Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 7 ಮೇ 2020 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ರಂಗದಲ್ಲಿ ನಿಮ್ಮ ಸಲಹೆ ಸೂಚನೆಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಅನಿರೀಕ್ಷಿತವಾಗಿ ಧನಾಗಮನವಾಗಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ವೃಷಭ: ರಾಜಕೀಯ ವರ್ಗದವರಿಗೆ ತಮ್ಮ ಕ್ಷೇತ್ರದಲ್ಲಿ ಕಾರ್ಯಸಾಧನೆಗೆ ಅಡ್ಡಿ ಆತಂಗಳು ಎದುರಾಗಬಹುದು. ಆದರೆ ಚಿಂತೆ ಬೇಡ. ಉದ್ಯೋಗ ರಂಗದಲ್ಲಿ ಮುನ್ನಡೆ ತೋರಿಬರಲಿದೆ. ಸರಕಾರಿ ಕೆಲಸ ಕಾರ್ಯಗಳಲ್ಲಿ ಜಯ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕಾದಿದೆ.

ಮಿಥುನ: ಧಾರ್ಮಿಕ ಕ್ಷೇತ್ರದ ಸಂದರ್ಶನ ಯೋಗವಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಹಿರಿಯರ ಸಲಹೆಯನ್ನು ಪಾಲಿಸದೇ ಇದ್ದರೆ ನಿಮಗೆ ತೊಂದರೆಯಾಗಬಹುದು. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಿಗಲಿದೆ.

ಕರ್ಕಟಕ: ವೃತ್ತಿರಂಗದಲ್ಲಿ ಅನವಶ್ಯಕ ವಿಚಾರಗಳಿಗೆ ಕಿರಿ ಕಿರಿ ಉಂಟಾಗಲಿದೆ. ದಿನದಂತ್ಯದಲ್ಲಿ ಕಿರು ಸಂಚಾರ ಮಾಡಬೇಕಾಗುತ್ತದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಯೋಗವಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.

ಸಿಂಹ: ಕಾರ್ಮಿಕರಿಗೆ ಶುಭ ವಾರ್ತೆ ಸಿಗಲಿದೆ. ಉದ್ಯೋಗದಲ್ಲಿ ನಿಧಾನವಾಗಿ ಚೇತರಿಕೆ ಕಂಡುಬರಲಿದ್ದು, ಹಂತ ಹಂತವಾಗಿ ಅಭಿವೃದ್ಧಿಯಾಗಲಿದೆ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ.

 
ಕನ್ಯಾ: ನಿರುದ್ಯೋಗಿಗಳಿಗೆ ಉದ್ಯೋಗ ಬೇಟೆಗೆ ನಾನಾ ಕಾರ್ಯಗಳು ತೋರಿಬರಲಿವೆ. ಅಗತ್ಯ ಕೆಲಸಗಳನ್ನು ಪೂರ್ತಿ ಮಾಡಲು ಅಡೆತಡೆಗಳು ತೋರಿಬಂದೀತು. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ. ರೈತ ವರ್ಗದವರಿಗೆ ಚೇತರಿಕೆ ಸಿಗಲಿದೆ.

ತುಲಾ: ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿ ಮಾಡಬೇಕಿದೆ. ಸಂಗಾತಿಯ ಬಹುದಿನಗಳ ಕನಸು ನನಸು ಮಾಡಲಿದ್ದೀರಿ. ಪ್ರೀತಿ ಪಾತ್ರರ ಮೆಚ್ಚುಗೆ ಗಳಿಸಲಿದ್ದೀರಿ. ಆದರೆ ವೃತ್ತಿರಂಗದಲ್ಲಿ ಕಾರ್ಯದೊತ್ತಡದಿಂದ ಚಿಂತೆಯಾಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ.

ವೃಶ್ಚಿಕ: ವೃತ್ತಿರಂಗದಲ್ಲಿ ಅನಿವಾರ್ಯವಾಗಿ ಸಮಸ್ಯೆಗಳನ್ನು ನಿಭಾಯಿಸುವ ಹೊಣೆಗಾರಿಕೆ ವಹಿಸಬೇಕಾಗುತ್ತದೆ. ಮಹಿಳೆಯರಿಗೆ ಸದ್ಯದಲ್ಲೇ ಚಿನ್ನಾಭರಣ ಖರೀದಿ ಯೋಗವಿದೆ. ಸಾಂಸಾರಿಕವಾಗಿ ಹೊಂದಾಣಿಕೆ, ತಾಳ್ಮೆಯಿಂದ ನಡೆದುಕೊಳ್ಳುವುದು ಮುಖ್ಯ.

ಧನು: ಕೌಟುಂಬಿಕವಾಗಿ ಜವಾಬ್ಧಾರಿಯುತವಾಗಿ ನಡೆದುಕೊಳ್ಳಬೇಕಾಗಿದೆ. ಸಹೋದರರ ನೆರವಿಗೆ ಧಾವಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಕಂಡುಕೊಳ್ಳಲಿದ್ದೀರಿ. ಮಿತ್ರರ ಪ್ರೀತಿಗೆ ಪಾತ್ರರಾಗಲಿದ್ದೀರಿ.

ಮಕರ: ಎಲ್ಲಾ ಇದ್ದೂ ಏನೋ ಕಳೆದುಕೊಂಡು ಮಾನಸಿಕ ಖಿನ್ನತೆ ಕಾಡಲಿದೆ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ಹಿತ ಶತ್ರುಗಳ ವಂಚನೆಗಳು ಬೆಳಕಿಗೆ ಬರಲಿವೆ. ವೃತ್ತಿರಂಗದಲ್ಲಿ ನಿಮ್ಮ ಸಮಯೋಚಿತ ನಿರ್ಧಾರ ಉಪಯೋಗಕ್ಕೆ ಬರುವುದು.

ಕುಂಭ: ವಿವಾಹಾದಿ ಶುಭ ಕಾರ್ಯಗಳನ್ನು ನಡೆಸಲು ಸಿದ್ಧತೆ ನಡೆಸಲಿದ್ದೀರಿ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಕಿರು ಓಡಾಟ ನಡೆಸಲಿದ್ದೀರಿ.

ಮೀನ: ಉದ್ಯೋಗ ರಂಗದಲ್ಲಿ ಮುನ್ನಡೆಯಿದ್ದರೂ ನಿಮ್ಮ ಏಳಿಗೆಗೆ ಸಹೋದ್ಯೋಗಿಗಳಿಂದಲೇ ಅಡ್ಡಿ ಆತಂಕಗಳು ಎದುರಾಗಬಹುದು. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ದೇಹ ಹೈರಾಣಾಗಲಿದೆ. ಆದಾಯಕ್ಕೆ ಕೊರತೆಯಿರದು. ಸಾಲಗಳು ಮರುಪಾವತಿಯಾಗಲಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ನೀವು ಅಂದುಕೊಂಡ ಕೆಲಸ ನಿರ್ವಿಘ್ನವಾಗಿ ನೆರವೇರಲು ಕನ್ನಡಿ ಮೇಲೆ ಹೀಗೆ ಬರೆದು ಹೋಗಿ