Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 29 ಏಪ್ರಿಲ್ 2020 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತವಾಗಿ ಬರುವ ತೊಂದರೆಗಳ ನಿವಾರಣೆಗೆ ಸಹೋದ್ಯೋಗಿಗಳ ನೆರವು ಪಡೆಯಲಿದ್ದೀರಿ. ಮೇಲಧಿಕಾರಿಗಳ ಅಸಹಕಾರ ಕಿರಿ ಕಿರಿ ಎನಿಸಲಿದೆ. ಆರ್ಥಿಕವಾಗಿ ಭವಿಷ್ಯದ ವೆಚ್ಚಗಳಿಗೆ ಸಿದ್ಧರಾಗಬೇಕಿದೆ.

ವೃಷಭ: ಯಾರಿಗೂ ನೋವು ಕೊಡಬಾರದೆಂಬ ನಿಮ್ಮ ಒಳ್ಳೆಯ ಮನಸ್ಥಿತಿ ನಿಮಗೆ ಉಪಯೋಗವಾಗಲಿದೆ. ಆದರೆ ನಿಮ್ಮ ವಿಶ್ವಾಸದ ದುರುಪಯೋಗ ಮಾಡುವವರ ಬಗ್ಗೆ ಎಚ್ಚರವಾಗಿರಿ. ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಿ. ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಕೆಲಸ ಕಾರ್ಯಗಳಿಗೆ ಮುನ್ನಡೆ ಸಿಗಲಿದೆ. ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ನಿರಾಶೆ ಕಾಡಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಕಾರ್ಯರಂಗದಲ್ಲಿ ಉನ್ನತ ಸ್ಥಾನ ಮಾನದ ಯೋಗವಿದೆ. ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯಲಿವೆ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಕಲಾ ಕ್ಷೇತ್ರದಲ್ಲಿರುವವರು ಕೀರ್ತಿ ಸಂಪಾದಿಸಲಿದ್ದೀರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿಲ್ಲ. ಆದರೆ ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕಾಗುತ್ತದೆ.

ಕನ್ಯಾ: ಅನಿರೀಕ್ಷಿತವಾಗಿ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾಗುತ್ತದೆ. ಕಷ್ಟದ ಸಮಯದಲ್ಲಿ ಮಿತ್ರರ ನೆರವು ಸಿಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಮಕ್ಕಳಿಂದ ಸಂತಸ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ.

ತುಲಾ: ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ಕಾಳಜಿಯಿರಲಿ.

ವೃಶ್ಚಿಕ: ನಿಮ್ಮ ಸ್ವಯಂ ಕೃತ ಅಪರಾಧಗಳಿಗೆ ಪಶ್ಚಾತ್ತಾಪ ಪಡಲಿದ್ದೀರಿ. ವ್ಯವಹಾರದಲ್ಲಿ ಲೆಕ್ಕಪತ್ರಗಳ ಬಗ್ಗೆ ಸರಿಯಾದ ನಿಗಾ ಇರಲಿ. ಸರಕಾರಿ ಅಧಿಕಾರಿಗಳಿಗೆ ಕಾರ್ಯದೊತ್ತಡ ಅಧಿಕವಾಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗೆ ಸಿದ್ಧರಾಗಬೇಕಾಗುತ್ತದೆ.

ಧನು: ಆಸ್ತಿ ವಿಚಾರವಾಗಿ ದಾಯಾದಿಗಳೊಂದಿಗೆ ವಾಗ್ವಾದ ಉಂಟಾಗಬಹುದು. ಹಿರಿಯರ ಮಧ್ಯಸ್ಥಿಕೆಗೆ ಬೆಲೆ ಕೊಡಿ. ಸಂಗಾತಿಯ ಸಲಹೆ ಪಡೆದು ಮುನ್ನಡೆದರೆ ಅನುಕೂಲ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಯಶಸ್ಸು ನಿಮ್ಮದಾಗಲಿದೆ.

ಮಕರ: ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಂಡುಬರಬಹುದು. ನಾಜೂಕಾಗಿ ಮನಸ್ತಾಪಗಳನ್ನು ನಿಭಾಯಿಸಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ವಿದ್ಯಾರ್ಥಿಗಳು ಪೋಷಕರಿಗೆ ಸಂತೋಷ ಕೊಡುವ ಕೆಲಸ ಮಾಡಲಿದ್ದಾರೆ.

ಕುಂಭ: ಸಂಗಾತಿಯ ಆರೋಗ್ಯ ಚಿಂತೆಗೆ ಕಾರಣವಾಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಮಹಿಳೆಯರಿಗೆ ಕಾರ್ಯದೊತ್ತಡ ಅಧಿಕವಾಗಲಿದೆ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.

ಮೀನ: ಮನಸ್ಸಿಗೆ ಇಷ್ಟವಾಗುವವರ ಜತೆ ಮಾತುಕತೆ ನಡೆಸುವುದರಿಂದ ಸಂತಸ ಅನುಭವಿಸಲಿದ್ದೀರಿ. ನಿಮ್ಮ ಬಹುದಿನಗಳ ಕನಸಿನ ಯೋಜನೆಗೆ ಚಾಲನೆ ನೀಡಲಿದ್ದೀರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ನೆರೆಹೊರೆಯವರೊಂದಿಗೆ ವಾಗ್ವಾದವಾಗದಂತೆ ಎಚ್ಚರ ವಹಿಸಿ.

Share this Story:

Follow Webdunia kannada

ಮುಂದಿನ ಸುದ್ದಿ

ವೃಶ್ಚಿಕ ರಾಶಿಯವರ ದೋಷ ಪರಿಹಾರವಾಗಲು ಇದನ್ನು ದಾನ ಮಾಡಿ