Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 27 ಮೇ 2020 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನಸ್ಸು ಹಲವು ಆಕರ್ಷಣೆಗೊಳಗಾಗಲಿದೆ. ಮನೋನಿಗ್ರಹ ಮಾಡುವುದು ಅಗತ್ಯ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಆಪ್ತರೊಡನೆ ನಿಮ್ಮ ಮನಸ್ಸಿನ ದುಗುಡಗಳನ್ನು ಹಂಚಿಕೊಳ್ಳುವುದರಿಂದ ಸಮಾಧಾನ ಸಿಗಲಿದೆ.

ವೃಷಭ: ಯೋಗ್ಯ ವಯಸ್ಕರಿಗೆ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಿಂದ ಚಿಂತೆಯಾಗಲಿದೆ. ಸರಕಾರಿ ಉದ್ಯೋಗಿಗಳಿಗೆ ಸ್ಥಾನಪಲ್ಲಟ ಸಾಧ‍್ಯತೆಯಿದೆ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ. ಚಿಂತೆ ಬೇಡ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಬದಲಾವಣೆಗಳಿಗೆ ಹೊಂದಿಕೊಳ್ಳಲು ಮನಸ್ಸಿಗೆ ಕಷ್ಟವಾಗಬಹುದು. ಆದರೆ ಅನಿವಾರ್ಯಕ್ಕೆ ಒಗ್ಗಿಕೊಳ್ಳಲೇಬೇಕಾಗುತ್ತದೆ. ಖರ್ಚು ವೆಚ್ಚಗಳು ಮಿತಿಯಲ್ಲಿರಲಿ. ಹಿರಿಯರ ಸಮಕ್ಷಮದಲ್ಲಿ ವಿವಾದಗಳು ಬಗೆಹರಿಯಲಿವೆ.

ಕರ್ಕಟಕ: ವೈಯಕ್ತಿಕವಾಗಿ ಪರಾಮರ್ಶಿಸಿ ಮುನ್ನಡೆಯುವುದರಿಂದ ನಿಮ್ಮ ತಪ್ಪುಗಳನ್ನು ತಿದ್ದಿಕೊಳ‍್ಳಲು ಅವಕಾಶ ಸಿಗಲಿದೆ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಿಂಹ: ಹಣಕಾಸಿನ ವಿಚಾರದಲ್ಲಿ ಲೆಕ್ಕ ಪತ್ರಗಳ ಬಗ್ಗೆ ಎಚ್ಚರಿಕೆ ಅಗತ್ಯ.  ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ. ಉದ್ಯೋಗದಲ್ಲಿ ಮುನ್ನಡೆಯಿದ್ದರೂ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿರಲಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಕಿರಿ ಕಿರಿಯಿದ್ದರೂ ಸಂಗಾತಿಯಂದ ಸಾಂತ್ವನ ಸಿಗಲಿದೆ. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಿವು. ಹೊಸ ಯೋಜನೆಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ. ವಿದ್ಯಾರ್ಥಿಗಳಿಗೆ ಪ್ರಗತಿಗೆ ಪೂರಕ ವಾತಾವರಣ ಸಿಗಲಿದೆ.

ತುಲಾ: ಸಾಧನೆಯ ಛಲ ಹೆಚ್ಚಾಗಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಗೃಹ ಸಂಬಂಧೀ ಕೆಲಸಗಳಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಪಡೆಯಲಿದ್ದೀರಿ. ಹಂಚಿಕೊಂಡು ಬಾಳುವುದರಿಂದ ನೆಮ್ಮದಿ ಕಾಣುವಿರಿ.

ವೃಶ್ಚಿಕ: ಭೂಮಿ, ಮನೆ ಖರೀದಿ ಇತ್ಯಾದಿ ವ್ಯವಹಾರಗಳಿಗೆ ಕೈ ಹಾಕಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಮುನ್ನಡೆ ಕಾಣಲಿದ್ದೀರಿ. ವಿಶ್ವಾಸಘಾತುಕರ ಬಗ್ಗೆ ಎಚ್ಚರಿಕೆಯಿಂದಿರಿ. ಸಂಸಾರ ಸುಖ ಸಿಗಲಿದೆ.

ಧನು: ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಪರಿಸ್ಥಿತಿ ನಿಮ್ಮದಾಗಲಿದೆ. ನಿರುದ್ಯೋಗಿಗಳಿಗೆ ಬಂದ ಅವಕಾಶಗಳು ಸ್ವಲ್ಪದರಲ್ಲೇ ಕೈ ತಪ್ಪಿ ನಿರಾಸೆಯಾಗಬಹುದು. ಆದಾಯ ಗಳಿಕೆಗೆ ನಾನಾ ಮಾರ್ಗಗಳನ್ನು ಹುಡುಕಾಡುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ನಿಮ್ಮ ಅತಿಯಾದ ನಂಬಿಕೆಯೇ ಮುಳುವಾಗಲಿದೆ. ವ್ಯವಹಾರದಲ್ಲಿ ತೊಡಗಿಸಿಕೊಳ್ಳಲು ಕೆಲವು ದಿನ ಕಾಯುವುದು ಉತ್ತಮ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಬಹುದು. ಸಣ್ಣ ಪುಟ್ಟ ಸಮಸ್ಯೆಗಳನ್ನು ಅಲಕ್ಷಿಸಿದರೆ ಕಾರ್ಯಕ್ಷೇತ್ರದಲ್ಲಿ ಮುನ್ನಡೆ ಪಡೆಯಬಹುದು.

ಕುಂಭ: ಮಕ್ಕಳ ವಿಚಾರದಲ್ಲಿ ಹೊಸ ನಿರ್ಧಾರ ಕೈಗೊಳ‍್ಳಲಿದ್ದೀರಿ. ಸಂಗಾತಿಯ ಅಭಿಪ್ರಾಯಗಳಿಗೆ ಬೆಲೆಕೊಡಿ. ವೃತ್ತಿರಂಗದಲ್ಲಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣವಿರಲಿ. ಶಿಕ್ಷಕ ವೃತ್ತಿಯವರಿಗೆ ಮುನ್ನಡೆಯ ಯೋಗವಿದೆ.

ಮೀನ: ಬಾಕಿ ಹಣ ವಸೂಲಾತಿಯಾಗುವುದರಿಂದ ಆರ್ಥಿಕವಾಗಿ ಉತ್ತಮ ಸ್ಥಾನ ಮಾನ ಗಳಿಸಲಿದ್ದೀರಿ. ಕಾರ್ಯದೊತ್ತಡ ಅಧಿಕವಾಗಲಿದೆ. ಹಾಗಿದ್ದರೂ ನೀವು ಅಂದುಕೊಂಡಿದ್ದ ಕೆಲಸ ಪೂರೈಸಲಿದ್ದೀರಿ. ದೇಹಾರೋಗ್ಯದಲ್ಲಿ ಏರುಪೇರಾಗುವ ಸಂಭವ, ಎಚ್ಚರಿಕೆಯಿಂದಿರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments