ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 21 ಏಪ್ರಿಲ್ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಿತ್ರರೊಂದಿಗೆ ಉತ್ತಮ ಸಹಕಾರವಿದ್ದರೆ ಸಂಭಾವ್ಯ ಸಮಸ್ಯೆಗಳನ್ನು ದೂರ ಮಾಡಬಹುದು. ಶಾಂತ ಚಿತ್ತದಿಂದ ನಿಭಾಯಿಸುವುದು ಮುಖ್ಯ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ದೇಹಾರೋಗ್ಯದ ಬಗ್ಗೆ ಚಿಂತೆ ಬೇಡ.

ವೃಷಭ: ಪ್ರೀತಿ ಪಾತ್ರರ ಅಗಲುವಿಕೆಯ ನೋವು ಕಾಡುವುದು. ಮನೆಯ ಸದಸ್ಯರಿಗೆ ಆರೋಗ್ಯ ಸಮಸ್ಯೆಯಾಗಿ ಚಿಂತೆಯಾಗಬಹುದು. ವ್ಯವಹಾರದಲ್ಲಿ ಮುನ್ನಡೆಯಿದ್ದರೂ ಸಕಾಲದಲ್ಲಿ ಹಣ ಕೈಗೆಟುಕದೇ ಹೋಗಬಹುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಿಥುನ: ಕಾರ್ಯರಂಗದಲ್ಲಿ ಅಧಿಕ ಕಾರ್ಯದೊತ್ತಡವಿರಲಿದ್ದು, ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಪ್ರೀತಿ ಪಾತ್ರರೊಂದಿಗೆ ಹೆಚ್ಚು ಬೆರೆಯುವುದರಿಂದ ಮನಸ್ಸಿಗೆ ಸಂತೋಷವಾಗಲಿದೆ. ನಿಮ್ಮ ಕ್ರಿಯಾತ್ಮಕ ಯೋಚನೆಗಳಿಗೆ ಕೆಲಸ ಕೊಡಿ.

ಕರ್ಕಟಕ: ವ್ಯವಹಾರದಲ್ಲಿ ನಿಮ್ಮ ಧಾರಾಳತನವೇ ಮುಳುವಾಗಬಹುದು. ಇನ್ನೊಬ್ಬರಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಕ್ಕಿಹಾಕಿಕೊಳ್ಳುವಿರಿ. ಎಚ್ಚರಿಕೆಯಿಂದ ಹೆಜ್ಜೆಯಿಡಿ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಸೆಯಾಗಬಹುದು. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕೃಷಿಕರಿಗೆ ತಮ್ಮ ವ್ಯವಹಾರ ಸುಗಮಗೊಳಿಸಲು ಹೊಸ ದಾರಿ ಹುಡುಕಬೇಕಾಗತ್ತದೆ.

ಕನ್ಯಾ: ಭವಿಷ್ಯದ ಕೆಲಸಗಳಿಗೆ ಇಂದೇ ಯೋಜನೆ ರೂಪಿಸುವಿರಿ. ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರದಿಂದಲೇ ಹೆಜ್ಜೆಯಿಡುವುದು ಸೂಕ್ತ. ಹಿರಿಯರ ಸಲಹೆಗಳು ಪಥ್ಯವಾಗದೇ ಹೋಗಬಹುದು. ದುಡಕು ವರ್ತನೆ ತೋರಬೇಡಿ. ಮನಸ್ಸಿಗೆ ಸಂತೋಷ ಕೊಡುವ ಕೆಲಸ ಮಾಡಿ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಹಿಂದೆ ಪಿತೂರಿ ನಡೆಸುತ್ತಿದ್ದವರ ವಂಚನೆ ಬೆಳಕಿಗೆ ಬರಲಿದೆ. ನಿಮ್ಮ ಆತ್ಮಸ್ಥೈರ್ಯವೇ ನಿಮ್ಮನ್ನು ಕಾಪಾಡಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ವಿದ್ಯಾರ್ಥಿಗಳಿಗೆ ಪರಿಶ್ರಮ ಅಗತ್ಯ.

ವೃಶ್ಚಿಕ: ಸ್ವ ಪ್ರಯತ್ನವಿಲ್ಲದೇ ಕಾರ್ಯ ಸಾಗದು. ಉದಾಸೀನ ಪ್ರವೃತ್ತಿ ಬಿಟ್ಟು ಕೆಲಸ ಮಾಡಿದರೆ ಯಶಸ್ಸು ಗಳಿಸುವಿರಿ. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ಚಿಂತಿತ ಕೆಲಸಗಳನ್ನು ಮಾಡಲು ಖರ್ಚು ವೆಚ್ಚಗಳಾಗಲಿವೆ.

ಧನು: ಪ್ರೀತಿ ಪಾತ್ರರೊಂದಿಗೆ ಮನಸ್ಸು ಬಿಚ್ಚಿ ಮಾತನಾಡುವುದರಿಂದ ನಿಮ್ಮ ಮನಸ್ಸಿಗೆ ಬೇಸರ ಕಳೆಯುವಿರಿ. ಆರ್ಥಿಕವಾಗಿ ಹೆಚ್ಚು ಲಾಭ ಮಾಡುವ ದುರಾಲೋಚನೆ ಬೇಡ. ವ್ಯಾಪಾರದಲ್ಲಿ ಮುನ್ನಡೆಯಿರಲಿದೆ. ಸಹೋದರರ ಪ್ರೀತಿಗೆ ಪಾತ್ರರಾಗಲಿದ್ದೀರಿ.

ಮಕರ: ಎಷ್ಟೇ ಒಳ್ಳೆಯ ಕೆಲಸ ಮಾಡಿದ್ದರೂ ನೀವು ದುಡುಕಿ ಮಾಡುವ ಒಂದು ತಪ್ಪಿನಿಂದ ಕೆಟ್ಟ ಮಾತು ಕೇಳಿಸಿಕೊಳ್ಳಬೇಕಾದೀತು. ಮಾತಿನ ಮೇಲೆ ನಿಗಾ ಇರಲಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ನಿಮ್ಮ ಮನಸ್ಸು ಹೇಳುವುದನ್ನು ಕೇಳಿ. ಬೇರೆಯವರ ಮಾತಿಗೆ ಕಿವಿಗೊಟ್ಟು ಇಷ್ಟವಿಲ್ಲದ ಕೆಲಸ ಮಾಡಲು ಹೋದರೆ ತೊಂದರೆಯೇ ಹೆಚ್ಚು. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಮನೆಯಲ್ಲಿ ನಡೆಯಬೇಕಿದ್ದ ಶುಭ ಮಂಗಲ ಕಾರ್ಯ ಮುಂದೂಡಿಕೆಯಾಗಲಿದೆ.

ಮೀನ: ಅನಿವಾರ್ಯವಾಗಿ ಪರಿಸ್ಥಿತಿಗೆ ಹೊಂದಿಕೊಳ್ಳಲೇಬೇಕಾದ ದಿನವಿದು. ಎಲ್ಲವೂ ನೀವು ಅಂದುಕೊಂಡಂತೇ ಸಾಗುತ್ತಿಲ್ಲ ಎಂಬ ಚಿಂತೆ ಕಾಡಬಹುದು. ಮಾನಸಿಕ ಸ್ಥೈರ್ಯ ಬೆಳೆಸಿಕೊಳ್ಳಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಸಲಹೆ ಸೂಚನೆ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments