Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 12 ಮೇ 2020 (09:08 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ನಿರ್ಧಾರಗಳಲ್ಲಿ ಸ್ಥಿರತೆಯ ಕೊರತೆ ಕಂಡುಬರಲಿದೆ. ಮಾನಸಿಕವಾಗಿ ಚಿತ್ತ ಚಾಂಚಲ್ಯ ಕಾಡಲಿದೆ. ಉದ್ಯೋಗದ ಬಗ್ಗೆ ಚಿಂತೆಯಾಗಲಿದೆ. ಸಾಂಸಾರಿಕವಾಗಿ ಪರಿಸ್ಥಿತಿಯೊಂದಿಗೆ ಹೊಂದಾಣಿಕೆ ಮಾಡಲು ಕಲಿಯಬೇಕಿದೆ. ದುಂದು ವೆಚ್ಚ ಬೇಡ.

ವೃಷಭ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಹೆಚ್ಚಿನ ಧನ ಸಂಪಾದನೆಗೆ ನಾನಾ ಮಾರ್ಗಗಳನ್ನು ಯೋಚಿಸಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರುವುದು. ಕುಲದೇವರ ಪ್ರಾರ್ಥನೆಯಿಂದ ಇಷ್ಟಸಿದ್ಧಿ.

ಮಿಥುನ: ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ವೃತ್ತಿರಂಗದಲ್ಲಿ ಜಾಣತನ ಪ್ರದರ್ಶಿಸಿ ಬರುವಂತಹ ಸಮಸ್ಯೆಗಳಿಂದ ಪಾರಾಗುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ಕರ್ಕಟಕ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆಬರುವುದು. ವ್ಯಾಪಾರಿಗಳಿಗೆ ಲಾಭದ ದಾರಿಗಳು ಗೋಚರವಾಗಲಿದೆ. ಹಿತ ಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಉತ್ತಮಗೊಳ್ಳಲಿದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಉನ್ನತಿಯ ಯೋಗವಿದೆ. ಅವಕಾಶಗಳನ್ನು ಬಳಸಿಕೊಳ್ಳಿ.

 
ಕನ್ಯಾ: ವೃತ್ತಿರಂಗದಲ್ಲಿ ಹೆಚ್ಚಿನ ಕಾರ್ಯಭಾರ ಹೆಗಲಿಗೇರಲಿದೆ. ಜವಾಬ್ಧಾರಿಯುತವಾಗಿ ನಡೆದುಕೊಳ್ಳಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯ. ಸಂಗಾತಿಯ ಮನೋಭಿಲಾಷೆ ಈಡೇರಿಸಲಿದ್ದೀರಿ. ಕಿರು ಓಡಾಟ ನಡೆಸಬೇಕಾಗುತ್ತದೆ.

ತುಲಾ: ಬೇಡದ ವಿಚಾರಗಳ ಬಗ್ಗೆ ಚಿಂತೆ ಮಾಡಿಕೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಅಂದುಕೊಂಡ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ನೀವು ಅತಿಯಾಗಿ ನಂಬಿದ್ದವರಿಂದಲೇ ವಂಚನೆಗೊಳಗಾಗುವಿರಿ. ಪಾಲು ಬಂಡವಾಳ ವ್ಯವಹಾರದಲ್ಲಿ ಹೂಡಿಕೆ ಮಾಡಲು ಕೆಲವು ದಿನ ಕಾಯುವುದು ಉತ್ತಮ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಧನು: ಅವಿವಾಹಿತ ಕನ್ಯೆಯರಿಗೆ ಶೀಘ್ರದಲ್ಲೇ ಮನಸ್ಸಿಗೆ ಹಿಡಿಸಿದಂತಹ ವಿವಾಹ ಪ್ರಸ್ತಾಪ ಬರಲಿದೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗವಿದೆ. ಇಷ್ಟ ಮಿತ್ರರ ಜತೆ ಉತ್ತಮ ಸಮಯ ಕಳೆಯಲಿದ್ದೀರಿ. ಮೇಲಧಿಕಾರಿಗಳ ಸಲಹೆ ಸೂಚನೆ ಪಾಲಿಸಬೇಕಾಗುತ್ತದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನದ ಯೋಗವಿದೆ. ಚಿಂತೆಯಿಂದ ಕೆಲಸವಾಗದು. ತಾಳ್ಮೆ, ಸಮಾಧಾನದಿಂದ ಮುಂದುವರಿಯಿರಿ. ಸಂಗಾತಿಯ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿವೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.

ಕುಂಭ: ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಎಲ್ಲವೂ ಶುಭವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಬಹಳ ದಿನಗಳ ಬಳಿಕ ಮನಸ್ಸಿಗೆ ಇಷ್ಟವಾದವರ ಜತೆ ಮಾತನಾಡುವ ಯೋಗ. ದೇವರ ಪ್ರಾರ್ಥನೆ ಮರೆಯದಿರಿ.

ಮೀನ: ಮಹಿಳೆಯರಿಗೆ ಉದ್ಯೋಗದಲ್ಲಿ ಸ್ಥಾನ ಪಲ್ಲಟ ಭೀತಿ. ನೆರೆಹೊರೆಯವರಿಂದ ಕಷ್ಟದ ಸಮಯದಲ್ಲಿ ಸಹಾಯ ಸಿಗಲಿದೆ. ಹಿರಿಯರಿಂದ ಉಡುಗೊರೆ ನಿರೀಕ್ಷಿಸಬಹುದು. ಮಕ್ಕಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬರಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲಿ ದೀಪ ಹಚ್ಚಿದ ಮೇಲೆ ಅಪ್ಪಿತಪ್ಪಿಯೂ ಈ ತಪ್ಪನ್ನು ಮಾಡಬಾರದು