Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 15 ಮೇ 2020 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅಂದುಕೊಂಡಿದ್ದು ಯಾವುದೂ ನಡೆಯುತ್ತಿಲ್ಲ ಎಂಬ ಬೇಸರ ಮನಸ್ಸು ಘಾಸಿ ಮಾಡಲಿದೆ. ಕುಟುಂಬ ಸದಸ್ಯರ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ವ್ಯಾಪಾರಿಗಳಿಗೆ ತೀವ್ರ ಪೈಪೋಟಿ ಎದುರಾಗಲಿದೆ. ಉದ್ಯೋಗ ರಂಗದಲ್ಲಿ ಚೇತರಿಕೆ ಕಂಡುಬರುವುದು.

ವೃಷಭ: ಮಕ್ಕಳ ಸಂಬಂಧ ಕೆಲವು ನಿರ್ಧಾರ ಕೈಗೊಳ್ಳುವಾಗ ಗೊಂದಲ ಕಾಡಲಿದೆ. ಮಿತ್ರರೊಂದಿಗೆ ಮಾತುಕತೆ, ಭೇಟಿಯಿಂದ ಮನಸ್ಸು ಹಗುರವಾಗಲಿದೆ. ಹೊಸ ಸ್ಥಳಗಳಿಗೆ ಭೇಟಿಯಾಗುವ ಯೋಗವಿದೆ. ಸರಕಾರಿ ಉದ್ಯೋಗಿಗಳಿಗೆ ಬಿಡುವಿಲ್ಲದ ದುಡಿಮೆ ತಪ್ಪದು.

ಮಿಥುನ: ತಾತ್ಕಾಲಿಕ ಉದ್ಯೋಗಿಗಳು ಸ್ಥಿರ ಉದ್ಯೋಗಕ್ಕಾಗಿ ಪ್ರಯತ್ನಪಡಲಿದ್ದಾರೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಹೊಸ ಮಿತ್ರರ ಸಂಪಾದಿಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಎದುರು ಶತ್ರುಗಳಿಗೆ ಹಿನ್ನಡೆಯಾಗಲಿದೆ. ಆತ್ಮವಿಶ್ವಾಸವೇ ನಿಮ್ಮ ಬಲವಾಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬರಬಹುದು. ವ್ಯಾಪಾರದಲ್ಲಿ ಚೇತರಿಕೆ ಕಾಣಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ನಿರುದ್ಯೋಗಿಗಳಿಗೆ ಹಲವಾರು ಉದ್ಯೋಗಾವಕಾಶಗಳು ಒದಗಿಬರಲಿವೆ. ಸರಿಯಾದ ಮಾರ್ಗವನ್ನು ವಿವೇಚನೆಯಿಂದ ಆಯ್ದುಕೊಳ್ಳಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

 
ಕನ್ಯಾ: ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತೋರಿಬರಲಿದೆ. ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ನಿಮ್ಮ ಮೇಲೆ ಸಹೋದ್ಯೋಗಿಗಳಿಗೆ ಅಸಮಾಧಾನವುಂಟಾಗಬಹುದು. ತಾಳ್ಮೆಯಿರಲಿ. ಸಂಗಾತಿಯ ಮಾತಿಗೆ ಬೆಲೆಕೊಡಿ.

ತುಲಾ: ವೃತ್ತಿರಂಗದಲ್ಲಿ ಸ್ಥಗಿತಗೊಂಡ ಕೆಲಸಗಳಿಗೆ ಮರುಚಾಲನೆ ನೀಡಲಿದ್ದೀರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದರಿಂದ ಸಂತಸವಾಗಲಿದೆ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಿಗಲಿದೆ. ಕೌಟುಂಬಿಕವಾಗಿ ಹೊಣೆಗಾರಿಕೆ ಹೆಚ್ಚಲಿದೆ.

ವೃಶ್ಚಿಕ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಯಶಸ್ಸು ಕಂಡುಬರುವುದು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಮನೋಕಾಮನೆಗಳನ್ನು ಪೂರ್ತಿಗೊಳಿಸುವಿರಿ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ.

ಧನು: ಅನಿರೀಕ್ಷಿತವಾಗಿ ಪ್ರೀತಿ ಪಾತ್ರರನ್ನು ಭೇಟಿಯಾಗುವ ಸಂದರ್ಭ ಒದಗಿಬರಲಿದ್ದು, ಮನಸ್ಸಿಗೆ ಸಂತಸವಾಗಲಿದೆ. ನಿರೀಕ್ಷಿತ ಕೆಲಸಗಳಿಗೆ ಅಡೆತಡೆಗಳು ಬಂದರೂ ಅಂತಿಮವಾಗಿ ನಿಮ್ಮ ಜಯವನ್ನು ತಡೆಯಲು ಯಾರಿಂದಲೂ ಸಾಧ‍್ಯವಾಗದು.

ಮಕರ: ಧನಾಗಮನವಾಗುವುದರಿಂದ ನಿರೀಕ್ಷಿತ ಕೆಲಸಗಳನ್ನು ನಿಗದಿತ ಸಮಯದಲ್ಲೇ ಪೂರ್ತಿ ಮಾಡುವಿರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಾಣಲಿದ್ದೀರಿ. ನಯವಂಚಕರ ಬಗ್ಗೆ ಎಚ್ಚರಿಕೆಯಿರಲಿ. ಮನೆ ರಿಪೇರಿ ಕೆಲಸಗಳಿಗಾಗಿ ಧನವ್ಯಯ ಮಾಡಲಿದ್ದೀರಿ.

ಕುಂಭ: ನಿಮ್ಮ ಅಭಿವೃದ್ಧಿಯನ್ನು ಯಾರೂ ತಡೆಯಲಾಗದು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ರಾಜಕೀಯ ವರ್ಗದವರಿಗೆ ನಿರ್ಧಾರ ಕೈಗೊಳ್ಳುವಾಗ ಗೊಂದಲ ಕಾಡಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ.

ಮೀನ: ಚಿತ್ತ ಚಾಂಚಲ್ಯದಿಂದಾಗಿ ನಿರ್ಧಾರ ಕೈಗೊಳ್ಳುವಾಗ ಗೊಂದಲಗಳು ಕಾಡಲಿವೆ. ಉದ್ಯೋಗಿಗಳಿಗೆ ಉದ್ಯೊಗ ಬದಲಾವಣೆ ಸಾಧ‍್ಯತೆ. ಇತರರ ಚಾಡಿ ಮಾತುಗಳಿಗೆ ಕಿವಿ ಗೊಡಬೇಕಿಲ್ಲ. ಉತ್ತಮ ಧನಾಗಮನವಾಗಲಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments