Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 30 ಏಪ್ರಿಲ್ 2020 (09:15 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯವಹಾರದಲ್ಲಿ ನಿಮ್ಮ ಅನುಭವದ ಕೊರತೆಯಿಂದ ತೊಂದರೆ ಅನುಭವಿಸಬೇಕಾದೀತು. ಸಂಗಾತಿಯ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ಇಷ್ಟ ಭೋಜನ ಮಾಡುವ ಯೋಗವಿದೆ.

ವೃಷಭ: ಮನಸ್ಸಿಲ್ಲದೇ ಇದ್ದರೂ ಪ್ರೀತಿ ಪಾತ್ರರಿಗೋಸ್ಕರ ಕೆಲವೊಂದು ಕೆಲಸ ಮಾಡಲು ಮುಂದಾಗಬೇಕಾಗುತ್ತದೆ. ಮನೆಯವರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಹೆಣ್ಣು ಮಕ್ಕಳಿಗೆ ತವರಿನಿಂದ ಉಡುಗೊರೆ ನಿರೀಕ್ಷಿಸಬಹುದು. ಆರೋಗ್ಯದ ಕಡೆಗೆ ನಿಗಾ ಇರಲಿ.

ಮಿಥುನ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶವಿದೆ. ಸಂಗಾತಿಯ ಬಹುದಿನಗಳ ಆಸೆ ನೆರವೇರಿಸಲಿದ್ದೀರಿ. ಮಹಿಳೆಯರಿಗೆ ಗೃಹ ಕೃತ್ಯಗಳಲ್ಲೇ ಕಳೆದುಹೋಗಬೇಕಾಗುತ್ತದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಮನಸ್ಸು ಮಾಡಲಿದ್ದೀರಿ.

ಕರ್ಕಟಕ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ನಿಮ್ಮ ಅನುಕೂಲಕ್ಕೆ ತಕ್ಕಂತೆ ಕೆಲವೊಂದು ವ್ಯವಸ್ಥೆ ಬದಲಾಯಿಸುವುದು ಉತ್ತಮ. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಸ್ಥಾನ ಮಾನ ವೃದ್ಧಿಯಾದರೂ ಜವಾಬ್ಧಾರಿಗಳು ಹೆಚ್ಚಾಗಲಿವೆ. ಅಧಿಕ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಅನೇಕ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ.

 
ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಸಲಹೆ ಸೂಚನೆ ಪಾಲಿಸಬೇಕಾಗುತ್ತದೆ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರ ವಹಿಸಿ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬರಬಹುದು. ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರ್ತಿ ಮಾಡಲಾಗದೇ ನಿರಾಸೆಯಾಗಬಹುದು. ಪ್ರೀತಿ ಪಾತ್ರರ ಮನಸ್ಸಿಗೆ ದುಡುಕಿ ನೋವುಂಟುಮಾಡಬೇಡಿ. ನಿಮ್ಮ ಎಚ್ಚರಿಕೆಯಲ್ಲಿ ನೀವಿರಬೇಕು.

ವೃಶ್ಚಿಕ: ಕುಟುಂಬದವರೊಂದಿಗೆ ಸಂತೋಷದಿಂದ ಕಾಲಕಳೆಯುವ ಭಾಗ್ಯ ನಿಮ್ಮದಾಗಲಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಭೀತಿ ಕಾಡಲಿದೆ. ಹಿರಿಯರ ಮಾತುಗಳಿಗೆ ಕಿವಿಗೊಡುವುದು ಉತ್ತಮ.

ಧನು: ಮೆಚ್ಚಿನ ಮಡದಿಯ ಮನದಾಸೆ ಪೂರೈಸಲು ನಾನಾ ಕಸರತ್ತು ನಡೆಸುವಿರಿ. ಆರ್ಥಿಕವಾಗಿ ನಾನಾ ರೀತಿಯ ಖರ್ಚು ವೆಚ್ಚಗಳು ತೋರಿಬರಲಿವೆ. ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಎಷ್ಟೋ ದಿನದಿಂದ ಭೇಟಿಯಾಗಬೇಕೆಂದುಕೊಂಡಿದ್ದ ಹಳೆಯ ಮಿತ್ರರೊಂದಿಗೆ ಮಾತುಕತೆ ನಡೆಸಿ ಮನಸ್ಸಿಗೆ ಸಂತೋಷವಾಗುವುದು. ಹಳೆಯ ಸಂಬಂಧಗಳು ಮರಳಿ ಕೂಡಲಿವೆ. ಇಷ್ಟದ ವಸ್ತು ಖರೀದಿಗೆ ಧನವ್ಯಯವಾಗಲಿದೆ. ಸಂತೋಷ, ನೆಮ್ಮದಿ ನಿಮ್ಮದಾಗುವುದು.

ಕುಂಭ: ಅಧಿಕ ಧನ ಸಂಪಾದನೆ ಮಾಡಲು ಹೋಗಿ ಅಪರಿಚತರಿಂದ ವಂಚನೆಗೊಳಗಾಗುವ ಭೀತಿಯಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಕಾರ್ಯಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕತೆಗೆ ಕೆಲಸ ಕೊಡಿ. ಮಹಿಳೆಯರಿಗೆ ಚಿನ್ನಾಭರಣಗಳನ್ನು ಕಳೆದುಕೊಳ್ಳುವ ಭಯ ಕಾಡಲಿದೆ.

ಮೀನ: ವ್ಯಾಪಾರಿಗಳಿಗೆ ಲಾಭವಾಗಲಿದೆ. ಬಂಡವಾಳ ಹೂಡಿಕೆಗೆ ಇದು ಸಕಾಲವಿಲ್ಲದಿದ್ದರೂ ಯೋಜನೆಗಳನ್ನು ರೂಪಿಸಬಹುದು.  ಮನೆ, ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗದ ಭರವಸೆ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ