Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 23 ಏಪ್ರಿಲ್ 2020 (09:13 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯಕ್ಷೇತ್ರದಲ್ಲಿ ನಿಧಾನಗತಿಯಲ್ಲಿ ಕೆಲಸಗಳು ಸಾಗಲಿದ್ದು, ನಿಮ್ಮ ಸಹನೆ ಪರೀಕ್ಷೆ ನಡೆಸಲಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಕಾಯ್ದುಕೊಳ‍್ಳಿ. ಇಷ್ಟ ದೇವರ ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಆರ್ಥಿಕ ಸ್ಥಿತಿಗತಿ ಏರುಪೇರಾಗದಂತೆ ಎಚ್ಚರವಹಿಸಿ. ಕಿರು ಸಂಚಾರದ ಸಾಧ‍್ಯತೆ. ಮಕ್ಕಳ ದೇಹಾರೋಗ್ಯದಲ್ಲಿ ಏರುಪೇರಾಗಲಿದೆ. ಎಚ್ಚರಿಕೆ ವಹಿಸಿ. ಮನೆಯಲ್ಲಿ ಗೃಹ ಬಳಕೆ ವಸ್ತುಗಳ ಖರೀದಿಗೆ ಖರ್ಚುವೆಚ್ಚವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ಕಾರ್ಯಕ್ಷೇತ್ರದಲ್ಲಿ ಅಡಚಣೆ ತೋರಿಬರಲಿದೆ. ಇತರರೊಂದಿಗೆ ಬೆರೆಯಲು ಹಿಂಜರಿಕೆ ಬಂದಿರುತ್ತದೆ. ಅನವಶ್ಯಕವಾಗಿ ಚಿಂತೆ ಮಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ.

ಕರ್ಕಟಕ: ಪ್ರಮುಖ ವಿಚಾರಗಳನ್ನು ಸಂಗಾತಿಯಿಂದ ಮುಚ್ಚಿಟ್ಟುಕೊಂಡರೆ ಮುಂದೆ ಸಮಸ್ಯೆಯಾದೀತು. ಕೌಟುಂಬಿಕವಾಗಿ ಭಿನ್ನಾಭಿಪ್ರಾಯ ಬರದಂತೆ ಎಚ್ಚರಿಕೆ ವಹಿಸಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಿಂಹ: ಅನಪೇಕ್ಷಿತ ಅತಿಥಿಗಳನ್ನು ಸ್ವಾಗತಿಸುವ ಅನಿವಾರ್ಯತೆ ಎದುರಾಗಲಿದೆ. ನೂತನ ದಂಪತಿಗಳಿಗೆ ಹೊಂದಾಣಿಕೆಯ ಕೊರತೆ ಉಂಟಾಗಲಿದೆ. ಖರ್ಚು ವೆಚ್ಚಗಳು ಹೆಚ್ಚಾಗಲಿವೆ. ನಿರ್ಧಾರ ಕೈಗೊಳ್ಳುವಾಗ ಅನಿಶ್ಚಿತತೆ ಎದುರಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಬಹುದಿನಗಳಿಂದ ಕಾಯುತ್ತಿದ್ದ ರಹಸ್ಯಗಳು ಇಂದು ಹೊರಬೀಳಲಿದೆ. ಆರೋಗ್ಯದಲ್ಲಿ ಕಂಡುಬರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಆಪ್ತೇಷ್ಟರೊಂದಿಗೆ ದುಃಖ ಹಂಚಿಕೊಳ್ಳಲು ಬಯಸುತ್ತೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳಾಗಲಿವೆ.

ತುಲಾ: ಕೌಟುಂಬಿಕವಾಗಿ ನಿರ್ಧಾರ ಕೈಗೊಳ್ಳುವಾಗ ಗೊಂದಲದ ಪರಿಸ್ಥಿತಿ ಎದುರಾಗಲಿದೆ. ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆ ಪಡೆಯುವಿರಿ. ಕಾರ್ಯಕ್ಷೇತ್ರದಲ್ಲಿ ಕಠಿಣ ನಿರ್ಧಾರ ತೆಗೆದುಕೊಳ್ಳಲು ಹಿಂದೆ ಮುಂದೆ ನೋಡುವ ಪರಿಸ್ಥಿತಿ ಎದುರಾಗಲಿದೆ.

ವೃಶ್ಚಿಕ: ಹಿರಿಯರಿಂದ ಉಡುಗೊರೆ ಸ್ವೀಕರಿಸಲಿದ್ದೀರಿ. ಉದ್ಯೋಗಿಗಳಿಗೆ ವೃತ್ತಿ ರಂಗದಲ್ಲಿ ಬದಲಾವಣೆಗೆ ಮನಸ್ಸು ಬಯಸುವುದು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಸೆಯಾಗಬಹುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಧನು: ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಸಾಮರ್ಥ್ಯಕ್ಕಿಂತ ಹೆಚ್ಚು ಕೆಲಸ ಮಾಡಲು ಹೋದರೆ ದೇಹಾಯಾಸವಾದೀತು. ಸಂಗಾತಿಯ ಬಹುದಿನಗಳ ಕನಸು ನನಸಾಗಿಸಲಿದ್ದೀರಿ. ಇಷ್ಟದ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸು ಉಲ್ಲಾಸವಾಗಲಿದೆ.

ಮಕರ: ಆತುರದಿಂದ ಕೈಗೊಳ್ಳುವ ನಿರ್ಧಾರಗಳು ಅನಾಹುತಕ್ಕೆ ಕಾರಣವಾದೀತು. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರುವುದು. ಅವಿವಾಹಿತರಿಗೆ ವಿವಾಹ ಮಾತುಕತೆಯಲ್ಲಿ ಮುನ್ನಡೆಯಿರಲಿದೆ. ಬೆಂಕಿ, ನೀರಿನ ಸಹವಾಸ ಮಾಡುವಾಗ ಎಚ್ಚರಿಕೆಯಿಂದಿರಿ.

ಕುಂಭ: ಮನಸ್ಸು ವಿನೋದ ಕೊಡುವ ಕೆಲಸಗಳ ಕಡೆಗೆ ವಾಲುವುದು. ಆದರೆ ಕರ್ತವ್ಯದ ಕರೆಗೆ ಓಗೊಡಬೇಕಾಗುತ್ತದೆ. ವಾಹನ ಸವಾರರಿಗೆ ಅಪಘಾತದ ಭಯವಿದೆ. ಎಚ್ಚರಿಕೆ ಅಗತ್ಯ. ನಿಮ್ಮ ನೆರೆಹೊರೆಯವರಿಂದ ಚಾಡಿ ಮಾತು ಕೇಳಿಬಂದೀತು. ತಾಳ್ಮೆಯಿರಲಿ.

ಮೀನ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡಿ ಕೆಲಸದಲ್ಲಿ ನಿರುತ್ಸಾಹ ಕಂಡುಬರಬಹುದು. ತಾಳ್ಮೆ ಅತೀ ಅಗತ್ಯ. ಮೇಲ್ವರ್ಗದ ಅಧಿಕಾರಿಗಳಿಗೆ ಕಾರ್ಯದೊತ್ತಡ ಹೆಚ್ಚಲಿದೆ. ಹೊಸ ಸ್ನೇಹಿತರನ್ನು ಸಂಪಾದಿಸಲಿದ್ದೀರಿ. ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ