Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 5 ಮೇ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ನಿರ್ಧಾರ ಕೈಗೊಳ್ಳುವಾಗ ಗೊಂದಲ ಕಾಡಲಿದೆ. ಮೇಲಧಿಕಾರಿಗಳ ಸಲಹೆ ಸೂಚನೆ ಪಾಲಿಸಬೇಕಾಗುತ್ತದೆ. ಆರ್ಥಿಕವಾಗಿ ಅಭಿವೃದ್ಧಿ ತೋರಿಬರಲಿದೆ. ಆದರೆ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಕಾರ್ಯಕ್ಷೇತ್ರದಲ್ಲಿ ಪ್ರಯತ್ನಕ್ಕೆ ಒತ್ತು ಕೊಡಿ.

ವೃಷಭ: ಪ್ರತಿಫಲಾಪೇಕ್ಷೆಯಿಲ್ಲದೇ ಕೆಲಸ ಮಾಡುವುದರಿಂದ ನಿಮಗೆ ಒಳಿತಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿ ಮೂಡಲಿದೆ. ಧನಾಗಮನದಿಂದ ಕಾರ್ಯಸಿದ್ಧಿಯಾಗಲಿದೆ.

ಮಿಥುನ: ಆದಾಯ ಗಳಿಸಲು ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಲಹೆಗಳು ಉಪಯೋಗಕ್ಕೆ ಬರುವುದು. ಪಾಲು ಬಂಡವಾಳ ಹೂಡಿಕೆಯಲ್ಲಿ ಲಾಭ ಕಂಡುಬರುವುದು. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಕಾರ್ಯತೃಪ್ತಿ, ಸಮಾಧಾನ ಕಂಡುಬರಲಿದೆ. ಬಹಳ ದಿನಗಳ ನಂತರ ಮಿತ್ರರ, ಮನಸ್ಸಿಗೆ ಇಷ್ಟವಾದವರ ಭೇಟಿಯಾದ ಸಂತೋಷ ಸಿಗಲಿದೆ. ಆದರೆ ಮಹಿಳೆಯರಿಂದ ಅಪವಾದ ಕೇಳಿಬಂದೀತು, ಎಚ್ಚರಿಕೆ ಅಗತ್ಯ.

ಸಿಂಹ: ಹಿರಿಯರ ಸಲಹೆ, ಸೂಚನೆಗಳು ಉಪಯೋಗಕ್ಕೆ ಬರಲಿದ್ದು, ನೀವು ಅಂದುಕೊಂಡ ಕೆಲಸಗಳನ್ನು ಸುಗಮವಾಗಿ ನೆರವೇರಿಸುವಿರಿ. ಧನಾಗಮನ ಉತ್ತಮವಾಗಿದ್ದರೂ ಉಡಾಫೆಯಿಂದ ಖರ್ಚು ಮಾಡಬೇಡಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

 
ಕನ್ಯಾ: ಆರ್ಥಿಕವಾಗಿ ಅಡಚಣೆಗಳುಂಟಾಗಲಿದ್ದು, ಸಾಲ ಪಾವತಿ ಚಿಂತೆ ಕಾಡಲಿದೆ. ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳಿಂದ ಮನಸ್ಸು ಜರ್ಜರಿತವಾಗುವುದು. ಕುಲದೇವರ ಪ್ರಾರ್ಥನೆ ಮಾಡಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ತುಲಾ: ಕಾರ್ಮಿಕ ವರ್ಗದವರಿಗೆ ಆದಾಯ ಗಳಿಕೆಯ  ಮೂಲ ಸಿಗಲಿದೆ. ಕೆಳ ಹಂತದ ನೌಕರರಿಗೆ ಉದ್ಯೋಗ ಬದಲಾವಣೆಯ ಅನಿವಾರ್ಯತೆ ಎದುರಾಗಲಿದೆ. ಕೃಷಿಕರಿಗೆ ತಮ್ಮ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಮಹಿಳೆಯರಿಗೆ ಸದ್ಯದಲ್ಲೇ ಚಿನ್ನಾಭರಣ ಖರೀದಿ ಯೋಗವಿದೆ. ಹಿರಿಯರಿಂದ ಉಡುಗೊರೆ ನಿರೀಕ್ಷಿಸಬಹುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಿಗಲಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ದೂರ ಸಂಚಾರ ರದ್ದಾಗಲಿದೆ.

ಧನು: ಆದಾಯವಿದ್ದಷ್ಟೇ ಖರ್ಚೂ ಇರುವುದರಿಂದ ಕೂಡಿಡಲು ಹಣವಿಲ್ಲದ ಪರಿಸ್ಥಿತಿ ಎದುರಾದೀತು. ಸಂಸಾರ ಸುಖಕ್ಕೆ ಕೊರತೆಯಿರದು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ವ್ಯಾಪಾರಿಗಳಿಗೆ ಹಿತಶತ್ರುಗಳ ವಂಚನೆ ಅರಿವಿಗೆ ಬರುವುದು. ಎಚ್ಚರಿಕೆ ಅಗತ್ಯ.

ಮಕರ: ಅನಿರೀಕ್ಷಿತವಾಗಿ ದೇವತಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಯೋಗವಿರಲಿದೆ. ಸಾಲ ಕೊಡುವ ಮೊದಲು ಸಾಕಷ್ಟು ಯೋಚನೆ ಮಾಡಿ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಗೃಹ ಬಳಕೆ ವಸ್ತುಗಳ ಖರೀದಿ ಮಾಡಲಿದ್ದೀರಿ.

ಕುಂಭ: ಹಿರಿಯರ ಸಲಹೆ ಸೂಚನೆಗೆ ಎದುರಾಡದೇ ಆದಷ್ಟು ಪಾಲನೆ ಮಾಡಿ. ಆಸ್ತಿ ವಿಚಾರವಾಗಿ ದಾಯಾದಿ ಕಲಹಗಳು ಕಂಡುಬರಲಿದೆ. ತಾಳ್ಮೆಯಿಂದ ವರ್ತಿಸಿ. ವ್ಯಾಪಾರ, ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲು ಕೆಲವು ದಿನ ಕಾಯುವುದು ಉತ್ತಮ.

ಮೀನ: ದೈವಾನುಗ್ರಹದಿಂದ ಇಂದು ನೀವು ಕೈ ಹಿಡಿಯುವ ಕೆಲಸಗಳು ಯಶಸ್ವಿಯಾಗಲಿವೆ. ಮಕ್ಕಳ ಮನಸ್ಸು ಅರಿತು ನಡೆಯಿರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಗೃಹ ನಿರ್ಮಾಣ ಕಾರ್ಯಗಳಿಗೆ ಕೈ ಹಾಕಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಧನಾಕರ್ಷಣ ಶಕ್ತಿ ಪಡೆಯಲು ಹೀಗೆ ಮಾಡಿ