Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 17 ಮೇ 2020 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಪುನರಾರಂಭದ ಚಿಂತೆ ಕಾಡುವುದು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಖರ್ಚು ಮಾಡುವುದು ಉತ್ತಮ. ದೈಹಿಕ ಆರೋಗ್ಯದ ಬಗ್ಗೆ ಇಲ್ಲದ ಚಿಂತೆ ಮಾಡಬೇಡಿ. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ.

ವೃಷಭ: ನಿಮ್ಮ ಕ್ರಿಯಾಶೀಲತೆಯಿಂದಲೇ ಬರುವಂತಹ ಸಮಸ್ಯೆಗಳನ್ನು ಎದುರಿಸುವಿರಿ. ಸಾಂಸಾರಿಕವಾಗಿ ಸಂಗಾತಿಯ ಮನೋಭಿಲಾಷೆ ಈಡೇರಿಸಲು ಖರ್ಚು ವೆಚ್ಚಗಳಾಗಬಹುದು. ಅವಿವಾಹಿತರಿಗೆ ಯೋಗ್ಯ ಸಂಬಂಧಕ್ಕಾಗಿ ಕೆಲವು ದಿನ ಕಾಯಬೇಕಾಗಬಹುದು.

ಮಿಥುನ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬರಬಹುದು. ಚಿಂತೆ ಬೇಡ. ಆರ್ಥಿಕವಾಗಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸುವುದು ಭವಿಷ್ಯದ ದೃಷ್ಟಿಯಿಂದ ಉತ್ತಮ. ವೃತ್ತಿರಂಗದಲ್ಲಿ ಅನಿರೀಕ್ಷಿತ ಬದಲಾವಣೆಗೆ ಮಾನಸಿಕವಾಗಿ ಸಿದ್ಧರಾಗಬೇಕಾಗುತ್ತದೆ.

ಕರ್ಕಟಕ: ಚಿಂತಿತ ಕೆಲಸಗಳನ್ನು ಪೂರ್ತಿ ಮಾಡುವುದಕ್ಕೆ ಕಠಿಣ ಶ್ರಮ ವಹಿಸಬೇಕಾಗುತ್ತದೆ. ಕಷ್ಟದ ಸಮಯದಲ್ಲಿ ಮಿತ್ರರ ಸಲಹೆಗಳು ಉಪಯೋಗಕ್ಕೆ ಬರಲಿವೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಸಿಂಹ: ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಂದ ಕೆಲಸ ಕಾರ್ಯಗಳಲ್ಲಿ ನಿರುತ್ಸಾಹ ಕಾಡಬಹುದು. ವೃತ್ತಿರಂಗದಲ್ಲಿ ಬದಲಾವಣೆ ಬಯಸುವಿರಿ. ಹೂಡಿಕೆ ವ್ಯವಹಾರದಲ್ಲಿ ತಕ್ಕಮಟ್ಟಿಗೆ ಲಾಭ ಪಡೆಯಲಿದ್ದೀರಿ. ದುಡುಕಿನ ವರ್ತನೆ, ಮಾತುಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

 
ಕನ್ಯಾ: ಸಾಂಸಾರಿಕವಾಗಿ ಸಂತೋಷದ ದಿನ ನಿಮ್ಮದಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದೆ. ಆದರೆ ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಚಿಂತಿಸಿ ಮುಂದಿನ ಹೆಜ್ಜೆಯಿಡಿ.

ತುಲಾ: ಕುಟುಂಬ ಸದಸ್ಯರ ಜತೆ ವಿನಾಕಾರಣ ವಾಗ್ವಾದ ನಡೆಸಿ ಮಾನಸಿಕ ನೆಮ್ಮದಿ ಕಳೆದುಕೊಳ್ಳಲಿದ್ದೀರಿ. ಅನವಶ್ಯಕ ಗೊಂದಲ ಮಾಡಿಕೊಳ್ಳಬೇಡಿ. ತಾಳ್ಮೆ, ಸಂಯಮ ಅಗತ್ಯ. ವ್ಯಾಪಾರಿಗಳಿಗೆ ಅಭಿವೃದ್ಧಿ ಕಂಡುಬರುವುದು. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ವೃಶ್ಚಿಕ: ಸಾಂಸಾರಿಕ ಸಮಸ್ಯೆಗಳಿಗೆ ಸಮಾಧಾನ ಚಿತ್ತದಿಂದ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ಅವಿವಾಹಿತರಿಗೆ ಶೀಘ್ರದಲ್ಲೇ ಯೋಗ್ಯ ಸಂಬಂಧ ಕೂಡಿಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಧನು: ವೈಯಕ್ತಿಕ ವಿಚಾರವನ್ನು ನೆರೆಹೊರೆಯವರೊಂದಿಗೆ ಹಂಚಿಕೊಳ್ಳಲು ಹೋಗಬೇಡಿ. ಇಂದು ಆರ್ಥಿಕ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಹಣ ಕಳೆದುಕೊಳ್ಳುವ ಭೀತಿಯಿದೆ. ಸಾಂಸಾರಿಕ ಸಾಮರಸ್ಯ ಕಾಪಾಡಿಕೊಳ್ಳಿ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆಯಿಂದಿರಬೇಕು.

ಮಕರ: ನಿಮ್ಮ ಸಮಾಧಾನಕರ ಮಾತಿನಿಂದಲೇ ಜತೆಗಿದ್ದವರಿಗೆ ಸಾಂತ್ವನ ಸಿಗಲಿದೆ. ಬೇರೆಯವರ ಕಷ್ಟಕ್ಕೆ ಸಹಾಯ ಮಾಡಲು ಹೋಗಿ ಅಪಾಯ ಮೈಮೇಲೆಳೆದುಕೊಳ್ಳಬೇಡಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ದೇವತಾ ಪ್ರಾರ್ಥನೆಯಿಂದ ಶುಭ.

ಕುಂಭ: ನಿಮ್ಮ ದುಡುಕು ಮಾತಿನಿಂದ ಸಂಗಾತಿಯ ಮನಸ್ಸಿಗೆ ನೋವಾಗಬಹುದು. ತಾಳ್ಮೆ, ಸಂಯಮದಿಂದ ಇರುವುದು ಮುಖ್ಯ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಮಹಿಳೆಯರಿಗೆ ಬಿಡುವಿಲ್ಲದ ದುಡಿಮೆಯಿಂದ ದೇಹ ಹೈರಾಣಾಗಬಹುದು.

ಮೀನ: ನಿಮ್ಮ ಮಾನಸಿಕ ತುಮುಲವನ್ನು ಯಾರಿಗೂ ಹೇಳಿಕೊಳ್ಳಲಾಗದೇ ಮನಸ್ಸಿನೊಳಗೇ ಕೊರಗು ಮೂಡುವುದು. ಮನಸ್ಸಿನ ನೆಮ್ಮದಿಗಾಗಿ ಕುಲದೇವರ ಪ್ರಾರ್ಥನೆ ಮಾಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪಾಲಿಗೆ ಬಂದ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮುಟ್ಟಾದಾಗ ಅಪ್ಪಿತಪ್ಪಿಯೂ ಈ ಮೂರು ವಸ್ತುಗಳನ್ನು ಮುಟ್ಟಬೇಡಿ