Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 2 ಮೇ 2020 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಮೇಲಧಿಕಾರಿಗಳ ಸಲಹೆ ಸೂಚನೆ ಪಾಲಿಸಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯ ಮನದಾಸೆಗೆ ಬೆಲೆಕೊಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ವೃಷಭ: ಹೊಸದಾಗಿ ವೃತ್ತಿ ಜೀವನ ಆರಂಭಿಸಿರುವವರಿಗೆ ಭವಿಷ್ಯದ ಚಿಂತೆ ಕಾಡಲಿದೆ. ಆರ್ಥಿಕವಾಗಿ ಸರಿಯಾದ ಯೋಜನೆ ಹಾಕಿಕೊಳ್ಳದಿದ್ದಲ್ಲಿ ತೊಂದರೆಗೆ ಸಿಲುಕಬೇಕಾದೀತು. ಮನೆಯಲ್ಲಿ ನಡೆಯಬೇಕಿದ್ದ ಶುಭ ಮಂಗಲ ಕಾರ್ಯಗಳು ಮುಂದೂಡಿಕೆಯಾಗಲಿವೆ.

ಮಿಥುನ: ನೀವೀಗ ಉತ್ತಮ ದಿನಗಳಿಗಾಗಿ ಕಾಯಲೇಬೇಕು. ಕಾರ್ಯರಂಗದಲ್ಲಿ ಪರಿಸ್ಥಿತಿಗಳು ಪ್ರತಿಕೂಲವೆನಿಸಬಹುದು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯುವಿರಿ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ಎದುರಾಗಲಿವೆ. ಕುಲದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ನಿಮ್ಮ ಪ್ರೀತಿ ಪಾತ್ರರನ್ನು ಕಾಣುವ ತವಕ ಮೂಡಲಿದೆ. ದೇಹಾರೋಗ್ಯದ ಬಗ್ಗೆ ಕಾಳಹಿವಹಿಸಬೇಕಾಗುತ್ತದೆ. ಸದ್ಯದಲ್ಲೇ ವಾಹನ ಖರೀದಿ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಿಂಹ: ಮಿತ್ರರ ಸಹಕಾರದಿಂದ ಬರುವಂತಹ ಕಷ್ಟಗಳನ್ನು ಸುಗಮವಾಗಿ ಎದುರಿಸಲಿದ್ದೀರಿ. ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಬಂಡವಾಳ ಹೂಡಿಕೆ ಮಾಡಲು ಸಕಾಲ. ನಿರುದ್ಯೋಗಿಗಳಿಗೆ ಸ್ವಯಂ ವೃತ್ತಿಯಿಂದ ಲಾಭವಾಗಲಿದೆ.

 
ಕನ್ಯಾ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಶುಭವಾಗುವುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ನಿಮ್ಮ ಪರವಾದ ತೀರ್ಪು ಬರಲಿದೆ. ದಾಯಾದಿ ಕಲಹಗಳು ಅಂತ್ಯವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ಇಂದು ಅಪ್ಪಿ ತಪ್ಪಿಯೂ ಯಾರಿಗೂ ಸಾಲ ಕೊಡಲು ಹೋಗಬೇಡಿ. ಮರಳಿ ಬಾರದು. ಪಾಲು ಬಂಡವಾಳ ಹೂಡಿಕೆ ಮಾಡಲು ಕೆಲವು ದಿನ ಕಾಯುವುದು ಉತ್ತಮ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ನೂತನ ದಂಪತಿಗಳಿಗೆ ಶುಭ ದಿನ.

ವೃಶ್ಚಿಕ: ವೃತ್ತಿರಂಗದಲ್ಲಿ ವಿನಾಕಾರಣ ಅಪವಾದಕ್ಕೆ ಗುರಿಯಾಗಲಿದ್ದೀರಿ. ದುಡುಕಿನ ಮಾತು, ವರ್ತನೆ ತೋರದಿರಿ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚ ಬೇಡ.

ಧನು: ನಿಮ್ಮ ಧಾರಾಳತನವೇ ನಿಮಗೆ ಮುಳುವಾಗಬಹುದು. ನೀವು ನಂಬಿಕೊಂಡಿದ್ದವರಿಂದಲೇ ನಿಮಗೆ ವಂಚನೆಯಾಗುವ ಸಾಧ‍್ಯತೆಯಿದೆ. ಎಚ್ಚರಿಕೆಯಿಂದಿರಿ. ಸಂಗಾತಿಯ ಮಾತಿಗೆ ಕಿವಿಗೊಡಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬರಲಿದೆ.

ಮಕರ: ಮನಸ್ಸಿಗೆ ಇಷ್ಟವಾಗುವ ಕೆಲಸಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದರಿಂದ ಚಿಂತೆ ಮರೆಯಲಿದ್ದೀರಿ. ಕೆಳ ಹಂತದ ನೌಕರರಿಗೆ ಭವಿಷ್ಯದ ಚಿಂತೆ ಕಾಡಲಿದೆ. ಬಹುದಿನಗಳ ನಂತರ ಮಿತ್ರರ ಭೇಟಿಯಾಗುವ ಅವಕಾಶ ಒದಗಿಬರಲಿದ್ದು, ಸಂತಸವಾಗಲಿದೆ.

ಕುಂಭ: ನೀವು ಇಷ್ಟು ದಿನ ಮಾಡಿದ್ದ ಯೋಜನೆಗಳು ಫಲಕೊಡುವ ಸಮಯವಿದು. ನಿಮ್ಮ ತಾಳ್ಮೆಯ ನಡೆಯೇ ನಿಮಗೆ ವರದಾನವಾಗಲಿದೆ. ಆದರೆ ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಿ ಚಿಂತೆಯಾಗಬಹುದು. ಇನ್ನೊಬ್ಬರ ಕಷ್ಟಕ್ಕೆ ನೆರವಾಗಲಿದ್ದೀರಿ.

ಮೀನ: ಕೌಟುಂಬಿಕವಾಗಿ ನಿಮ್ಮ ಜವಾಬ್ಧಾರಿಗಳು ಹೆಚ್ಚಲಿವೆ. ಕುಟುಂಬದ ಸದಸ್ಯರ ಸಹಮತದೊಂದಿಗೆ ನಿರ್ಧಾರ ತೆಗೆದುಕೊಳ್ಳಿ. ಹಿರಿಯರಿಗೆ ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಾಡಬಹುದು. ಹಾಗಿದ್ದರೂ ಚಿಂತೆ ಬೇಕಾಗಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಮಕರ ರಾಶಿಯವರ ದೋಷ ಪರಿಹಾರವಾಗಲು ಅಕ್ಷಯ ತೃತೀಯ ದಿನದಂದು ಇದನ್ನು ದಾನ ಮಾಡಿ