Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 6 ಮೇ 2020 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬದುಕು ಪಾಠ ಕಲಿಸುತ್ತಿದೆ ಎಂಬ ಭಾವನೆ ಬರಲಿದೆ. ಮಾನಸಿಕವಾಗಿ ಗೊಂದಲ ಕಾಡಲಿದ್ದು, ನಿರ್ಧಾರ ಕೈಗೊಳ್ಳುವಾಗ ಸಂಗಾತಿಯ ಸಲಹೆ ಪಡೆಯುವುದು ಉತ್ತಮ. ಅನಾರೋಗ್ಯ ಭಯ ಕಾಡುವುದು. ಕುಲದೇವರ ಪ್ರಾರ್ಥನೆ ಮಾಡಿ.

ವೃಷಭ: ವೃತ್ತಿರಂಗದಲ್ಲಿ ಮುನ್ನಡೆಗೆ ಅವಕಾಶ ದೊರೆಯಲಿದೆ. ನಿಮ್ಮ ಏಳಿಗೆಗೆ ಮೇಲಧಿಕಾರಿಗಳ ಸಹಕಾರ ಸಿಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಸಾಂಸಾರಿಕವಾಗಿ ಚಿಂತೆ, ಮನೋವ್ಯಾಕುಲಕ್ಕೆ ಕಾರಣವಾದ ಘಟನೆಗಳು ನಡೆಯಲಿವೆ. ಶಾಂತಿ, ಸಮಾಧಾನ ಅಗತ್ಯ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯಸಾಧನೆಗೆ ಅಡಚಣೆಗಳು ಕಂಡುಬರಲಿವೆ. ವ್ಯಾಪಾರ, ವ್ಯವಹಾರದಲ್ಲಿ ಅಭಿವೃದ್ಧಿ ತೋರಿಬರಲಿದೆ.

ಕರ್ಕಟಕ: ಮಹಿಳೆಯರಿಗೆ ಮನೋಭಿಲಾಶೆಗಳು ಈಡೇರಲಿವೆ. ಸಾಂಸಾರಿಕವಾಗಿ ಶಾಂತಿ-ಸಮಾಧಾನ ಕಂಡುಬರುವುದು. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲಿದ್ದೀರಿ. ಹಳೆಯ ಮಿತ್ರನ ಭೇಟಿಯಾದ ಸಂತೋಷ ಸಿಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಸಿಂಹ: ತಾಳ್ಮೆ, ಸಮಾಧಾನದಿಂದ ಮುಂದುವರಿದಲ್ಲಿ ಕೈ ಹಿಡಿದ ಕಾರ್ಯಗಳಲ್ಲಿ ಯಶಸ್ಸು ಸಿಗುವುದು. ರಾಜಕೀಯ ರಂಗದಲ್ಲಿರುವವರಿಗೆ ಜವಾಬ್ಧಾರಿ ಹೆಚ್ಚಲಿದೆ. ನಿಮ್ಮ ಮಾತಿನಿಂದ ಇತರರ ಅಸಮಾಧಾನಕ್ಕೆ ಗುರಿಯಾಗುವಿರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

 
ಕನ್ಯಾ: ನಿರುದ್ಯೋಗಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗುವುದು. ಉತ್ತಮ ಅವಕಾಶಗಳು ಬಂದಾಗ ಜಾಣ್ಮೆಯಿಂದ ಬಳಸಿಕೊಳ್ಳಬೇಕು. ಅಧಿಕಾರಿ ವರ್ಗದವರಿಗೆ ಕಾರ್ಯ ಸಾಧನೆಗೆ ಅನುಕೂಲವಾಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ದೊರೆಯಲಿದೆ.

ತುಲಾ: ಕೂಡಿಟ್ಟ ಹಣ ಖರ್ಚಾಗುವುದರಿಂದ ಭವಿಷ್ಯದ ಬಗ್ಗೆ ಆತಂಕ ಮೂಡಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ. ಬಂಧು ಮಿತ್ರರ ಸಹಕಾರ ಸಿಗಲಿದೆ. ವಿದ್ಯಾರ್ಥಿಗಳಿಗೆ ಸಾಧನೆಗೆ ಪೂರಕವಾದ ವಾತಾವರಣ ಸಿಗಲಿದೆ.

ವೃಶ್ಚಿಕ: ಕಚೇರಿ ಕೆಲಸಗಳಲ್ಲಿ ಬಿಡುವಿಲ್ಲದೇ ತೊಡಗಿಸಿಕೊಳ್ಳಬೇಕಾಗುವುದರಿಂದ ದೇಹಾಯಾಸವಾಗಲಿದೆ. ಹಿರಿಯರ ಸಲಹೆಗಳಿಗೆ ಕಿವಿಗೊಡುವುದು ಉತ್ತಮ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಕಿರು ಓಡಾಟ ಸಾಧ‍್ಯತೆ.

ಧನು: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಅನಿರೀಕ್ಷಿತವಾಗಿ ಸಂತಸದ ವಾರ್ತೆಯೊಂದನ್ನು ಕೇಳಲಿದ್ದೀರಿ. ಉತ್ತಮ ಚಿಂತನೆಗಳು ಮೂಡಿಬರಲಿದ್ದು, ಹೊಸ ಕೆಲಸಗಳತ್ತ ಗಮನಹರಿಸಲಿದ್ದೀರಿ. ವ್ಯವಹಾರದಲ್ಲಿ ಮುನ್ನಡೆಯಿರಲಿದೆ.

ಮಕರ: ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಆಕಸ್ಮಿಕವಾಗಿ ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿಕೊಳ್ಳಲಿದ್ದೀರಿ. ಇನ್ನೊಬ್ಬರಿಗೆ ಸಹಾಯ ಮಾಡುವ ಮೊದಲೂ ನೂರು ಬಾರಿ ಯೋಚಿಸಬೇಕಾದ ಸಮಯವಿದು. ಎಚ್ಚರಿಕೆಯಿಂದಿರಿ.

ಕುಂಭ: ಕಾರ್ಯರಂಗದಲ್ಲಿ ನಿಮ್ಮ ಸಲಹೆಗಳಿಗೆ ಮನ್ನಣೆ ಸಿಗಲಿದೆ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಂದ ಕಾರ್ಯ ಸಾಧನೆಯಾಗುವುದು. ಮಹಿಳೆಯರಿಗೆ ಹೊಸ ವಸ್ತ್ರಾಭರಣ ಖರೀದಿ ಯೋಗವಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ಮೀನ: ಪ್ರಿಯ ಜನರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಧಾರ್ಮಿಕ ಶ್ರದ್ಧೆ ಹೆಚ್ಚುವುದು. ಚಿಂತಿತ ಕೆಲಸಗಳನ್ನು ಕಾರ್ಯರೂಪಕ್ಕೆ ತರುವಾಗ ಅಡೆತಡೆಗಳು ಸಾಮಾನ್ಯ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾಲಕ್ಷ್ಮೀಯ ಅನುಗ್ರಹ ಪಡೆಯಲು ಮನೆಯ ಮುಖ್ಯದ್ವಾರಕ್ಕೆ ಈ ಹಕ್ಕಿಯ ಗರಿಗಳನ್ನು ಕಟ್ಟಿ