Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 11 ಮೇ 2020 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಅನಿರೀಕ್ಷಿತ ಬೆಳವಣಿಗೆಗಳುಂಟಾಗಲಿವೆ. ನಿರುದ್ಯೋಗಿಗಳಿಗೆ ಪಾಲಿಗೆ ಬಂದ  ಅವಕಾಶ ಸ್ವಲ್ಪದರಲ್ಲೇ ಕೈ ತಪ್ಪಿ ನಿರಾಸೆಯಾಗಬಹುದು. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಸಾಂಸಾರಿಕವಾಗಿ ಖರ್ಚು ವೆಚ್ಚಗಳು ಚಿಂತೆಗೆ ಕಾರಣವಾಗಲಿದೆ.

ವೃಷಭ: ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡುಬರಲಿದೆ. ನಿಮ್ಮ ವ್ಯಕ್ತಿತ್ವದಿಂದಲೇ ಇತರರ ಪ್ರೀತಿ ಗಳಿಸಲಿದ್ದೀರಿ. ಮನೋಭಿಲಾಷೆಗಳು ಈಡೇರಲಿವೆ. ವೃತ್ತಿರಂಗದಲ್ಲಿ ನಿಧಾನವಾಗಿಯಾದರೂ ಅಭಿವೃದ್ಧಿ ಕಂಡುಬರುವುದು. ಚಿಂತೆ ಬೇಡ.

ಮಿಥುನ: ನಿಮ್ಮ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ಕೆಲಸ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಹೊಸ ದಾರಿಗಳು ಗೋಚರವಾಗಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿ. ಹಿರಿಯರ ಮಾತಿಗೆ ಬೆಲೆಕೊಡಿ.

ಕರ್ಕಟಕ: ಉದ್ಯೋಗ ರಂಗದಲ್ಲಿ ನಿಮ್ಮ ಚಿಂತನೆಗಳಿಗೆ ಬೆಲೆ ಸಿಗಲಿದೆ. ಪ್ರೇಮಿಗಳಿಗೆ ಶುಭ ದಿನವಾಗಿದ್ದು, ಮನೆಯವರಿಂದ ಒಪ್ಪಿಗೆ ಸಿಗಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ಹೊಸ ಮಿತ್ರರ ಸಂಪಾದನೆ ಮಾಡಲಿದ್ದೀರಿ.

ಸಿಂಹ: ದೈವಾನುಕೂಲ ನಿಮ್ಮ ಮೇಲಿದ್ದು ಅಂದುಕೊಂಡ ಕೆಲಸಗಳನ್ನು ಸುಗಮವಾಗಿ ನೆರವೇರಿಸಲಿದ್ದೀರಿ. ಉದಾಸೀನತೆ ಪ್ರವೃತ್ತಿ ಬಿಟ್ಟು ಕೆಲಸ ಮಾಡಿದರೆ ಯಶಸ್ಸು ಸಿಗಲಿದೆ. ಇತರರ ಸಲಹೆಗಳನ್ನು ಒಪ್ಪುವ ಮೊದಲು ಪರಾಮರ್ಶಿಸುವುದು ಉತ್ತಮ.

 
ಕನ್ಯಾ: ಉದ್ಯೋಗ ರಂಗದಲ್ಲಿ ಹೊಸ ಬದಲಾವಣೆ ಸಿದ್ಧರಾಗಬೇಕಾಗುತ್ತದೆ. ಮುಖ್ಯವಾಗಿ ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ನಡೆದುಕೊಳ್ಳಿ. ಆಪ್ತೇಷ್ಟರ ಜತೆ ಕಷ್ಟ ಹಂಚಿಕೊಳ್ಳುವುದರಿಂದ ಮನಸ್ಸು ಹಗುರವಾಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಮಾನಸಿಕವಾಗಿ ವಿಶ್ರಾಂತಿ ಬಯಸಿದರೂ ದೈಹಿಕವಾಗಿ ಶ್ರಮವಹಿಸಲೇ ಬೇಕಾಗುತ್ತದೆ. ಆದರೆ ದುಡಿಮೆಗೆ ತಕ್ಕ ಪ್ರತಿಫಲ ದೊರೆಯುವುದರಿಂದ ಸಂತಸವಾಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ವೃಶ್ಚಿಕ: ಅನಿರೀಕ್ಷಿತವಾಗಿ ನಡೆಯುವ ಕೆಲವೊಂದು ಘಟನೆಗಳು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಸಂಗಾತಿಯೊಂದಿಗೆ ಮನಸ್ಸಿನ ದುಃಖ ಹಂಚಿಕೊಂಡು ಹಗುರವಾಗಲಿದ್ದೀರಿ.

ಧನು: ಸಣ್ಣ ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಸುಧಾರಣೆ ಕಂಡುಬರುವುದು. ಬಂದ ಅವಕಾಶಗಳ ಸದ್ವಿನಿಯೋಗ ಮಾಡಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಹಿತಶತ್ರುಗಳ ವಂಚನೆ ಬೆಳಕಿಗೆ ಬರಲಿದೆ.

ಮಕರ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಮೇಲೆ ಹೆಚ್ಚಿನ ಕಾರ್ಯಭಾರವಿರಲಿದ್ದು, ಓಡಾಟ ನಡೆಸಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಆದರೆ ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಸೂಕ್ತ ಸಮಯವಲ್ಲ. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಕೌಟುಂಬಿಕವಾಗಿ ನೀವು ತೆಗೆದುಕೊಳ್ಳುವ ನಿರ್ಧಾರಗಳು ಭಿನ್ನಾಭಿಪ್ರಾಯ ಉಂಟುಮಾಡಬಹುದು. ತಾಳ್ಮೆ, ಸಂಯಮದಿಂದ ನಡೆದುಕೊಳ್ಳಬೇಕಾಗುತ್ತದೆ. ಅನವಶ್ಯಕ ವಿಚಾರಗಳಿಗೆ ಚಿಂತೆ ಮಾಡಬೇಡಿ. ವೃತ್ತಿರಂಗದಲ್ಲಿ ಪೂರಕ ವಾತಾವರಣವಿರಲಿದೆ.

ಮೀನ: ಆತುರದ ನಿರ್ಧಾರ ಕೈಗೊಂಡು ಕೈ ಸುಟ್ಟುಕೊಳ್ಳಬೇಡಿ. ಹಿರಿಯರ ಸಲಹೆಗಳನ್ನು ಪಾಲಿಸಿ. ಸಾಂಸಾರಿಕವಾಗಿ ಕಲಹ, ಭಿನ್ನಾಭಿಪ್ರಾಯಗಳು ದೂರವಾಗಲಿದೆ. ಆರ್ಥಿಕ ವಿಚಾರದಲ್ಲಿ ಸುಧಾರಣೆ ಕಂಡುಬರುವುದು. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶ ಸದ್ಯದಲ್ಲೇ ದೊರೆಯಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments