Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 18 ಮೇ 2020 (08:53 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದುರ್ಜನರ ಸಹವಾಸದಿಂದ ತೊಂದರೆಗೀಡಾಗುವಿರಿ. ಎಚ್ಚರಿಕೆಯ ಹೆಜ್ಜೆಯಿಡಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಸಲಹೆ, ಸೂಚನೆ ಪಾಲಿಸಬೇಕಾಗುತ್ತದೆ. ಹಳೆಯ ಮಿತ್ರರು, ಪ್ರೀತಿ ಪಾತ್ರರ ಭೇಟಿ ಮನಸ್ಸಿಗೆ ಸಂತೋಷ ನೀಡಲಿದೆ.

ವೃಷಭ: ಸಾಂಸಾರಿಕ ಸುಖ ಅನುಭವಿಸಲಿದ್ದೀರಿ. ನಿಮ್ಮ ಮಾತಿಗೆ ಪತ್ನಿಯ ಸಹಮತ ಸಿಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಮಿಥುನ: ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳಾದರೂ ಚಿಂತೆಯಾಗುವುದು. ಹೂಡಿಕೆ ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಉನ್ನತಾಧಿಕಾರದ ಯೋಗವಿದೆ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ನೂತನ ದಂಪತಿಗಳಿಗೆ ಹೊಂದಾಣಿಕೆ ಸಮಸ್ಯೆ ಎದುರಾಗಲಿದೆ. ಪ್ರೀತಿ ಪಾತ್ರರ ಅಗಲುವಿಕೆ ಮನಸ್ಸಿಗೆ ಬೇಸರವುಂಟು ಮಾಡಲಿದೆ. ಮೇಲ್ವರ್ಗದ ಅಧಿಕಾರಿಗಳಿಗೆ ಜವಾಬ್ಧಾರಿ ಹೆಚ್ಚಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಾಣಲಿದ್ದೀರಿ.

ಸಿಂಹ: ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗಗೊಂಡು ರದ್ದಾಂತವಾಗಬಹುದು. ಆರ್ಥಿಕವಾಗಿ ಸರಿಯಾದ ಲೆಕ್ಕಾಚಾರದೊಂದಿಗೆ ಹೆಜ್ಜೆಯಿಡದೇ ಇದ್ದರೆ ಮುಂದೆ ತೊಂದರೆ ಅನುಭವಿಸಬೇಕಾದೀತು.

 
ಕನ್ಯಾ: ಸಹೋದರರೊಂದಿಗೆ ವಿನಾಕಾರಣ ವಾಗ್ವಾದಕ್ಕಿಳಿಯಬೇಡಿ. ಕುಟುಂಬ ಸದಸ್ಯರೊಂದಿಗೆ ಹೊಸ ಯೋಜನೆಗಳ ಬಗ್ಗೆ ಚರ್ಚಿಸಿ ಮುನ್ನಡೆಯಿರಿ. ಸಾಲಗಾರರ ಕಾಟ ಕಾಡಲಿದೆ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ಅನವಶ್ಯಕವಾಗಿ ಕೂಡಿಟ್ಟ ಹಣ ಖರ್ಚಾಗಲಿದೆ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ಕೆಲಸ ಕಾರ್ಯಗಳಲ್ಲಿ ತೊಂದರೆ ಕಂಡುಬಂದರೂ ಅಂತಿಮ ಜಯ ನಿಮ್ಮದಾಗಬಹುದು. ಕಾರ್ಯನಿಮಿತ್ತ  ಕಿರು ಸಂಚಾರ ಮಾಡುವಿರಿ. 

ವೃಶ್ಚಿಕ: ಜಠರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಾಡಲಿವೆ. ನಿಮ್ಮ ನಾಲಿಗೆ ಚಪಲಕ್ಕೆ ಕಡಿವಾಣ ಹಾಕಬೇಕಾಗುತ್ತದೆ. ಬಹಳ ದಿನಗಳ ನಂತರ ಮಿತ್ರರ ಭೇಟಿ ಮನಸ್ಸಿಗೆ ಸಂತಸ ನೀಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಲಾಭವಾಗಲಿದೆ. ತಾಳ್ಮೆಯಿರಲಿ.

ಧನು: ಸರಕಾರಿ ಅಧಿಕಾರಿ ವರ್ಗದವರಿಗೆ ಜವಾಬ್ಧಾರಿ ಹೆಚ್ಚಲಿದೆ. ಕೆಲಸ ಕಾರ್ಯಗಳಿಗಾಗಿ ಓಡಾಟ ನಡೆಸುವುದರಿಂದ ದೇಹಾಯಾಸವಾಗಬಹುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಸಾಂಸಾರಿಕ ಸಮಸ್ಯೆಗಳನ್ನು ತಾಳ್ಮೆಯಿಂದ ಪರಿಹರಿಸಿಕೊಳ್ಳಬೇಕು.

ಮಕರ: ಪಾಲು ವ್ಯವಹಾರದಲ್ಲಿ ಭಿನ್ನಾಭಿಪ್ರಾಯಗಳಿಂದಾಗಿ ನಷ್ಟವಾಗಬಹುದು. ಹಿತ ಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಕೆಳ ಹಂತದ ನೌಕರರಿಗೆ ಅನೇಕ ತೊಂದರೆಗಳು ಎದುರಾಗಲಿವೆ. ಸರಿಯಾಗಿ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಮಾನಸಿಕ ಕಿರಿ ಕಿರಿ ಉಂಟಾಗಲಿದೆ. ತಾಳ್ಮೆ, ಸಂಯಮ ಅಗತ್ಯ. ಹಿರಿಯರ ಸಲಹೆ ಸೂಚನೆಗಳನ್ನು ಪಾಲಿಸಿದಲ್ಲಿ ಉತ್ತಮ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ. ಆರ್ಥಿಕ ವಿಚಾರದಲ್ಲಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ಮೀನ: ವೃತ್ತಿರಂಗದಲ್ಲಿ ನೀವು ಆತುರದಲ್ಲಿ ಕೈಗೊಳ್ಳುವ ನಿರ್ಧಾರಗಳು ಮುಂದೆ ನಿಮಗೇ ತೊಂದರೆ ನೀಡಬಹುದು. ವಿವೇಚನೆಯಿಂದ ಯೋಜನೆ ರೂಪಿಸಿ. ಸಾಮಾಜಿಕ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

ಮುಂದಿನ ಸುದ್ದಿ
Show comments