Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 11 ಮೇ 2020 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಅನಿರೀಕ್ಷಿತ ಬೆಳವಣಿಗೆಗಳುಂಟಾಗಲಿವೆ. ನಿರುದ್ಯೋಗಿಗಳಿಗೆ ಪಾಲಿಗೆ ಬಂದ  ಅವಕಾಶ ಸ್ವಲ್ಪದರಲ್ಲೇ ಕೈ ತಪ್ಪಿ ನಿರಾಸೆಯಾಗಬಹುದು. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಸಾಂಸಾರಿಕವಾಗಿ ಖರ್ಚು ವೆಚ್ಚಗಳು ಚಿಂತೆಗೆ ಕಾರಣವಾಗಲಿದೆ.

ವೃಷಭ: ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡುಬರಲಿದೆ. ನಿಮ್ಮ ವ್ಯಕ್ತಿತ್ವದಿಂದಲೇ ಇತರರ ಪ್ರೀತಿ ಗಳಿಸಲಿದ್ದೀರಿ. ಮನೋಭಿಲಾಷೆಗಳು ಈಡೇರಲಿವೆ. ವೃತ್ತಿರಂಗದಲ್ಲಿ ನಿಧಾನವಾಗಿಯಾದರೂ ಅಭಿವೃದ್ಧಿ ಕಂಡುಬರುವುದು. ಚಿಂತೆ ಬೇಡ.

ಮಿಥುನ: ನಿಮ್ಮ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ಕೆಲಸ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಹೊಸ ದಾರಿಗಳು ಗೋಚರವಾಗಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿ. ಹಿರಿಯರ ಮಾತಿಗೆ ಬೆಲೆಕೊಡಿ.

ಕರ್ಕಟಕ: ಉದ್ಯೋಗ ರಂಗದಲ್ಲಿ ನಿಮ್ಮ ಚಿಂತನೆಗಳಿಗೆ ಬೆಲೆ ಸಿಗಲಿದೆ. ಪ್ರೇಮಿಗಳಿಗೆ ಶುಭ ದಿನವಾಗಿದ್ದು, ಮನೆಯವರಿಂದ ಒಪ್ಪಿಗೆ ಸಿಗಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ಹೊಸ ಮಿತ್ರರ ಸಂಪಾದನೆ ಮಾಡಲಿದ್ದೀರಿ.

ಸಿಂಹ: ದೈವಾನುಕೂಲ ನಿಮ್ಮ ಮೇಲಿದ್ದು ಅಂದುಕೊಂಡ ಕೆಲಸಗಳನ್ನು ಸುಗಮವಾಗಿ ನೆರವೇರಿಸಲಿದ್ದೀರಿ. ಉದಾಸೀನತೆ ಪ್ರವೃತ್ತಿ ಬಿಟ್ಟು ಕೆಲಸ ಮಾಡಿದರೆ ಯಶಸ್ಸು ಸಿಗಲಿದೆ. ಇತರರ ಸಲಹೆಗಳನ್ನು ಒಪ್ಪುವ ಮೊದಲು ಪರಾಮರ್ಶಿಸುವುದು ಉತ್ತಮ.

 
ಕನ್ಯಾ: ಉದ್ಯೋಗ ರಂಗದಲ್ಲಿ ಹೊಸ ಬದಲಾವಣೆ ಸಿದ್ಧರಾಗಬೇಕಾಗುತ್ತದೆ. ಮುಖ್ಯವಾಗಿ ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ನಡೆದುಕೊಳ್ಳಿ. ಆಪ್ತೇಷ್ಟರ ಜತೆ ಕಷ್ಟ ಹಂಚಿಕೊಳ್ಳುವುದರಿಂದ ಮನಸ್ಸು ಹಗುರವಾಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಮಾನಸಿಕವಾಗಿ ವಿಶ್ರಾಂತಿ ಬಯಸಿದರೂ ದೈಹಿಕವಾಗಿ ಶ್ರಮವಹಿಸಲೇ ಬೇಕಾಗುತ್ತದೆ. ಆದರೆ ದುಡಿಮೆಗೆ ತಕ್ಕ ಪ್ರತಿಫಲ ದೊರೆಯುವುದರಿಂದ ಸಂತಸವಾಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ವೃಶ್ಚಿಕ: ಅನಿರೀಕ್ಷಿತವಾಗಿ ನಡೆಯುವ ಕೆಲವೊಂದು ಘಟನೆಗಳು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಸಂಗಾತಿಯೊಂದಿಗೆ ಮನಸ್ಸಿನ ದುಃಖ ಹಂಚಿಕೊಂಡು ಹಗುರವಾಗಲಿದ್ದೀರಿ.

ಧನು: ಸಣ್ಣ ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಸುಧಾರಣೆ ಕಂಡುಬರುವುದು. ಬಂದ ಅವಕಾಶಗಳ ಸದ್ವಿನಿಯೋಗ ಮಾಡಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಹಿತಶತ್ರುಗಳ ವಂಚನೆ ಬೆಳಕಿಗೆ ಬರಲಿದೆ.

ಮಕರ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಮೇಲೆ ಹೆಚ್ಚಿನ ಕಾರ್ಯಭಾರವಿರಲಿದ್ದು, ಓಡಾಟ ನಡೆಸಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಆದರೆ ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಸೂಕ್ತ ಸಮಯವಲ್ಲ. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಕೌಟುಂಬಿಕವಾಗಿ ನೀವು ತೆಗೆದುಕೊಳ್ಳುವ ನಿರ್ಧಾರಗಳು ಭಿನ್ನಾಭಿಪ್ರಾಯ ಉಂಟುಮಾಡಬಹುದು. ತಾಳ್ಮೆ, ಸಂಯಮದಿಂದ ನಡೆದುಕೊಳ್ಳಬೇಕಾಗುತ್ತದೆ. ಅನವಶ್ಯಕ ವಿಚಾರಗಳಿಗೆ ಚಿಂತೆ ಮಾಡಬೇಡಿ. ವೃತ್ತಿರಂಗದಲ್ಲಿ ಪೂರಕ ವಾತಾವರಣವಿರಲಿದೆ.

ಮೀನ: ಆತುರದ ನಿರ್ಧಾರ ಕೈಗೊಂಡು ಕೈ ಸುಟ್ಟುಕೊಳ್ಳಬೇಡಿ. ಹಿರಿಯರ ಸಲಹೆಗಳನ್ನು ಪಾಲಿಸಿ. ಸಾಂಸಾರಿಕವಾಗಿ ಕಲಹ, ಭಿನ್ನಾಭಿಪ್ರಾಯಗಳು ದೂರವಾಗಲಿದೆ. ಆರ್ಥಿಕ ವಿಚಾರದಲ್ಲಿ ಸುಧಾರಣೆ ಕಂಡುಬರುವುದು. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶ ಸದ್ಯದಲ್ಲೇ ದೊರೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಾಳಿಗೆ ಅರಶಿನ ಕುಂಕುಮ ಹಚ್ಚುವಾಗ ಅಪ್ಪಿತಪ್ಪಿಯೂ ಈ ತಪ್ಪನ್ನು ಮಾಡಬೇಡಿ