Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 10 ಮೇ 2020 (09:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ನಿರಾಸೆ ಕಾಡಲಿದ್ದು, ಸಂಗಾತಿಯ ಮೇಲೆ ಅಸಮಾಧಾನ ಸ್ಪೋಟಗೊಳ್ಳಲಿದೆ. ಯಾವುದೂ ನೀವು ಅಂದುಕೊಂಡಂತೆ ನಡೆಯುತ್ತಿಲ್ಲ ಎಂಬ ಬೇಸರ ಕಾಡುವುದು. ತಾಳ್ಮೆ ಅಗತ್ಯ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಗೃಹ ಬಳಕೆ ವಸ್ತುಗಳ ಖರೀದಿಗಾಗಿ ಹೆಚ್ಚಿನ ಧನವ್ಯಯವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹೊಸ ಬದುಕಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಭವಿಷ್ಯದ ಚಿಂತೆ ಕಾಡಬಹುದು.

ಮಿಥುನ: ಪ್ರೇಮಿಗಳ ಜೀವನದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ದಿನವಿದು. ಉದ್ಯೋಗ ರಂಗದಲ್ಲಿ ಬಿಡುವಿಲ್ಲದ ದುಡಿಮೆಯಿಂದ ದೇಹ ಹೈರಾಣಾಗಬಹುದು. ಆದರೆ ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿ ಸುಧಾರಣೆಯಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ನಿಮ್ಮ ಕಷ್ಟದ ಸಮಯದಲ್ಲಿ ಗೆಳೆಯರ ಸಹಕಾರ ಸಿಗಲಿದೆ. ಆಪ್ತರೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯಲಿದ್ದೀರಿ. ವೃತ್ತಿ ಬದಲಾವಣೆ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.

ಸಿಂಹ: ಗೆಳಯರಿಂದ ಸೂಕ್ತ ಸಮಯದಲ್ಲಿ ಸಲಹೆ ಸೂಚನೆಗಳು ಸಿಕ್ಕಿ ಕಷ್ಟಗಳಿಂದ ಪಾರಾಗುವಿರಿ. ವೃತ್ತಿರಂಗದಲ್ಲಿ ಯಶಸ್ಸು ಸಿಗಲಿದೆ. ನಿಮ್ಮ ಕೆಲಸಗಳು ಸಮಾಜ ಪರವಾಗಲಿದೆ. ಹಣಕಾಸಿಗೆ ತೊಂದರೆಯಾದರೂ ಮುಂದೆ ಪರಿಸ್ಥಿತಿ ಸುಧಾರಿಸಬಹುದು.

 
ಕನ್ಯಾ: ಬಹುದಿನಗಳ ಕನಸು ನನಸು ಮಾಡಿಕೊಳ್ಳಲಿದ್ದೀರಿ. ಸಂಗಾತಿಯ ಪ್ರೀತಿಯ ಮಾತುಗಳು ಮನಸ್ಸಿಗೆ ಸಾಂತ್ವನ ನೀಡಲಿದೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಖರ್ಚು ವೆಚ್ಚಗಳನ್ನು ನಿಭಾಯಿಸಲು ಕಷ್ಟವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಮೈಮರೆವಿನಿಂದ ಕೆಲವೊಂದು ತಪ್ಪುಗಳಾಗಬಹುದು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಹಣಕಾಸಿನ ಬಗ್ಗೆ ಹೆಚ್ಚಿನ ಲೆಕ್ಕಾಚಾರದ ಹೆಜ್ಜೆಯಿಡುವುದು ಮುಖ್ಯ.

ವೃಶ್ಚಿಕ: ಅವಿವಾಹಿತ ಕನ್ಯಾಮಣಿಗಳಿಗೆ ಶೀಘ್ರದಲ್ಲೇ ಯೋಗ್ಯ ಸಂಬಂಧಗಳು ಕೂಡಿಬರಲಿವೆ. ಹೊಸ ಮಿತ್ರರ ಸಂಪಾದನೆ ಮಾಡಲಿದ್ದೀರಿ. ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಧನು: ಇಂದಿನ ದಿನ ದೈವಾನುಗ್ರಹದಿಂದ ನಿಮಗೆ ಶುಭವಾಗಲಿದ್ದು, ಅಂದುಕೊಂಡ ಕೆಲಸ ಕಾರ್ಯಗಳನ್ನು ಸುಗಮವಾಗಿ ನೆರವೇರಿಸಲಿದ್ದೀರಿ. ಅನಿರೀಕ್ಷಿತವಾಗಿ ಮನೆಗೆ ಅತಿಥಿಗಳ ಆಗಮನವಾಗಲಿದ್ದು, ಸಂತಸದ ವಾತಾವರಣವಿರಲಿದೆ. ಚಿಂತೆ ಬೇಡ.

ಮಕರ: ಅನಗತ್ಯ ಯೋಚನೆಗಳಿಗೆ ಕಡಿವಾಣ ಹಾಕುವುದು ಒಳಿತು. ಮನೋಕಾಮನೆಗಳನ್ನು ಪೂರೈಸಲು ಖರ್ಚು ವೆಚ್ಚಗಳಾಗಬಹುದು. ಐಷಾರಾಮಿ ಜೀವನದ ಲಾಲಸೆ ಕಾಡಲಿದೆ. ಆದರೆ ಇದ್ದುದರಲ್ಲೇ ತೃಪ್ತಿ ಪಡಬೇಕಾದ ಅನಿವಾರ್ಯತೆಯ ಕಾಲ ಇದಾಗಿದೆ.

ಕುಂಭ: ತೀವ್ರ ನಿರಾಶೆ ಕಾಡಲಿದ್ದು, ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲು ನಿರುತ್ಸಾಹ ಕಾಡಲಿದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡುವುದು ಮುಖ್ಯ. ಹೆಣ್ಣು ಮಕ್ಕಳಿಗೆ ತವರಿನ ಚಿಂತೆಯಾಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕಾಗುತ್ತದೆ.

ಮೀನ: ದಾಯಾದಿ ಕಲಹಗಳು ನಿವಾರಣೆಯಾಗಲಿದ್ದು, ಹಿರಿಯರ ಸಲಹೆಗಳನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಆದರೆ ವೃತ್ತಿರಂಗದಲ್ಲಿ ವಿಳಂಬ ಗತಿಯಲ್ಲಿ ಕೆಲಸಗಳು ಸಾಗಲಿದ್ದು, ಅಸಹನೆಯುಂಟಾಗುವುದು. ಹಿತಶತ್ರುಗಳ ಬಗ್ಗೆ ಎಚ್ಚರ. ಮನೋನಿಗ್ರಹ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

ಮುಂದಿನ ಸುದ್ದಿ
Show comments