Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 8 ಮೇ 2020 (08:58 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ರಂಗದಲ್ಲಿ ನಿಮ್ಮ ಕೆಲಸ ಕಾರ್ಯಗಳಿಗೆ ಅಡ್ಡಿ ಆತಂಕಗಳು ಎದುರಾಗಬಹುದು. ಆರ್ಥಿಕವಾಗಿ ಹಣಕಾಸಿನ ಹರಿವು ಕುಂಠಿತವಾಗಿ ಚಿಂತೆಗೆ ಕಾರಣವಾಗಲಿದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಸಿಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಹೊಸ ಕೆಲಸ ಕಾರ್ಯಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ನೂತನ ಮನೆ, ಭೂಮಿ ಖರೀದಿಗೆ ಚಿಂತನೆ ನಡೆಸಲಿದ್ದೀರಿ.

ಮಿಥುನ: ವಾಹನ ಸವಾರರಿಗೆ ಅಪಘಾತದ ಭಯವಿದ್ದು, ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಿಗಲಿದೆ. ವೃತ್ತಿರಂಗದಲ್ಲಿ ನಿಮ್ಮ ಸಲಹೆ ಸೂಚನೆಗಳಿಗೆ ಮನ್ನಣೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.

ಕರ್ಕಟಕ: ಮನಸ್ಸಿಗೆ ಇಷ್ಟವಾದ ಕೆಲಸಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದರಿಂದ ನೆಮ್ಮದಿ ಸಿಗಲಿದೆ. ಸಂಗಾತಿಯೊಂದಿಗೆ ಅನಗತ್ಯ ವಾದ ವಿವಾದದಿಂದ ಕುಟುಂಬದಲ್ಲಿ ಅಸಮಾಧಾನದ ವಾತಾವರಣವಿರುವುದು. ಹಿರಿಯರಿಗೆ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಅಗತ್ಯವಿದೆ.

ಸಿಂಹ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ನೂತನ ದಂಪತಿಗೆ ಸುಮಧುರ ಕ್ಷಣ ಕಳೆಯುವ ಯೋಗ. ಪ್ರೇಮಿಗಳಿಗೆ ಹಿರಿಯರಿಂದ ವಿರೋಧ ವ್ಯಕ್ತವಾದೀತು. ವ್ಯವಹಾರದಲ್ಲಿ ಯಾರನ್ನೂ ಅತಿಯಾಗಿ ನಂಬಲು ಹೋಗುವುದು ಬೇಡ.

 
ಕನ್ಯಾ: ಮಹಿಳೆಯರಿಗೆ ಬಿಡುವಿಲ್ಲದ ಗೃಹ ಕೃತ್ಯಗಳಿಂದ ಮನಸ್ಸು, ದೇಹ ಹೈರಾಣಾಗಬಹುದು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವ ಅಗತ್ಯವಿದೆ. ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಏರ್ಪಾಟು ಮಾಡಲಿದ್ದೀರಿ. ಉದ್ಯೋಗದಲ್ಲಿ ಮೇಲಧಿಕಾರಿಗಳ ಸಲಹೆ ಸೂಚನೆ ಪಾಲಿಸಬೇಕಾದೀತು.

ತುಲಾ: ಉದ್ಯೋಗ ರಂಗದಲ್ಲಿ ಹೆಚ್ಚಿನ ಕಾರ್ಯಭಾರದ ಹೊರೆ ಬೀಳಲಿದೆ. ಸಾಂಸಾರಿಕವಾಗಿ ಸ್ಥಿತಿ ಗತಿಗಳು ಉತ್ತಮವಾಗಲಿದೆ. ಪತ್ನಿಯ ಸಹಕಾರ ಸಿಗಲಿದೆ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ನಿಮ್ಮ ಜವಾಬ್ಧಾರಿಯುತ ನಡೆ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಲಿದೆ. ಕಷ್ಟದಲ್ಲಿರುವ ಮಿತ್ರರಿಗೆ ಸಹಾಯ ಮಾಡಲಿದ್ದೀರಿ. ಕೂದಲೆಳೆಯಲ್ಲಿ ಅನಾಹುತ ತಪ್ಪಿ ಹೋದ ಅನುಭವವಾಗಲಿದೆ. ಪ್ರಿಯ ಜನರ ಭೇಟಿ ಮನಸ್ಸಿಗೆ ಸಂತಸ ನೀಡಲಿದೆ.

ಧನು: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬರಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ಇಷ್ಟ ಭೋಜನ ಮಾಡುವ ಯೋಗವಿದೆ.

ಮಕರ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಧಾರ್ಮಿಕವಾಗಿ ಭಕ್ತಿಭಾವ ಹೆಚ್ಚಲಿದೆ. ಅವಿವಾಹಿತರಿಗೆ ಶೀಘ್ರವೇ ಯೋಗ್ಯ ಸಂಬಂಧ ಕೂಡಿಬರುವುದು. ಅನಿರೀಕ್ಷಿತವಾಗಿ ಮನೆಗೆ ಅತಿಥಿಗಳ ಆಗಮನವಾಗಲಿದೆ.

ಕುಂಭ: ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟುಮಾಡಬೇಡಿ. ನಿಮ್ಮ ಮಾತು, ವರ್ತನೆ ಮೇಲೆ ನಿಗಾ ಇರಲಿ. ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆ ಅಗತ್ಯ.

ಮೀನ: ಎಷ್ಟೇ ಪ್ರಯತ್ನಪಟ್ಟರೂ ಪರಿಶ್ರಮಕ್ಕೆ ತಕ್ಕ ಫಲ ಸಿಗುತ್ತಿಲ್ಲ ಎಂಬ ನಿರಾಸೆ ಕಾಡಲಿದೆ. ಬಂಧು ಜನರ ಕೊಂಕು ಮಾತುಗಳು ಮನಸ್ಸಿಗೆ ನೋವುಂಟುಮಾಡಬಹುದು. ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ. ಮಹಿಳೆಯರಿಗೆ ಆಕಸ್ಮಿಕವಾಗಿ ಧನಲಾಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಣಕಾಸಿನ ಸಮಸ್ಯೆ ದೂರವಾಗಲು ಮಧ್ಯಾಹ್ನದ ವೇಳೆ ಕಾಗೆಗಳಿಗೆ ಇದನ್ನ ಇಡಿ