ ಮಾಡುವ ದುರಾಲೋಚನೆ ಬೇಡ. ವ್ಯಾಪಾರದಲ್ಲಿ ಮುನ್ನಡೆಯಿರಲಿದೆ. ಸಹೋದರರ ಪ್ರೀತಿಗೆ ಪಾತ್ರರಾಗಲಿದ್ದೀರಿ.

ಮಕರ: ಎಷ್ಟೇ ಒಳ್ಳೆಯ ಕೆಲಸ ಮಾಡಿದ್ದರೂ ನೀವು ದುಡುಕಿ ಮಾಡುವ ಒಂದು ತಪ್ಪಿನಿಂದ ಕೆಟ್ಟ ಮಾತು ಕೇಳಿಸಿಕೊಳ್ಳಬೇಕಾದೀತು. ಮಾತಿನ ಮೇಲೆ ನಿಗಾ ಇರಲಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ನಿಮ್ಮ ಮನಸ್ಸು ಹೇಳುವುದನ್ನು ಕೇಳಿ. ಬೇರೆಯವರ ಮಾತಿಗೆ ಕಿವಿಗೊಟ್ಟು ಇಷ್ಟವಿಲ್ಲದ ಕೆಲಸ ಮಾಡಲು ಹೋದರೆ ತೊಂದರೆಯೇ ಹೆಚ್ಚು. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಮನೆಯಲ್ಲಿ ನಡೆಯಬೇಕಿದ್ದ ಶುಭ ಮಂಗಲ ಕಾರ್ಯ ಮುಂದೂಡಿಕೆಯಾಗಲಿದೆ.

ಮೀನ: ಅನಿವಾರ್ಯವಾಗಿ ಪರಿಸ್ಥಿತಿಗೆ ಹೊಂದಿಕೊಳ್ಳಲೇಬೇಕಾದ ದಿನವಿದು. ಎಲ್ಲವೂ ನೀವು ಅಂದುಕೊಂಡಂತೇ ಸಾಗುತ್ತಿಲ್ಲ ಎಂಬ ಚಿಂತೆ ಕಾಡಬಹುದು. ಮಾನಸಿಕ ಸ್ಥೈರ್ಯ ಬೆಳೆಸಿಕೊಳ್ಳಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಸಲಹೆ ಸೂಚನೆ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ