Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 26 ಮೇ 2020 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹೊಸ ಕೆಲಸಗಳಿಗೆ ಈಗ ಕೈಹಾಕುವುದರಿಂದ ಕೈ ಸುಟ್ಟುಕೊಳ್ಳಬೇಕಾದೀತು. ಒಳ್ಳೆಯ ದಿನಕ್ಕೆ ಕೆಲವು ದಿನ ಕಾಯುವುದು ಒಳಿತು. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಿ. ಮಾನಸಿಕ ಉದ್ವೇಗದಿಂದ ಸಂಬಂಧ ಹಾಳು ಮಾಡಿಕೊಳ್ಳಬೇಡಿ.

ವೃಷಭ: ವೈಯಕ್ತಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಕೃಷಿಕರಿಗೆ ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಕುಲದೇವರ ಪ್ರಾರ್ಥನೆ ಮಾಡಿದರೆ ಶುಭವಾಗುವುದು.

ಮಿಥುನ: ಅನಿರೀಕ್ಷಿತ ಖರ್ಚು ವೆಚ್ಚಗಳಿಂದ ಹಣಕಾಸಿನ ವಿಚಾರದಲ್ಲಿ ಸಂಕಷ್ಟಕ್ಕೀಡಾಗುವಿರಿ. ಮಾನಸಿಕವಾಗಿ ಒಂದು ರೀತಿಯ ಅಧೈರ್ಯ ಕಾಡುವುದು. ಸಂಗಾತಿಯ ಸಲಹೆಗೆ ಕಿವಿಗೊಡುವುದು ಉತ್ತಮ. ಕಾರ್ಯನಿಮಿತ್ತ ಸಂಚಾರ ಮಾಡಬೇಕಾಗಬಹುದು.

ಕರ್ಕಟಕ: ಅವಿವಾಹಿತರಿಗೆ ಮನಸ್ಸಿಗೆ ಹಿಡಿಸಿದ ಸಂಬಂಧಗಳು ಕೂಡಿಬರಲಿವೆ. ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಅವಕಾಶಗಳು ಒದಗಿಬರಲಿವೆ. ಸಾಂಸಾರಿಕವಾಗಿ ಸಂತಸದ ದಿನವಾಗಿರಲಿದೆ. ಕಾರ್ಮಿಕ ವರ್ಗಕ್ಕೆ ಉದ್ಯೋಗದಲ್ಲಿ ಮುನ್ನಡೆಯ ಯೋಗವಿದೆ.

ಸಿಂಹ: ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ಯೋಗ್ಯ ಜನರ ಸಹವಾಸದಿಂದ ಉತ್ತಮ ದಾರಿ ಕಂಡುಕೊಳ್ಳಲಿದ್ದೀರಿ. ಧಾರ್ಮಿಕವಾಗಿ ಭಕ್ತಿ ಹೆಚ್ಚುವುದು. ದಾನ, ಧರ್ಮಾಧಿಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

 
ಕನ್ಯಾ: ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಾಗದು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಅಸಹಕಾರ ಅಸಮಾಧಾನವುಂಟುಮಾಡಬಹುದು. ಸಂಗಾತಿಯ ಹಿತ ನುಡಿ ನೆಮ್ಮದಿ ನೀಡಲಿದೆ. ಮಕ್ಕಳಿಂದ ಸಂತೋಷ ಸಿಗುವುದು. ಚಿಂತೆ ಬೇಡ.

ತುಲಾ: ಕಾರ್ಯರಂಗದಲ್ಲಿ ಛಲ ಬಿಡದೇ ದುಡಿಯುವ ನಿಮ್ಮ ಗುಣದಿಂದ ಯಶಸ್ಸು ಸಿಗಲಿದೆ. ಹಿತಶತ್ರುಗಳ ಬಣ್ಣ ಬಯಲಾಗಲಿದೆ. ನಿರ್ಧಾರ ತೆಗೆದುಕೊಳ್ಳುವಾಗ ಹಿರಿಯರ ಸಲಹೆ ಪಡೆಯಿರಿ. ರಾಜಕೀಯ ವರ್ಗದವರಿಗೆ ಮುನ್ನಡೆಯ ದಿನಗಳಿವು.

ವೃಶ್ಚಿಕ: ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದ್ದು, ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಮಹಿಳೆಯರಿಗೆ ಚಿನ್ನಾಭರಣ ಖರೀದಿಯ ಯೋಗವಿದೆ. ಸಾಂಸಾರಿಕವಾಗಿ ಸಂತಸದ ದಿನ. ಹಾಗಿದ್ದರೂ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಕಾಡಲಿದೆ.

ಧನು: ಮನಸ್ಸಿಗೆ ಉಲ್ಲಾಸ ನೀಡುವ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಇಷ್ಟ ಮಿತ್ರರ ಭೇಟಿ, ಭೋಜನ ಮನಸ್ಸಿನ ಸಂತೋಷ ಹೆಚ್ಚಿಸಲಿದೆ. ವೈಯಕ್ತಿಕ ವಿಚಾರದಲ್ಲಿ ಬೇರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಹಿತ ಮಿತವಾಗಿ ಖರ್ಚು ಮಾಡಿದರೆ ಉತ್ತಮ.

ಮಕರ: ಹಿತಶತ್ರುಗಳಿಗೆ ಎಷ್ಟು ಬೆಲೆ ಕೊಡಬೇಕೋ ಅಷ್ಟೇ ಕೊಟ್ಟರೆ ಉತ್ತಮ. ವ್ಯಾಪಾರ, ವ್ಯವಹಾರದಲ್ಲಿ ನಿಮ್ಮ ಕ್ರಿಯಾಶೀಲತೆ ಉಪಯೋಗಕ್ಕೆ ಬರುವುದು. ಸಂಚಾರದಿಂದ ಕಾರ್ಯಸಿದ್ಧಿಯಾಗಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗುವ ಸಂಭವ, ಎಚ್ಚರಿಕೆಯಿರಲಿ.

ಕುಂಭ: ಸಂಗಾತಿಯ ಹಿತೋಪವಚನಗಳು ಪಥ್ಯವಾಗದೇ ಹೋಗಬಹುದು. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಆರ್ಥಿಕವಾಗಿ ಧನಾಗಮನದಂತೇ ಖರ್ಚೂ ಹೆಚ್ಚಲಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ದೇವತಾ ಪ್ರಾರ್ಥನೆ ಮಾಡಿ.

ಮೀನ: ಕಾರ್ಯರಂಗದಲ್ಲಿ ಬಿಡುವಿಲ್ಲದ ಕೆಲಸಗಳಿಂದ ದೇಹ ಹೈರಾಣಾಗುವುದು. ಹಾಗಿದ್ದರೂ ಕಾರ್ಯ ಪೂರ್ತಿಯಾದ ತೃಪ್ತಿ ಸಿಗಲಿದೆ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ಅನಿರೀಕ್ಷಿತವಾಗಿ ಹಳೆಯ ಮಿತ್ರನ ಭೇಟಿ ಮನಸ್ಸಿಗೆ ಸಂತೋಷ ಕೊಡಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲಿ ನಿಂತಿರುವ ಲಕ್ಷ್ಮೀದೇವಿ ಫೋಟೊ ಇಟ್ಟರೆ ಒಳ್ಳೆಯದೆ? ಕೆಟ್ಟದೆ?